AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Poonam Pandey Death: ಪೂನಂ ಪಾಂಡೆ ನಿಧನ; ಕ್ಯಾನ್ಸರ್​ಗೆ ಬಲಿಯಾದ ಬಾಲಿವುಡ್ ನಟಿ

Poonam Pandey Death News: ಪೂನಂ ಶುಕ್ರವಾರ (ಫೆಬ್ರವರಿ 2) ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

Poonam Pandey Death: ಪೂನಂ ಪಾಂಡೆ ನಿಧನ; ಕ್ಯಾನ್ಸರ್​ಗೆ ಬಲಿಯಾದ ಬಾಲಿವುಡ್ ನಟಿ
ಪೂನಂ ಪಾಂಡೆ
TV9 Web
| Edited By: |

Updated on:Feb 02, 2024 | 12:24 PM

Share

ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ (Poonam Pandey) ಅವರು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ಅವರು ಮಾಡಿಕೊಂಡ ವಿವಾದಗಳು ಹಲವು. ಈಗ ಅವರು ಶುಕ್ರವಾರ (ಫೆಬ್ರವರಿ 2) ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು. ಇದು ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

ಪೂನಂ ಪಾಂಡೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ‘ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್​ನಿಂದ ನಮ್ಮ ಪ್ರೀತಿಯ ಪೂನಂ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಲಾಗಿದೆ.

ಪೂನಂ ಪಾಂಡೆ ಅವರು 2013ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ನಶಾ’ ಅವರ ನಟನೆಯ ಮೊದಲ ಸಿನಿಮಾ. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ತೆಲುಗು, ಬೋಜ್​ಪುರಿ ಸಿನಿಮಾಗಳಲ್ಲಿ ಪೂನಂ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆದ ‘ದಿ ಜರ್ನಿ ಆಫ್ ಕರ್ಮ’ ಸಿನಿಮಾದಲ್ಲಿ ಅವರು ನಟಿಸಿದ್ದರು. ಆ ಬಳಿಕ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿಲ್ಲ.

ಪೂನಂ ಪಾಂಡೆ ಪೋಸ್ಟ್​..

ಇದನ್ನೂ ಓದಿ: 3 ದಿನದ ಹಿಂದೆ ಆರಾಮಾಗಿದ್ದ ಪೂನಂ ಪಾಂಡೆ ಕ್ಯಾನ್ಸರ್​ನಿಂದ ನಿಧನ ಎಂದರೆ ನಂಬೋದು ಹೇಗೆ?

ಯಾಲಿಟಿ ಶೋಗಳಲ್ಲೂ ಪೂನಂ ಕಾಣಿಸಿಕೊಂಡಿದ್ದಾರೆ. 2022ರಲ್ಲಿ ಪ್ರಸಾರ ಕಂಡ ‘ಲಾಕ್​ಅಪ್​’ ಶೋನಲ್ಲಿ ಸ್ಪರ್ಧಿ ಆಗಿ ಪೂನಂ ಕಾಣಿಸಿಕೊಂಡಿದ್ದರು. ಅವರು ಏಳನೇ ಸ್ಥಾನದಲ್ಲಿ ಎಲಿಮಿನೇಟ್ ಆದರು. ಹಲವು ವಿವಾದಗಳನ್ನು ಕೂಡ ಅವರು ಮಾಡಿಕೊಂಡಿದ್ದರು. ಈಗ ಅವರು ನಿಧನ ಹೊಂದಿದರು ಎಂದರೆ ಅದನ್ನು ನಂಬೋಕೆ ಫ್ಯಾನ್ಸ್​ಗೆ ಆಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:57 am, Fri, 2 February 24

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ