AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾ ಹೆಗ್ಡೆ ವೃತ್ತಿ ಬದುಕಿಗೆ ವಿಲನ್ ಒಬ್ಬರಾ, ಇಬ್ಬರಾ? ನಟಿಯ ಹಿನ್ನಡೆಗೆ ಇವರೇ ಕಾರಣ?

ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ ಮಧ್ಯೆ ಭರ್ಜರಿ ಕಾಂಪಿಟೇಷನ್ ಇತ್ತು. ಪೂಜಾ ಹೆಗ್ಡೆಗೆ ಸಿಗೋ ಆಫರ್​ಗಳು ರಶ್ಮಿಕಾ ಪಾಲಾಗಿವೆ ಎನ್ನುವ ಮಾತಿದೆ. ಅ

ಪೂಜಾ ಹೆಗ್ಡೆ ವೃತ್ತಿ ಬದುಕಿಗೆ ವಿಲನ್ ಒಬ್ಬರಾ, ಇಬ್ಬರಾ? ನಟಿಯ ಹಿನ್ನಡೆಗೆ ಇವರೇ ಕಾರಣ?
ಪೂಜಾ, ಮೃಣಾಲ್, ಶ್ರೀಲೀಲಾ,ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jul 31, 2023 | 7:10 AM

Share

ನಟಿ ಪೂಜಾ ಹೆಗ್ಡೆ (Pooja Hegde) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಅಲ್ಲು ಅರ್ಜುನ್ (Allu Arjun) ಮೊದಲಾದವರ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಅವರು ಒಪ್ಪಿಕೊಂಡ ಎರಡು ಸಿನಿಮಾಗಳಿಂದ ಅವರು ಹೊರನಡೆದಿದ್ದಾರೆ. ಇದಕ್ಕೆ ಕಾರಣಗಳು ಇನ್ನೂ ಬಹಿರಂಗ ಆಗಿಲ್ಲ. ಪೂಜಾ ಹೆಗ್ಡೆಗೆ ಇತರ ಹೀರೋಯಿನ್​ಗಳೇ ವಿಲನ್ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು, ಪೂಜಾ ಹೆಗ್ಡೆ ಅವರ ನಡೆ ಕೂಡ ನಿಗೂಢವಾಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೊರಾಗಿದೆ.

ಪೂಜಾ ಹೆಗ್ಡೆ ಅವರು ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಲ್ಲಿ ನಟಿಸಿದ್ದರು. ಆದರೆ, ಆ ಚಿತ್ರದಿಂದ ಅವರು ಸೈಲೆಂಟ್ ಆಗಿ ಹೊರಬಂದರು. ಪವನ್ ಕಲ್ಯಾಣ್ ನಟನೆಯ ಸಿನಿಮಾದಲ್ಲೂ ಅವರು ನಟಿಸಬೇಕಿತ್ತು. ಆದರೆ, ಆ ಚಿತ್ರದಲ್ಲೂ ಅವರು ನಟಿಸುತ್ತಿಲ್ಲ. ಈ ಎರಡೂ ಚಿತ್ರಕ್ಕೆ ಈಗ ಶ್ರೀಲೀಲಾ ನಾಯಕಿ ಅನ್ನೋದು ಇಲ್ಲಿ ಗಮನಿಸಬೇಕಾದ ವಿಷಯ. ಶ್ರೀಲೀಲಾ ಆಫರ್​ನ ಕಿತ್ತುಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಪೂಜಾ ಹೆಗ್ಡೆ ಫ್ಯಾನ್ಸ್ ಮಾಡುತ್ತಿದ್ದಾರೆ.

ಗೋಪಿಚಂದ್ ಮಲಿನೇನಿ ಹಾಗೂ ರವಿ ತೇಜಾ ಅವರ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ ಆಗಬೇಕಿತ್ತು. ಆದರೆ, ಗೋಪಿಚಂದ್ ಅವರು ಪೂಜಾ ಬದಲು ಮೃಣಾಲ್ ಠಾಕೂರ್ ಅವರನ್ನು ಆಯ್ಕೆ ಮಾಡಿದ್ದಾರಂತೆ. ‘ಸೀತಾ ರಾಮಂ’ ಸಿನಿಮಾ ಯಶಸ್ಸಿನ ಬಳಿಕ ಮೃಣಾಲ್ ಯಶಸ್ಸು ಹೆಚ್ಚಿದೆ. ಈ ಕಾರಣಕ್ಕೆ ಅವರಿಗೆ ಮಣೆ ಹಾಕಲಾಗಿದೆ.

ಈ ಮೊದಲು ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ ಮಧ್ಯೆ ಭರ್ಜರಿ ಕಾಂಪಿಟೇಷನ್ ಇತ್ತು. ಪೂಜಾ ಹೆಗ್ಡೆಗೆ ಸಿಗೋ ಆಫರ್​ಗಳು ರಶ್ಮಿಕಾ ಪಾಲಾಗಿವೆ ಎನ್ನುವ ಮಾತಿದೆ. ಅವರು ಕೂಡ ಪೂಜಾ ವೇಗಕ್ಕೆ ಬ್ರೇಕ್ ಹಾಕಿದ್ದಾರೆ ಎಂಬ ಮಾತಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹರಡುತ್ತಿದ್ದ ನಕಲಿ ಸೆನ್ಸಾರ್ ಸದಸ್ಯನಿಗೆ ನೊಟೀಸ್ ಕಳಿಸಿದ ನಟಿ ಪೂಜಾ ಹೆಗ್ಡೆ

ಇತ್ತೀಚೆಗೆ ರಿಲೀಸ್ ಆದ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಟಿಸಿದ್ದರು. ಆದರೆ, ಸಿನಿಮಾ ಗೆಲ್ಲಲಿಲ್ಲ. ಇದಕ್ಕೂ ಮೊದಲು ರಿಲೀಸ್ ಆದ ಅವರ ನಟನೆಯ ಹಲವು ಸಿನಿಮಾಗಳು ಸೋತಿವೆ. ಇದು ಕೂಡ ಪೂಜಾ ಹೆಗ್ಡೆ ವೇಗಕ್ಕೆ ಬ್ರೇಕ್ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ