AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂನಂ ಪಾಂಡೆ ಅಂತಿಮ ಸಂಸ್ಕಾರ ನಡೆದಿದ್ದು ಎಲ್ಲಿ? ಇಲ್ಲಿದೆ ವಿವರ..

ನಟಿ ಪೂನಂ ಹಾಯಾಗಿ ಓಡಾಡಿಕೊಂಡೇ ಇದ್ದರು. ಅವರು ಕ್ಯಾನ್ಸರ್​ನಿಂದ ಮೃತಪಟ್ಟರು ಎಂದು ಅವರ ಇನ್​ಸ್ಟಾಗ್ರಾಮ್ ಮೂಲಕ ಪೋಸ್ಟ್ ಮಾಡಲಾಯಿತು. ಇದನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ. ಅನೇಕರು ಇದನ್ನು ನಂಬಲು ಹೋಗಿಲ್ಲ. ಆ ಬಳಿಕ ಅವರ ಮ್ಯಾನೇಜರ್ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ಪೂನಂ ಪಾಂಡೆ ಅಂತಿಮ ಸಂಸ್ಕಾರ ನಡೆದಿದ್ದು ಎಲ್ಲಿ? ಇಲ್ಲಿದೆ ವಿವರ..
ಪೂನಂ
ರಾಜೇಶ್ ದುಗ್ಗುಮನೆ
|

Updated on: Feb 03, 2024 | 6:59 AM

Share

ಬಾಲಿವುಡ್ ನಟಿ ಪೂನಂ ಪಾಂಡೆ (Poonam Pandey)  ಅವರು ಏಕಾಏಕಿ ಮೃತಪಟ್ಟಿದ್ದು ಅನೇಕರಿಗೆ ಶಾಕಿಂಗ್ ಎನಿಸಿದೆ. ಕೇವಲ 32ನೇ ವಯಸ್ಸಿಗೆ ಅವರು ಕೊನೆಯುಸಿರು ಎಳೆದರು. ಕಳೆದ ಕೆಲ ದಿನಗಳ ಹಿಂದಷ್ಟೇ ಹಾಯಾಗಿ ಸುತ್ತಾಡಿಕೊಂಡಿದ್ದ ಅವರು ಈಗ ಏಕಾಏಕಿ ಮೃತಪಟ್ಟರು ಎಂದರೆ ಯಾರಿಂದಲೂ ನಂಬಲು ಸಾಧ್ಯವಾಗುತ್ತಿಲ್ಲ. ಪೂನಂ ಪಾಂಡೆ ಅವರ ಅಂತ್ಯ ಸಂಸ್ಕಾರ ಅವರ ಹುಟ್ಟೂರಾದ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎನ್ನಲಾಗಿದೆ. ಶುಕ್ರವಾರ (ಫೆಬ್ರವರಿ 2) ರಾತ್ರಿ ವೇಳೆಗೆ ಅಂತ್ಯ ಸಂಸ್ಕಾರ ಪೂರ್ಣಗೊಂಡಿದೆ ಎಂದು ಅವರ ಮ್ಯಾನೇಜರ್ ಪಾರುಲ್ ಚಾವ್ಲಾ ತಿಳಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರಿದ್ದಾರೆ.

ಸುದ್ದಿ ಗೊತ್ತಾಗಿದ್ದು ಯಾವಾಗ?

ಪೂನಂ ಪಾಂಡೆ ಇತ್ತೀಚೆಗೆ ಹಾಯಾಗಿ ಓಡಾಡಿಕೊಂಡೇ ಇದ್ದರು. ಅವರು ಏಕಾಏಕಿ ಗರ್ಭಕಂಠ ಕ್ಯಾನ್ಸರ್​ನಿಂದ ಮೃತಪಟ್ಟರು ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಯಿತು. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಹಾಗೂ ಶಾಕ್ ಆಗಿದೆ. ಅನೇಕರು ಇದನ್ನು ನಂಬಲು ಹೋಗಿಲ್ಲ. ಆ ಬಳಿಕ ಅವರ ಮ್ಯಾನೇಜರ್ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ಪೂನಂ ಪಾಂಡೆ ಬಗೆಗಿನ ಟ್ವೀಟ್

ಬಂದಿದೆ ಡ್ರಗ್ಸ್ ವಾಸನೆ

ಹೃದಯಾಘಾತದಿಂದ ಏಕಾಏಕಿ ಮೃತಪಟ್ಟರು ಎಂದರೆ ನಂಬಬಹುದು. ಆದರೆ, ಕ್ಯಾನ್ಸರ್​ ಉಂಟಾದರೆ ಏಕಾಏಕಿ ಮೃತಪಡಲು ಸಾಧ್ಯವೇ ಇಲ್ಲ. ಕಳೆದ ಮೂರು ದಿನಗಳ ಹಿಂದಷ್ಟೇ ಅವರು ಖುಷಿ ಖುಷಿಯಿಂದ ಪೋಸ್ಟ್ ಹಾಕಿದ್ದರು. ಪಾರ್ಟಿ ಮಾಡಿದ್ದರು. ಇದಾದ ಬಳಿಕ ಅವರು ಮೃತಪಟ್ಟಿದ್ದಾರೆ. ಡ್ರಗ್ಸ್ ಓವರ್​ಡೋಸ್​ನಿಂದ ಈ ರೀತಿ ಆಗಿದೆ ಎನ್ನುವ ಮಾತು ಕೂಡ ಕೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಪೂನಂ ಪಾಂಡೆ ಸಾವಿನ ಕುರಿತು ಅನುಮಾನ: ಸಾವಿಗೆ ಮಾದಕ ವಸ್ತು ಕಾರಣ?

ನಟನೆ ಬಗ್ಗೆ

2013ರಲ್ಲಿ ‘ನಶಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು ಪೂನಂ. ವಿದ್ಯಾರ್ಥಿ ಜೊತೆ ಅಕ್ರಮ ಲೈಂಗಿಕ ಸಂಬಂಧ ಇಟ್ಟುಕೊಳ್ಳುವ ಶಿಕ್ಷಕಿಯ ಪಾತ್ರದಲ್ಲಿ ಅವರು ನಟಿಸಿದ್ದರು. ಸಿನಿಮಾಗಳಲ್ಲಿ ಹಲವು ಬೋಲ್ಡ್ ಪಾತ್ರಗಳನ್ನು ಮಾಡಿ ಸುದ್ದಿ ಆಗಿದ್ದರು. 2018ರಲ್ಲಿ ರಿಲೀಸ್ ಆದ ‘ಜರ್ನಿ ಆಫ್ ಕರ್ಮ’ ಅವರ ನಟನೆಯ ಕೊನೆಯ ಸಿನಿಮಾ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ