AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರುತ್ತಿದೆ ಶ್ರೀದೇವಿ ಜೀವನ ಆಧರಿತ ಸಿನಿಮಾ, ನಾಯಕಿ ಯಾರು?

Pooja Hegde: ನಟಿ ಶ್ರೀದೇವಿ ಭಾರತದ ಅತ್ಯಂತ ಜನಪ್ರಿಯ ಸಿನಿಮಾ ನಟಿಯರಲ್ಲಿ ಒಬ್ಬರು. ತೆರೆಯ ಮೇಲೆ ಹಾಗೂ ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡವರು ಶ್ರೀದೇವಿ. ಅವರ ಜೀವನವೂ ಸಿನಿಮಾ ರೀತಿಯೇ ವರ್ಣಮಯವಾದುದು. ಇದೇ ಕಾರಣಕ್ಕೆ ಶ್ರೀದೇವಿಯ ಜೀವನವನ್ನು ಸಿನಿಮಾ ಮಾಡಲಾಗುತ್ತಿದೆ. ಸಿನಿಮಾದ ನಾಯಕಿ ಯಾರು?

ಬರುತ್ತಿದೆ ಶ್ರೀದೇವಿ ಜೀವನ ಆಧರಿತ ಸಿನಿಮಾ, ನಾಯಕಿ ಯಾರು?
Sridevi
ಮಂಜುನಾಥ ಸಿ.
|

Updated on: Apr 16, 2025 | 11:17 AM

Share

ಭಾರತ ಚಿತ್ರರಂಗದ (Indian Cinema) ಕಂಡ ಅತ್ಯಂತ ಯಶಸ್ವಿ ನಾಯಕಿಯರಲ್ಲಿ ಶ್ರೀದೇವಿ ಸಹ ಒಬ್ಬರು. ಶ್ರೀದೇವಿ ತೆರೆಯ ಮೇಲೆ ಹಾಗೂ ತೆರೆಯ ಆಚೆ ಏರಿಳಿತ ಜೀವನ ಕಂಡವರು. ಅವರ ಸಾವು ಸಹ ಸಾಕಷ್ಟು ಅನುಮಾನ ಮತ್ತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇಂದಿಗೂ ಸಹ ಆಗಾಗ್ಗೆ ಸುದ್ದಿಯಲ್ಲಿರುವ, ಚರ್ಚೆಯಲ್ಲಿರುವ ನಟಿ ಶ್ರೀದೇವಿ. ಇದೀಗ ಶ್ರೀದೇವಿಯ ಜೀವನ ಬೆಳ್ಳಿತೆರೆಗೆ ಬರುತ್ತಿದೆ. ನಿರ್ದೇಶಕರೊಬ್ಬರು ಶ್ರೀದೇವಿ ಜೀವನವನ್ನು ಸಿನಿಮಾ ಮಾಡಲು ಮುಂದಾಗಿದ್ದಾರೆ. ಶ್ರೀದೇವಿ ಪಾತ್ರ ಮಾಡಲು ಹಲವು ನಟಿಯರು ತುದಿ ಗಾಲಮೇಲೆ ನಿಂತಿದ್ದಾರೆ.

ತೆಲುಗು, ತಮಿಳು ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ, ನಟಿಸುತ್ತಿರುವ ನಟಿ ಪೂಜಾ ಹೆಗ್ಡೆಗೆ ಶ್ರೀದೇವಿಯ ಬಯೋಪಿಕ್​ ಸಿನಿಮಾನಲ್ಲಿ ನಟಿಸುವ ಆಸೆ ಇದೆಯಂತೆ. ಈ ಬಗ್ಗೆ ಮಾತನಾಡಿರುವ ನಟಿ ಪೂಜಾ ಹೆಗ್ಡೆ, ‘ನಾನು ಈಗಾಗಲೇ ಶ್ರೀದೇವಿಯ ಸಿನಿಮಾದ ಹಾಡಿಗೆ ಡ್ಯಾನ್ಸ್ ಮಾಡಿದ್ದೇನೆ. ನಾನು ಅವರ ದೊಡ್ಡ ಅಭಿಮಾನಿ, ಶ್ರೀದೇವಿ ಪಾತ್ರದಲ್ಲಿ ನಟಿಸಲು ಅವಕಾಶ ಸಿಕ್ಕರೆ ಖಂಡಿತ ಮಿಸ್ ಮಾಡಿಕೊಳ್ಳುವುದಿಲ್ಲ’ ಎಂದಿದ್ದಾರೆ ನಟಿ.

‘ಬಯೋಪಿಕ್​ ಸಿನಿಮಾಗಳಲ್ಲಿ ಈವರೆಗೆ ನಾನು ನಟಿಸಿಲ್ಲ. ಆದರೆ ನಿಜ ಜೀವನದ ಹೀರೋ ಆಗಿರುವ ವ್ಯಕ್ತಿಗಳನ್ನು ತೆರೆಯ ಮೇಲೆ ಪ್ರತಿಬಿಂಬಿಸುವುದು ಆಸಕ್ತಿದಾಯಕ ಎನಿಸುತ್ತದೆ. ಅದರ ಜೊತೆಗೆ ಕ್ರೀಡಾ ಕತೆಗಳನ್ನು ಹೊಂದಿರುವ ಸಿನಿಮಾಗಳಲ್ಲಿಯೂ ನಟಿಸುವ ಆಸೆ ನನಗೆ ಇದೆ’ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ತೆಲುಗು ಪ್ರೇಕ್ಷಕರ ಬಗ್ಗೆಯೂ ಮಾತನಾಡಿರುವ ಪೂಜಾ ಹೆಗ್ಡೆ, ‘ತೆಲುಗು ಸಿನಿಮಾ ಪ್ರೇಕ್ಷಕರು ನನ್ನ ಹೃದಯಕ್ಕೆ ಬಹಳ ಹತ್ತಿರ’ ಎಂದಿದ್ದಾರೆ.

ಇದನ್ನೂ ಓದಿ:ಇಂಥ ಫೋಟೋ ಪೋಸ್ಟ್ ಮಾಡಿ ಟ್ರೋಲ್ ಆದ ಪೂಜಾ ಹೆಗ್ಡೆ

ಪೂಜಾ ಹೆಗ್ಡೆ ಕಳೆದ ಕೆಲ ವರ್ಷಗಳಿಂದ ಯಾವುದೇ ತೆಲುಗು ಸಿನಿಮಾನಲ್ಲಿ ನಟಿಸಿಲ್ಲ. ತೆಲುಗು ಚಿತ್ರರಂಗದಲ್ಲಿ ಅವರಿಗೆ ಬೇಡಿಕೆ ಕಡಿಮೆ ಆಗಿದೆ ಎನ್ನಲಾಗುತ್ತಿದೆ. ಪೂಜಾ ಹೆಗ್ಡೆ ಪ್ರಸ್ತುತ ತಮಿಳಿನ ‘ರೆಟ್ರೊ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾನಲ್ಲಿ ಸೂರ್ಯ ನಾಯಕನಾಗಿ ನಟಿಸುತ್ತಿದ್ದಾರೆ. ಇನ್ನು ಶ್ರೀದೇವಿ, ಬಯೋಪಿಕ್​ ಬಗ್ಗೆ ಕಳೆದ ಕೆಲ ವರ್ಷದಿಂದಲೂ ಸುದ್ದಿಗಳು ಹರಿದಾಡುತ್ತಲೇ ಇವೆ. ಶ್ರೀದೇವಿಯ ಪುತ್ರಿ ಜಾನ್ಹವಿ ಕಪೂರ್ ಅವರೇ ತಾಯಿ ಶ್ರೀದೇವಿಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಖಾತ್ರಿ ಇನ್ನೂ ವ್ಯಕ್ತವಾಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!