AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ; ಹಿಗ್ಗಾಮುಗ್ಗಾ ಬೈದ ಫ್ಯಾನ್ಸ್

‘ಪೂನಂ ಪಾಂಡೆ ಮೃತಪಟ್ಟಿದ್ದಾರೆ’ ಎಂದು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಲಾಯಿತು. ಅವರ ಮ್ಯಾನೇಜರ್ ಪಾರುಲ್ ಚಾವ್ಲಾ ಕೂಡ ಈ ವಿಚಾರ ಖಚಿತಪಡಿಸಿದ್ದರು. ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಅವರ ಸಾವಿಗೆ ಸಂತಾಪ ಸೂಚಿಸಿದರು.

‘ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ; ಹಿಗ್ಗಾಮುಗ್ಗಾ ಬೈದ ಫ್ಯಾನ್ಸ್
ಪೂನಂ ಪಾಂಡೆ
ರಾಜೇಶ್ ದುಗ್ಗುಮನೆ
|

Updated on:Feb 03, 2024 | 12:57 PM

Share

ಸದಾ ವಿವಾದಗಳ ಮೂಲಕವೇ ಸುದ್ದಿ ಆದವರು ನಟಿ ಪೂನಂ ಪಾಂಡೆ (Poonam Pandey). ಅವರು ಸತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಸ್ವತಃ ಪೂನಂ ಪಾಂಡೆ ಖಾತೆ ಮೂಲಕ ಸಾವಿನ ವಿಚಾರ ತಿಳಿಸಲಾಗಿತ್ತು. ಆದರೆ, ಪೂನಂ ಪಾಂಡೆ ಬದುಕಿದ್ದಾರೆ. ತಾವು ಸುಳ್ಳು ಹೇಳಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ. ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದೆ ಎಂದು ಅವರು ಹೇಳಿದ್ದಾರೆ. ಅವರಿಗೆ ಬಾಯಿಗೆ ಬಂದಂತೆ ಎಲ್ಲರೂ ಬೈಯ್ಯುತ್ತಿದ್ದಾರೆ.

‘ಪೂನಂ ಪಾಂಡೆ ಮೃತಪಟ್ಟಿದ್ದಾರೆ’ ಎಂದು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಲಾಯಿತು. ಅವರ ಮ್ಯಾನೇಜರ್ ಪಾರುಲ್ ಚಾವ್ಲಾ ಕೂಡ ಈ ವಿಚಾರ ಖಚಿತಪಡಿಸಿದ್ದರು. ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಅವರ ಸಾವಿಗೆ ಸಂತಾಪ ಸೂಚಿಸಿದರು. ಆದರೆ, ಇಂದು (ಫೆಬ್ರವರಿ 3) ಹೊಸ ವಿಡಿಯೋ ಹಂಚಿಕೊಂಡಿದ್ದಾರೆ ಪೂನಂ. ತಾವು ಬದುಕಿರುವುದಾಗಿ ಅವರು ಹೇಳಿದ್ದಾರೆ.

ಪೂನಂ ಪಾಂಡೆ ಪೋಸ್ಟ್​

ತಮ್ಮ ಸಾವಿನ ಬಗ್ಗೆ ತಾವೇ ಸುಳ್ಳು ಸುದ್ದಿ ಹಬ್ಬಿಸಿಕೊಳ್ಳಲು ಒಂದು ಕಾರಣವೂ ಇದೆಯಂತೆ. ಅದುವೇ ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದು!  ‘ನಾನು ಬದುಕಿದ್ದೇನೆ. ಗರ್ಭಕಂಠ ಕ್ಯಾನ್ಸರ್​ನಿಂದ ನಾನು ಸತ್ತಿಲ್ಲ. ಆದರೆ, ಈ ರೋಗವನ್ನು ಹೇಗೆ ಎದುರಿಸಬೇಕು ಎನ್ನುವ ಜ್ಞಾನ ಇಲ್ಲದೆ ಸಾವಿರಾರು ಮಹಿಳೆಯರು ಸಾಯುತ್ತಿದ್ದಾರೆ. ಇತರ ಕೆಲವು ಕ್ಯಾನ್ಸರ್‌ಗಳಿಗಿಂತ ಇದು ಭಿನ್ನವಾಗಿದೆ. ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಯಬಹುದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳಿಂದ ಇದು ಸಾಧ್ಯ. ಈ ಕಾಯಿಲೆಯಿಂದ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ’ ಎಂದು ಅವರು ಹೇಳಿದ್ದಾರೆ. DeathToCervicalCancer ಎನ್ನುವ ಹ್ಯಾಶ್ ಟ್ಯಾಗ್ ಹಾಕಿದ್ದಾರೆ.

ಪೂನಂ ಪಾಂಡೆ ಉದ್ದೇಶ ಉತ್ತಮವಾಗಿದೆ. ಆದರೆ, ಅವರು ಅದಕ್ಕೆ ತುಳಿದ ಮಾರ್ಗ ಸರಿ ಇಲ್ಲ ಎಂದು ಅನೇಕರು ಹೇಳಿದ್ದಾರೆ. ಅವರ ಸಾವಿನ ವಿಚಾರ ಸಾಕಷ್ಟು ಸುದ್ದಿ ಆಗಿತ್ತು. ಅನೇಕರು ದುಃಖ ಹೊರಹಾಕಿದ್ದರು. ಸಾವಿನ ವಿಚಾರದಲ್ಲಿ ಈ ರೀತಿ ಮಾಡಬಾರದು ಎಂದು ಅನೇಕರು ನಟಿಗೆ ಬುದ್ಧಿವಾದ ಹೇಳಿದ್ದಾರೆ. ಅವರಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ‘ಬಿಟ್ಟಿ ಪ್ರಚಾರ ಪಡೆಯಲು ಅವರು ಈ ರೀತಿ ಮಾಡಿದ್ದಾರೆ’ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಪೂನಂ ಪಾಂಡೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಮ್ಯಾನೇಜರ್? ಅಲ್ಲಿ ಆಗಿದ್ದೇ ಬೇರೆ..

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:40 pm, Sat, 3 February 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ