AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾ ಹೆಗ್ಡೆ ವೃತ್ತಿ ಬದುಕಿಗೆ ವಿಲನ್ ಒಬ್ಬರಾ, ಇಬ್ಬರಾ? ನಟಿಯ ಹಿನ್ನಡೆಗೆ ಇವರೇ ಕಾರಣ?

ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ ಮಧ್ಯೆ ಭರ್ಜರಿ ಕಾಂಪಿಟೇಷನ್ ಇತ್ತು. ಪೂಜಾ ಹೆಗ್ಡೆಗೆ ಸಿಗೋ ಆಫರ್​ಗಳು ರಶ್ಮಿಕಾ ಪಾಲಾಗಿವೆ ಎನ್ನುವ ಮಾತಿದೆ. ಅ

ಪೂಜಾ ಹೆಗ್ಡೆ ವೃತ್ತಿ ಬದುಕಿಗೆ ವಿಲನ್ ಒಬ್ಬರಾ, ಇಬ್ಬರಾ? ನಟಿಯ ಹಿನ್ನಡೆಗೆ ಇವರೇ ಕಾರಣ?
ಪೂಜಾ, ಮೃಣಾಲ್, ಶ್ರೀಲೀಲಾ,ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jul 31, 2023 | 7:10 AM

Share

ನಟಿ ಪೂಜಾ ಹೆಗ್ಡೆ (Pooja Hegde) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಅಲ್ಲು ಅರ್ಜುನ್ (Allu Arjun) ಮೊದಲಾದವರ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಅವರು ಒಪ್ಪಿಕೊಂಡ ಎರಡು ಸಿನಿಮಾಗಳಿಂದ ಅವರು ಹೊರನಡೆದಿದ್ದಾರೆ. ಇದಕ್ಕೆ ಕಾರಣಗಳು ಇನ್ನೂ ಬಹಿರಂಗ ಆಗಿಲ್ಲ. ಪೂಜಾ ಹೆಗ್ಡೆಗೆ ಇತರ ಹೀರೋಯಿನ್​ಗಳೇ ವಿಲನ್ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು, ಪೂಜಾ ಹೆಗ್ಡೆ ಅವರ ನಡೆ ಕೂಡ ನಿಗೂಢವಾಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೊರಾಗಿದೆ.

ಪೂಜಾ ಹೆಗ್ಡೆ ಅವರು ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಲ್ಲಿ ನಟಿಸಿದ್ದರು. ಆದರೆ, ಆ ಚಿತ್ರದಿಂದ ಅವರು ಸೈಲೆಂಟ್ ಆಗಿ ಹೊರಬಂದರು. ಪವನ್ ಕಲ್ಯಾಣ್ ನಟನೆಯ ಸಿನಿಮಾದಲ್ಲೂ ಅವರು ನಟಿಸಬೇಕಿತ್ತು. ಆದರೆ, ಆ ಚಿತ್ರದಲ್ಲೂ ಅವರು ನಟಿಸುತ್ತಿಲ್ಲ. ಈ ಎರಡೂ ಚಿತ್ರಕ್ಕೆ ಈಗ ಶ್ರೀಲೀಲಾ ನಾಯಕಿ ಅನ್ನೋದು ಇಲ್ಲಿ ಗಮನಿಸಬೇಕಾದ ವಿಷಯ. ಶ್ರೀಲೀಲಾ ಆಫರ್​ನ ಕಿತ್ತುಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಪೂಜಾ ಹೆಗ್ಡೆ ಫ್ಯಾನ್ಸ್ ಮಾಡುತ್ತಿದ್ದಾರೆ.

ಗೋಪಿಚಂದ್ ಮಲಿನೇನಿ ಹಾಗೂ ರವಿ ತೇಜಾ ಅವರ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ ಆಗಬೇಕಿತ್ತು. ಆದರೆ, ಗೋಪಿಚಂದ್ ಅವರು ಪೂಜಾ ಬದಲು ಮೃಣಾಲ್ ಠಾಕೂರ್ ಅವರನ್ನು ಆಯ್ಕೆ ಮಾಡಿದ್ದಾರಂತೆ. ‘ಸೀತಾ ರಾಮಂ’ ಸಿನಿಮಾ ಯಶಸ್ಸಿನ ಬಳಿಕ ಮೃಣಾಲ್ ಯಶಸ್ಸು ಹೆಚ್ಚಿದೆ. ಈ ಕಾರಣಕ್ಕೆ ಅವರಿಗೆ ಮಣೆ ಹಾಕಲಾಗಿದೆ.

ಈ ಮೊದಲು ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ ಮಧ್ಯೆ ಭರ್ಜರಿ ಕಾಂಪಿಟೇಷನ್ ಇತ್ತು. ಪೂಜಾ ಹೆಗ್ಡೆಗೆ ಸಿಗೋ ಆಫರ್​ಗಳು ರಶ್ಮಿಕಾ ಪಾಲಾಗಿವೆ ಎನ್ನುವ ಮಾತಿದೆ. ಅವರು ಕೂಡ ಪೂಜಾ ವೇಗಕ್ಕೆ ಬ್ರೇಕ್ ಹಾಕಿದ್ದಾರೆ ಎಂಬ ಮಾತಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹರಡುತ್ತಿದ್ದ ನಕಲಿ ಸೆನ್ಸಾರ್ ಸದಸ್ಯನಿಗೆ ನೊಟೀಸ್ ಕಳಿಸಿದ ನಟಿ ಪೂಜಾ ಹೆಗ್ಡೆ

ಇತ್ತೀಚೆಗೆ ರಿಲೀಸ್ ಆದ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಟಿಸಿದ್ದರು. ಆದರೆ, ಸಿನಿಮಾ ಗೆಲ್ಲಲಿಲ್ಲ. ಇದಕ್ಕೂ ಮೊದಲು ರಿಲೀಸ್ ಆದ ಅವರ ನಟನೆಯ ಹಲವು ಸಿನಿಮಾಗಳು ಸೋತಿವೆ. ಇದು ಕೂಡ ಪೂಜಾ ಹೆಗ್ಡೆ ವೇಗಕ್ಕೆ ಬ್ರೇಕ್ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ