ಪವನ್​ ಕಲ್ಯಾಣ್ ನಿರ್ಧಾರಕ್ಕೆ ಬೇಸರ; ಸಿನಿಮಾದಿಂದಲೇ ಹೊರ ನಡೆದ ಪೂಜಾ ಹೆಗ್ಡೆ

ಚಿತ್ರದ ಶೂಟಿಂಗ್ ವಿಳಂಬವಾಗುತ್ತಿರುವುದರಿಂದ ಪೂಜಾ ಹೆಗ್ಡೆ ಅವರಿಗೆ ಕಿರಿಕಿರಿ ಆಗಿದೆ. ಹೀಗಾಗಿ, ಅವರು ಚಿತ್ರವನ್ನು ಕೈಬಿಟ್ಟಿದ್ದಾರಂತೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಪವನ್​ ಕಲ್ಯಾಣ್ ನಿರ್ಧಾರಕ್ಕೆ ಬೇಸರ; ಸಿನಿಮಾದಿಂದಲೇ ಹೊರ ನಡೆದ ಪೂಜಾ ಹೆಗ್ಡೆ
ಪೂಜಾ-ಪವನ್​ ಕಲ್ಯಾಣ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 02, 2022 | 3:49 PM

ಕೆಲ ಹೀರೋ/ಹೀರೋಯಿನ್​ಗಳು ಕಥೆ ಅಥವಾ ಪಾತ್ರ ಇಷ್ಟವಾಗಿ ಸಿನಿಮಾ ಒಪ್ಪಿಕೊಳ್ಳುತ್ತಾರೆ. ಆದರೆ, ಅಂದುಕೊಂಡ ದಿನಾಂಕದಂದು ಸಿನಿಮಾ ಸೆಟ್ಟೇರುವುದಿಲ್ಲ. ಈ ಕಾರಣ ನೀಡಿ ಕಲಾವಿದರು ಚಿತ್ರದಿಂದ ಹೊರ ನಡೆದ ಸಾಕಷ್ಟು ಉದಾಹರಣೆ ಇದೆ. ಈಗ ಪೂಜಾ ಹೆಗ್ಡೆ (Pooja Hegde) ವಿಚಾರದಲ್ಲೂ ಹೀಗೆಯೇ ಆಗಿದೆ. ‘ಭವದೀಯುಡು ಭಗತ್​ ಸಿಂಗ್​’ ಚಿತ್ರದಲ್ಲಿ (Bhavadeeyudu Bhagat Singh) ಪವನ್​ ಕಲ್ಯಾಣ್​ಗೆ (Pawan Kalyan) ಜತೆಯಾಗಿ ಅವರು ನಟಿಸಬೇಕಿತ್ತು. ಆದರೆ, ಸಿನಿಮಾ ಪದೇಪದೇ ವಿಳಂಬ ಆಗುತ್ತಿರುವುದರಿಂದ ಪೂಜಾ ಹೆಗ್ಡೆ ಮುನಿಸಿಕೊಂಡಿದ್ದಾರೆ. ಅವರು ಸಿನಿಮಾದಿಂದಲೇ ಹೊರ ನಡೆದಿದ್ದಾರೆ ಎಂದು ವರದಿ ಆಗಿದೆ.

ಹರೀಶ್ ಶಂಕರ್ ಅವರು ಭವದೀಯುಡು ಭಗತ್​ ಸಿಂಗ್​’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಈ ಮೊದಲೇ ಸೆಟ್ಟೇರಬೇಕಿತ್ತು. ಆದರೆ, ಚಿತ್ರದ ಕೆಲಸಗಳು ತಡವಾದವು. ಪವನ್ ಕಲ್ಯಾಣ್ ಅವರು ಬೇರೆಬೇರೆ ಕಾರಣ ನೀಡಿ ಸಿನಿಮಾ ಸೆಟ್ಟೇರುವುದು ಮುಂದೂಡುತ್ತಲೇ ಬಂದಿದ್ದಾರೆ. ಈಗ ಪವನ್ ಕಲ್ಯಾಣ್ ಅವರು ‘ವಿನೋದಯಾ ಸೀತಂ​’ ಚಿತ್ರ ರಿಮೇಕ್ ಮಾಡುವುದರ ಮೇಲೆ ಆಸಕ್ತಿ ತೋರಿದ್ದಾರೆ. ಇದರಿಂದ ಹರೀಶ್ ಶಂಕರ್ ಚಿಂತೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ಹ್ಯಾಟ್ರಿಕ್ ಸೋಲಿನ ಬಗ್ಗೆ ಪೂಜಾ ಹೆಗ್ಡೆಗೆ ಇಲ್ಲ ಬೇಸರ; ಮೊದಲ ಬಾರಿಗೆ ಮೌನ ಮುರಿದ ನಟಿ

ಇದನ್ನೂ ಓದಿ
Image
ಹ್ಯಾಟ್ರಿಕ್ ಸೋಲಿನ ಬಗ್ಗೆ ಪೂಜಾ ಹೆಗ್ಡೆಗೆ ಇಲ್ಲ ಬೇಸರ; ಮೊದಲ ಬಾರಿಗೆ ಮೌನ ಮುರಿದ ನಟಿ
Image
ಗುಲಾಬಿ ಬಣ್ಣದ ಗೌನ್​ ಧರಿಸಿ ಕಾನ್​ ಚಿತ್ರೋತ್ಸವದಲ್ಲಿ ಮಿಂಚಿದ ನಟಿ ಪೂಜಾ ಹೆಗ್ಡೆ; ಫೋಟೋ ವೈರಲ್​
Image
Cannes 2022: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಚಿತ್ರರಂಗಕ್ಕೆ ಗೌರವ; ಮೆಚ್ಚುಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ
Image
ಎಷ್ಟೇ ಸಿನಿಮಾ ಸೋತ್ರೂ ಪೂಜಾ ಹೆಗ್ಡೆಗೆ ಸಿಕ್ತಿದೆ ಹೊಸ ಆಫರ್ಸ್​; ಈಗ ವಿಜಯ್​ ಜತೆ ‘ಜನ ಗಣ ಮನ’

‘ಭವದೀಯುಡು ಭಗತ್​ ಸಿಂಗ್​’ ಚಿತ್ರದ ಕೆಲಸಗಳು ಯಾವಾಗ ಆರಂಭವಾಗಲಿದೆ ಎಂಬ ಬಗ್ಗೆ ನಿರ್ದೇಶಕರಿಗೇ ಸರಿಯಾದ ಸ್ಪಷ್ಟತೆ ಇಲ್ಲ. ಈ ಕಾರಣಕ್ಕೆ ಪೂಜಾ ಹೆಗ್ಡೆ ಸಿನಿಮಾದಿಂದ ಹೊರ ನಡೆದಿದ್ದಾರೆ ಎಂದು ವರದಿ ಆಗಿದೆ. ಅನೇಕ ಚಿತ್ರಗಳ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾ ನಂಬಿಕೊಂಡು ಅವರು ಕೆಲ ಪ್ರಾಜೆಕ್ಟ್​​ಗಳನ್ನು ಕೈಬಿಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಈಗ ಈ ಚಿತ್ರದ ಶೂಟಿಂಗ್ ವಿಳಂಬವಾಗುತ್ತಿರುವುದರಿಂದ ಅವರಿಗೆ ಕಿರಿಕಿರಿ ಆಗಿದೆ. ಹೀಗಾಗಿ, ಅವರು ಚಿತ್ರವನ್ನು ಕೈಬಿಟ್ಟಿದ್ದಾರಂತೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಒಂದೊಮ್ಮೆ ಇದು ನಿಜವೇ ಆದಲ್ಲಿ ಮತ್ತೊಂದು ಹೀರೋಯಿನ್​ಅನ್ನು ಚಿತ್ರತಂಡ ಹುಡುಕಬೇಕಿದೆ.

ಇದನ್ನೂ ಓದಿ: ಸಾಂಪ್ರದಾಯಿಕ ಲುಕ್​ನಲ್ಲಿ ಫ್ಯಾನ್ಸ್​​ ಮನಗೆದ್ದ ಪೂಜಾ ಹೆಗ್ಡೆ

ಪೂಜಾ ಹೆಗ್ಡೆ ಅವರು ಮಹೇಶ್ ಬಾಬು-ತ್ರಿವಿಕ್ರಂ ಸಿನಿಮಾಗೆ ಆಯ್ಕೆ ಆಗಿದ್ದಾರೆ. ಸಲ್ಮಾನ್ ಖಾನ್ ಜತೆ ‘ಕಭಿ ಈದ್ ಕಭಿ ದಿವಾಲಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಎರಡು ಚಿತ್ರಗಳ ಕೆಲಸಗಳಿಗೆ ಅವರು ಹೈದರಾಬಾದ್ ಹಾಗೂ ಮುಂಬೈ ನಡುವೆ ಪ್ರಯಾಣ ಬೆಳೆಸಬೇಕಿದೆ. ಇನ್ನು, ಜ್ಯೂ.ಎನ್​ಟಿಆರ್ ಹಾಗೂ ಕೊರಟಾಲ ಶಿವ ಒಟ್ಟಾಗಿ ಕೆಲಸ ಮಾಡುತ್ತಿರುವ ಸಿನಿಮಾಗೆ ಇವರೇ ನಾಯಕಿ ಆಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:49 pm, Thu, 2 June 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ