Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಜಗಳ ಆದ ಬಳಿಕ ನಟಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ? ಅಸಲಿ ವಿಷಯ ಏನು?

ಕ್ಲಬ್​ ಉದ್ಘಾಟನೆಗೆ ತೆರಳಿದ್ದ ವೇಳೆ ಪೂಜಾ ಹೆಗ್ಡೆ ಜಗಳ ಮಾಡಿಕೊಂಡರು ಎಂಬ ಸುದ್ದಿ ಹರಡಿತು. ಜಗಳದ ಬಳಿಕ ಅವರಿಗೆ ಕೊಲೆ ಬೆದರಿಕೆ ಹಾಕಲಾಯಿತು ಎಂಬ ವಿಷಯ ಕೇಳಿ ಅಭಿಮಾನಿಗಳು ಆಂತಕ ವ್ಯಕ್ತಪಡಿಸಿದರು. ‘ದಯವಿಟ್ಟು ನೀವು ಬೇಗ ಭಾರತಕ್ಕೆ ವಾಪಸ್​ ಬನ್ನಿ’ ಎಂದು ಅನೇಕರು ಕಮೆಂಟ್​ ಮಾಡಿದರು.

ದುಬೈನಲ್ಲಿ ಜಗಳ ಆದ ಬಳಿಕ ನಟಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ? ಅಸಲಿ ವಿಷಯ ಏನು?
ಪೂಜಾ ಹೆಗ್ಡೆ
Follow us
ಮದನ್​ ಕುಮಾರ್​
|

Updated on: Dec 13, 2023 | 4:31 PM

ನಟಿ ಪೂಜಾ ಹೆಗ್ಡೆ (Pooja Hegde) ಅವರಿಗೆ ದುಬೈನಲ್ಲಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಸುದ್ದಿ ಹರಡಿದೆ. ಖಾಸಗಿ ಕಾರ್ಯಕ್ರಮದ ಸಲುವಾಗಿ ದುಬೈಗೆ (Dubai) ತೆರಳಿದ್ದ ಅವರು ಅಲ್ಲಿ ಜಗಳ ಮಾಡಿಕೊಂಡಿದ್ದಾರೆ. ಆ ಘಟನೆ ಬಳಿಕ ಅವರಿಗೆ ಕೊಲೆ ಬೆದರಿಕೆ (Death Threat) ಹಾಕಲಾಗಿದೆ ಎಂದು ಪಾಪರಾಜಿ ಸೋಶಿಯಲ್​ ಮೀಡಿಯಾ ಖಾತೆಯೊಂದರಲ್ಲಿ ಪೋಸ್ಟ್​ ಮಾಡಲಾಗಿದೆ. ಇದನ್ನು ನೋಡಿ ಪೂಜಾ ಹೆಗ್ಡೆ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಈ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂದು ಮಾಧ್ಯಮಗಳಿಗೆ ನಟಿಯ ಆಪ್ತರು ಹೇಳಿಕೆ ನೀಡಿದ್ದಾರೆ. ಆ ಬಳಿಕ ಪೂಜಾ ಹೆಗ್ಡೆ ಫ್ಯಾನ್ಸ್​ ನಿಟ್ಟುಸಿರು ಬಿಟ್ಟಿದ್ದಾರೆ.

ಪೂಜಾ ಹೆಗ್ಡೆ ಅವರಿಗೆ ಭಾರತದಲ್ಲಿ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಲ್ಲಿ ಕೂಡ ಅಭಿಮಾನಿಗಳು ಇದ್ದಾರೆ. ಭಾರತದ ಸಿನಿಮಾಗಳು ದುಬೈನಲ್ಲಿ ಉತ್ತಮವಾಗಿ ಪ್ರದರ್ಶನ ಕಾಣುತ್ತವೆ. ಹಾಗಾಗಿ, ಇಂಡಿಯಾದ ಅನೇಕ ಸೆಲೆಬ್ರಿಟಿಗಳನ್ನು ಅಲ್ಲಿಗೆ ಅತಿಥಿಯಾಗಿ ಆಹ್ವಾನಿಸಲಾಗುತ್ತದೆ. ಕ್ಲಬ್​ವೊಂದರ ಉದ್ಘಾಟನೆ ಸಲುವಾಗಿ ಪೂಜಾ ಹೆಗ್ಡೆ ಅವರು ದುಬೈಗೆ ತೆರಳಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಹಸಿರು ಸೀರೆ ಧರಿಸಿ ಕಂಗೊಳಿಸಿದ ಕರಾವಳಿ ಚೆಲುವೆ ಪೂಜಾ ಹೆಗ್ಡೆ

ಕ್ಲಬ್​ ಉದ್ಘಾಟನೆಗೆ ತೆರಳಿದ್ದ ವೇಳೆ ಪೂಜಾ ಹೆಗ್ಡೆ ಜಗಳ ಮಾಡಿಕೊಂಡರು ಎಂಬ ಗಾಳಿ ಸುದ್ದಿ ಹರಡಿತು. ಜಗಳದ ಬಳಿಕ ಅವರಿಗೆ ಜೀವ ಬೆದರಿಕೆ ಹಾಕಲಾಯಿತು ಎಂಬ ವಿಷಯ ಕೇಳಿ ಅಭಿಮಾನಿಗಳು ಆಂತಕ ವ್ಯಕ್ತಪಡಿಸಿದರು. ‘ದಯವಿಟ್ಟು ನೀವು ಬೇಗ ಭಾರತಕ್ಕೆ ವಾಪಸ್​ ಬನ್ನಿ’ ಎಂದು ಅನೇಕರು ಕಮೆಂಟ್​ ಮಾಡಿದರು. ಆದರೆ ಕೊಲೆ ಬೆದರಿಕೆಯ ಸುದ್ದಿ ನಿಜವಲ್ಲ ಎಂಬುದು ನಂತರ ಬಹಿರಂಗ ಆಯಿತು.

ಇದನ್ನೂ ಓದಿ: Goldy Brar: ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇನೆ’: ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ

ಸಿನಿಮಾ ವಿಚಾರಕ್ಕೆ ಬರುವುದಾದರೆ, ಇತ್ತೀಚೆಗೆ ಪೂಜಾ ಹೆಗ್ಡೆ ಅವರಿಗೆ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಿಕ್ಕಿಲ್ಲ. ಅವರು ನಟಿಸಿದ ಸಿನಿಮಾಗಳು ಸಾಲು ಸಾಲು ಸೋಲು ಕಂಡಿವೆ. ಹಾಗಿದ್ದರೂ ಕೂಡ ಅವರಿಗೆ ಬರುವ ಅವಕಾಶಗಳು ಕಡಿಮೆ ಆಗಿಲ್ಲ. ಬಾಲಿವುಡ್​ ನಟ ಶಾಹಿದ್​ ಕಪೂರ್​ ಜೊತೆ ಪೂಜಾ ಹೆಗ್ಡೆ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. 2024ರ ಅಕ್ಟೋಬರ್​ ತಿಂಗಳಲ್ಲಿ ಆ ಸಿನಿಮಾ ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!