AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Poonam Pandey Death: ಪೂನಂ ಪಾಂಡೆ ನಿಧನ; ಕ್ಯಾನ್ಸರ್​ಗೆ ಬಲಿಯಾದ ಬಾಲಿವುಡ್ ನಟಿ

Poonam Pandey Death News: ಪೂನಂ ಶುಕ್ರವಾರ (ಫೆಬ್ರವರಿ 2) ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

Poonam Pandey Death: ಪೂನಂ ಪಾಂಡೆ ನಿಧನ; ಕ್ಯಾನ್ಸರ್​ಗೆ ಬಲಿಯಾದ ಬಾಲಿವುಡ್ ನಟಿ
ಪೂನಂ ಪಾಂಡೆ
TV9 Web
| Edited By: |

Updated on:Feb 02, 2024 | 12:24 PM

Share

ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ (Poonam Pandey) ಅವರು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ಅವರು ಮಾಡಿಕೊಂಡ ವಿವಾದಗಳು ಹಲವು. ಈಗ ಅವರು ಶುಕ್ರವಾರ (ಫೆಬ್ರವರಿ 2) ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು. ಇದು ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

ಪೂನಂ ಪಾಂಡೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ‘ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್​ನಿಂದ ನಮ್ಮ ಪ್ರೀತಿಯ ಪೂನಂ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ಪೂನಂ ಪಾಂಡೆ ಅವರು 2013ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ನಶಾ’ ಅವರ ನಟನೆಯ ಮೊದಲ ಸಿನಿಮಾ. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ತೆಲುಗು, ಬೋಜ್​ಪುರಿ ಸಿನಿಮಾಗಳಲ್ಲಿ ಪೂನಂ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆದ ‘ದಿ ಜರ್ನಿ ಆಫ್ ಕರ್ಮ’ ಸಿನಿಮಾದಲ್ಲಿ ಅವರು ನಟಿಸಿದ್ದರು. ಆ ಬಳಿಕ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿಲ್ಲ.

ಪೂನಂ ಪಾಂಡೆ ಪೋಸ್ಟ್​..

ಇದನ್ನೂ ಓದಿ: 3 ದಿನದ ಹಿಂದೆ ಆರಾಮಾಗಿದ್ದ ಪೂನಂ ಪಾಂಡೆ ಕ್ಯಾನ್ಸರ್​ನಿಂದ ನಿಧನ ಎಂದರೆ ನಂಬೋದು ಹೇಗೆ?

ಯಾಲಿಟಿ ಶೋಗಳಲ್ಲೂ ಪೂನಂ ಕಾಣಿಸಿಕೊಂಡಿದ್ದಾರೆ. 2022ರಲ್ಲಿ ಪ್ರಸಾರ ಕಂಡ ‘ಲಾಕ್​ಅಪ್​’ ಶೋನಲ್ಲಿ ಸ್ಪರ್ಧಿ ಆಗಿ ಪೂನಂ ಕಾಣಿಸಿಕೊಂಡಿದ್ದರು. ಅವರು ಏಳನೇ ಸ್ಥಾನದಲ್ಲಿ ಎಲಿಮಿನೇಟ್ ಆದರು. ಹಲವು ವಿವಾದಗಳನ್ನು ಕೂಡ ಅವರು ಮಾಡಿಕೊಂಡಿದ್ದರು. ಈಗ ಅವರು ನಿಧನ ಹೊಂದಿದರು ಎಂದರೆ ಅದನ್ನು ನಂಬೋಕೆ ಫ್ಯಾನ್ಸ್​ಗೆ ಆಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:57 am, Fri, 2 February 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ