AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಟೂರು ಖಾರಂ’ ಚಿತ್ರಕ್ಕೆ ಪೂಜಾ ಹೆಗ್ಡೆ ಬದಲು ಯುವ ನಟಿಗೆ ಮಣೆ ಹಾಕಿದ ಮಹೇಶ್ ಬಾಬು

Guntur Karam Movie: ‘ಗುಂಟೂರು ಖಾರಂ’ ಸಿನಿಮಾ 2024ರ ಜನವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಪೂಜಾ ಬದಲು ಮೀನಾಕ್ಷಿ ಚೌಧರಿ ಎಂಟ್ರಿ ಆಗಿದೆ.

‘ಗುಂಟೂರು ಖಾರಂ’ ಚಿತ್ರಕ್ಕೆ ಪೂಜಾ ಹೆಗ್ಡೆ ಬದಲು ಯುವ ನಟಿಗೆ ಮಣೆ ಹಾಕಿದ ಮಹೇಶ್ ಬಾಬು
ಮಹೇಶ್ ಬಾಬು-ಮೀನಾಕ್ಷಿ
ರಾಜೇಶ್ ದುಗ್ಗುಮನೆ
|

Updated on:Jun 27, 2023 | 12:18 PM

Share

‘ಸರ್ಕಾರು ವಾರಿ ಪಾಟ’ ಸಿನಿಮಾ (Sarkaru Vaari Paata) ಬಳಿಕ ಮಹೇಶ್ ಬಾಬು ಅವರು ತ್ರಿವಿಕ್ರಂ ಶ್ರೀನಿವಾಸ್ ಜೊತೆ ಕೈ ಜೋಡಿಸಿದರು. ಈ ಸಿನಿಮಾಗೆ ‘ಗುಂಟೂರು ಖಾರಂ’ ಎಂಬ ಶೀರ್ಷಿಕೆ ಇಡಲಾಗಿದ್ದು, ಚಿತ್ರದ ಕೆಲಸಗಳು ಸಾಕಷ್ಟು ವಿಳಂಬ ಆಗುತ್ತಲೇ ಇದೆ. ತಂದೆ-ತಾಯಿ ಕಳೆದುಕೊಂಡಿದ್ದರಿಂದ ಮಹೇಶ್ ಬಾಬುಗೆ ಹೆಚ್ಚು ನೋವಾಯಿತು. ಈಗ ಮತ್ತೆ ಸಿನಿಮಾ ಕೆಲಸ ಆರಂಭ ಆಗಬೇಕು ಎಂದುಕೊಂಡಿದ್ದಾಗಲೇ ಸಿನಿಮಾ ಹೀರೋಯಿನ್ ಬದಲಾಗಿದ್ದಾರೆ. ಪೂಜಾ ಹೆಗ್ಡೆ (Pooja Hegde)  ಇತ್ತೀಚೆಗೆ ಸಿನಿಮಾ ತಂಡದಿಂದ ಹೊರ ನಡೆದರು. ಈಗ ಚಿತ್ರಕ್ಕೆ ಮೀನಾಕ್ಷಿ ಚೌಧರಿ ಎಂಟ್ರಿ ಆಗಿದೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಗುಂಟೂರು ಖಾರಂ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಹೆಚ್ಚಿದೆ. ಮಹೇಶ್ ಬಾಬು ಅವರ ಲುಕ್ ಈಗಾಗಲೇ ವೈರಲ್ ಆಗಿದೆ. ಈ ಚಿತ್ರಕ್ಕೆ ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನ ಮಾಡುತ್ತಿದ್ದಾರೆ ಅನ್ನೋದು ವಿಶೇಷ. ಈ ಸಿನಿಮಾ 2024ರ ಜನವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಪೂಜಾ ಬದಲು ಮೀನಾಕ್ಷಿ ಚೌಧರಿ ಎಂಟ್ರಿ ಆಗಿದೆ.

2021ರಲ್ಲಿ ಮೀನಾಕ್ಷಿ ಚೌಧರಿ ಚಿತ್ರರಂಗಕ್ಕೆ ಕಾಲಿಟ್ಟರು. ಅದಕ್ಕೂ ಮೊದಲು ಅವರು ಕಿರುತೆರೆಯಲ್ಲಿ ಬ್ಯುಸಿ ಇದ್ದರು. ಕಳೆದ ಎರಡು ವರ್ಷಗಳಲ್ಲಿ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಹಿಟ್​: ದಿ ಸೆಕೆಂಡ್ ಕೇಸ್’ ಸಿನಿಮಾದಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಈಗ ಅವರಿಗೆ ‘ಗುಂಟೂರು ಖಾರಂ’ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ಈ ವಿಚಾರ ಅವರ ಖುಷಿ ಹೆಚ್ಚಿಸಿದೆ.

ಇದನ್ನೂ ಓದಿ: ಮಹೇಶ್ ಬಾಬು ಸಿನಿಮಾದಿಂದ ಪೂಜಾ ಹೆಗ್ಡೆ ಹೊರಕ್ಕೆ: ಶ್ರೀಲೀಲಾ ಕಾರಣವೇ?

ಪೂಜಾ ಹೆಗ್ಡೆ ಹಾಗೂ ಶ್ರೀಲೀಲಾ ‘ಗುಂಟೂರು ಖಾರಂ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ತಂಡದವರು ಘೋಷಣೆ ಮಾಡಿದ್ದರು. ಆದರೆ, ನಿರ್ದೇಶಕರಿಗೆ ಸ್ಕ್ರಿಪ್ಟ್​ನಲ್ಲಿ ಬದಲಾವಣೆ ಮಾಡುವ ಅನಿವಾರ್ಯತೆ ಎದುರಾಯಿತು. ಈ ಕಾರಣಕ್ಕೆ ಪೂಜಾ ಹೆಗ್ಡೆಗೆ ಡೇಟ್ಸ್ ಹೊಂದಿಸಲು ಸಾಧ್ಯವಾಗಿಲ್ಲ ಎಂದು ವರದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:17 pm, Tue, 27 June 23

Follow Us
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ