‘ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ; ಹಿಗ್ಗಾಮುಗ್ಗಾ ಬೈದ ಫ್ಯಾನ್ಸ್

‘ಪೂನಂ ಪಾಂಡೆ ಮೃತಪಟ್ಟಿದ್ದಾರೆ’ ಎಂದು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಲಾಯಿತು. ಅವರ ಮ್ಯಾನೇಜರ್ ಪಾರುಲ್ ಚಾವ್ಲಾ ಕೂಡ ಈ ವಿಚಾರ ಖಚಿತಪಡಿಸಿದ್ದರು. ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಅವರ ಸಾವಿಗೆ ಸಂತಾಪ ಸೂಚಿಸಿದರು.

‘ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ; ಹಿಗ್ಗಾಮುಗ್ಗಾ ಬೈದ ಫ್ಯಾನ್ಸ್
ಪೂನಂ ಪಾಂಡೆ
Follow us
|

Updated on:Feb 03, 2024 | 12:57 PM

ಸದಾ ವಿವಾದಗಳ ಮೂಲಕವೇ ಸುದ್ದಿ ಆದವರು ನಟಿ ಪೂನಂ ಪಾಂಡೆ (Poonam Pandey). ಅವರು ಸತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಸ್ವತಃ ಪೂನಂ ಪಾಂಡೆ ಖಾತೆ ಮೂಲಕ ಸಾವಿನ ವಿಚಾರ ತಿಳಿಸಲಾಗಿತ್ತು. ಆದರೆ, ಪೂನಂ ಪಾಂಡೆ ಬದುಕಿದ್ದಾರೆ. ತಾವು ಸುಳ್ಳು ಹೇಳಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ. ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದೆ ಎಂದು ಅವರು ಹೇಳಿದ್ದಾರೆ. ಅವರಿಗೆ ಬಾಯಿಗೆ ಬಂದಂತೆ ಎಲ್ಲರೂ ಬೈಯ್ಯುತ್ತಿದ್ದಾರೆ.

‘ಪೂನಂ ಪಾಂಡೆ ಮೃತಪಟ್ಟಿದ್ದಾರೆ’ ಎಂದು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಲಾಯಿತು. ಅವರ ಮ್ಯಾನೇಜರ್ ಪಾರುಲ್ ಚಾವ್ಲಾ ಕೂಡ ಈ ವಿಚಾರ ಖಚಿತಪಡಿಸಿದ್ದರು. ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಅವರ ಸಾವಿಗೆ ಸಂತಾಪ ಸೂಚಿಸಿದರು. ಆದರೆ, ಇಂದು (ಫೆಬ್ರವರಿ 3) ಹೊಸ ವಿಡಿಯೋ ಹಂಚಿಕೊಂಡಿದ್ದಾರೆ ಪೂನಂ. ತಾವು ಬದುಕಿರುವುದಾಗಿ ಅವರು ಹೇಳಿದ್ದಾರೆ.

ಪೂನಂ ಪಾಂಡೆ ಪೋಸ್ಟ್​

ತಮ್ಮ ಸಾವಿನ ಬಗ್ಗೆ ತಾವೇ ಸುಳ್ಳು ಸುದ್ದಿ ಹಬ್ಬಿಸಿಕೊಳ್ಳಲು ಒಂದು ಕಾರಣವೂ ಇದೆಯಂತೆ. ಅದುವೇ ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದು!  ‘ನಾನು ಬದುಕಿದ್ದೇನೆ. ಗರ್ಭಕಂಠ ಕ್ಯಾನ್ಸರ್​ನಿಂದ ನಾನು ಸತ್ತಿಲ್ಲ. ಆದರೆ, ಈ ರೋಗವನ್ನು ಹೇಗೆ ಎದುರಿಸಬೇಕು ಎನ್ನುವ ಜ್ಞಾನ ಇಲ್ಲದೆ ಸಾವಿರಾರು ಮಹಿಳೆಯರು ಸಾಯುತ್ತಿದ್ದಾರೆ. ಇತರ ಕೆಲವು ಕ್ಯಾನ್ಸರ್‌ಗಳಿಗಿಂತ ಇದು ಭಿನ್ನವಾಗಿದೆ. ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಯಬಹುದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳಿಂದ ಇದು ಸಾಧ್ಯ. ಈ ಕಾಯಿಲೆಯಿಂದ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ’ ಎಂದು ಅವರು ಹೇಳಿದ್ದಾರೆ. DeathToCervicalCancer ಎನ್ನುವ ಹ್ಯಾಶ್ ಟ್ಯಾಗ್ ಹಾಕಿದ್ದಾರೆ.

ಪೂನಂ ಪಾಂಡೆ ಉದ್ದೇಶ ಉತ್ತಮವಾಗಿದೆ. ಆದರೆ, ಅವರು ಅದಕ್ಕೆ ತುಳಿದ ಮಾರ್ಗ ಸರಿ ಇಲ್ಲ ಎಂದು ಅನೇಕರು ಹೇಳಿದ್ದಾರೆ. ಅವರ ಸಾವಿನ ವಿಚಾರ ಸಾಕಷ್ಟು ಸುದ್ದಿ ಆಗಿತ್ತು. ಅನೇಕರು ದುಃಖ ಹೊರಹಾಕಿದ್ದರು. ಸಾವಿನ ವಿಚಾರದಲ್ಲಿ ಈ ರೀತಿ ಮಾಡಬಾರದು ಎಂದು ಅನೇಕರು ನಟಿಗೆ ಬುದ್ಧಿವಾದ ಹೇಳಿದ್ದಾರೆ. ಅವರಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ‘ಬಿಟ್ಟಿ ಪ್ರಚಾರ ಪಡೆಯಲು ಅವರು ಈ ರೀತಿ ಮಾಡಿದ್ದಾರೆ’ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಪೂನಂ ಪಾಂಡೆ ಸಾವಿನ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಮ್ಯಾನೇಜರ್? ಅಲ್ಲಿ ಆಗಿದ್ದೇ ಬೇರೆ..

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:40 pm, Sat, 3 February 24

ತಾಜಾ ಸುದ್ದಿ
ಎಚ್ಚರಿಕೆ ನೀಡಿದರೂ ಮೀನು ಹಿಡಿಯಲು ನೀರಿಗೆ ಇಳಿದ ಮೀನುಗಾರರು
ಎಚ್ಚರಿಕೆ ನೀಡಿದರೂ ಮೀನು ಹಿಡಿಯಲು ನೀರಿಗೆ ಇಳಿದ ಮೀನುಗಾರರು
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಪರಾಧ ಹೆಚ್ಚಿವೆ: ಆರ್ ಅಶೋಕ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಪರಾಧ ಹೆಚ್ಚಿವೆ: ಆರ್ ಅಶೋಕ
ಇನ್ಫಿನಿಕ್ಸ್ ಲೇಟೆಸ್ಟ್ Infinix Buds Neo ಮತ್ತು Infinix XE27 ಬಿಡುಗಡೆ
ಇನ್ಫಿನಿಕ್ಸ್ ಲೇಟೆಸ್ಟ್ Infinix Buds Neo ಮತ್ತು Infinix XE27 ಬಿಡುಗಡೆ
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್
ವಿಐಪಿ ಖೈದಿಗಳಿಗೆ ‘ಸೇವೆ’ ಒದಗಿಸುವ ಪದ್ಧತಿ ಬಹಳ ವರ್ಷಗಳಿಂದ ನಡೆಯುತ್ತಿದೆ!
ವಿಐಪಿ ಖೈದಿಗಳಿಗೆ ‘ಸೇವೆ’ ಒದಗಿಸುವ ಪದ್ಧತಿ ಬಹಳ ವರ್ಷಗಳಿಂದ ನಡೆಯುತ್ತಿದೆ!
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ