AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mayilsamy: ತಮಿಳು ಚಿತ್ರರಂಗದ ಹಾಸ್ಯ ನಟ ಮಯಿಲ್​ಸಾಮಿ ಇನ್ನಿಲ್ಲ; ಕಂಬನಿ ಮಿಡಿದ ಕಮಲ್​ ಹಾಸನ್​

Comedy Actor Mayilsamy | Heart Attack: ಮಯಿಲ್​ಸಾಮಿ ಅವರಿಗೆ ಚಿತ್ರರಂಗದಲ್ಲಿ ಅಪಾರ ಅನುಭವ ಇತ್ತು. ನೂರಾರು ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಮನೆಮಾತಾಗಿದ್ದರು.

Mayilsamy: ತಮಿಳು ಚಿತ್ರರಂಗದ ಹಾಸ್ಯ ನಟ ಮಯಿಲ್​ಸಾಮಿ ಇನ್ನಿಲ್ಲ; ಕಂಬನಿ ಮಿಡಿದ ಕಮಲ್​ ಹಾಸನ್​
ಮಯಿಲ್​ಸಾಮಿ
ಮದನ್​ ಕುಮಾರ್​
|

Updated on:Feb 19, 2023 | 3:47 PM

Share

ತಮಿಳು ಚಿತ್ರರಂಗದ ಪಾಲಿಗೆ ಕಹಿ ಸುದ್ದಿ ಕೇಳಿಬಂದಿದೆ. ಕಾಲಿವುಡ್​ನಲ್ಲಿ ಜನಪ್ರಿಯರಾಗಿದ್ದ ಹಾಸ್ಯ ಕಲಾವಿದ ಮಯಿಲ್​ಸಾಮಿ (Comedy Actor Mayilsamy) ಅವರು ನಿಧನರಾಗಿದ್ದಾರೆ. ಭಾನುವಾರ (ಫೆ.19) ಬೆಳಗ್ಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದು ಬಂದಿದೆ. ಅವರ ಸಾವಿನ ಸುದ್ದಿಯನ್ನು ಕಲಾವಿದರ ಸಂಘವು ಖಚಿತಪಡಿಸಿದೆ. ಹೃದಯಾಘಾತದಿಂದ (Heart Attack) ಮಯಿಲ್​ಸಾಮಿ ಅವರು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಖ್ಯಾತ ಕಲಾವಿದನ ನಿಧನಕ್ಕೆ ತಮಿಳು ಚಿತ್ರರಂಗದ ಅನೇಕರು ಕಂಬಿನಿ ಮಿಡಿದಿದ್ದಾರೆ. ನಟ ಕಮಲ್​ ಹಾಸನ್​ (Kamal Haasan), ಆರ್​. ಶರತ್​ಕುಮಾರ್​, ಸಾಕ್ಷಿ ಅಗರ್​​ವಾಲ್​ ಮುಂತಾದವರು ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ಮಯಿಲ್​ಸಾಮಿ ಅವರಿಗೆ ಚಿತ್ರರಂಗದಲ್ಲಿ ಅಪಾರ ಅನುಭವ ಇತ್ತು. ನೂರಾರು ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಮನೆಮಾತಾಗಿದ್ದರು. ಅಜಿತ್​ ಕುಮಾರ್​, ಕಮಲ್​ ಹಾಸನ್​, ದಳಪತಿ ವಿಜಯ್​ ಸೇರಿಂದ ಅನೇಕ ಸ್ಟಾರ್​ ಹೀರೋಗಳ ಜೊತೆ ಅವರು ನಟಿಸಿದ್ದರು. ಕಿರುತೆರೆಯ ಅನೇಕ ಕಾರ್ಯಕ್ರಮಗಳಲ್ಲೂ ಅವರು ಭಾಗವಹಿಸಿದ್ದರು. ತಮಿಳು ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲಾಗುತ್ತಿದೆ.

ಇದನ್ನೂ ಓದಿ
Image
Rahul Koli Death: ಆಸ್ಕರ್​ಗೆ ಭಾರತದಿಂದ ಆಯ್ಕೆ ಆದ ‘ಚೆಲ್ಲೋ ಶೋ’ ಚಿತ್ರದ ಬಾಲ ನಟ ಕ್ಯಾನ್ಸರ್​ನಿಂದ ನಿಧನ
Image
Breaking News: ಖ್ಯಾತ ನಟ ಅರುಣ್​ ಬಾಲಿ ನಿಧನ; ಹಿರಿಯ ಕಲಾವಿದನ ಅಗಲಿಕೆಗೆ ಕಂಬನಿ ಮಿಡಿದ ಚಿತ್ರರಂಗ
Image
Raju Srivastava Death: ಹಾಸ್ಯ ನಟ ರಾಜು ಶ್ರೀವಾಸ್ತವ​ ನಿಧನ; ಕಡೆಗೂ ಫಲಿಸಲಿಲ್ಲ ಅಭಿಮಾನಿಗಳ ಪ್ರಾರ್ಥನೆ
Image
Pradeep Patwardhan: ಹೃದಯಾಘಾತದಿಂದ ನಟ ಪ್ರದೀಪ್​ ಪಟವರ್ಧನ್​ ನಿಧನ; ಸಂತಾಪ ಸೂಚಿಸಿದ ಮಹಾರಾಷ್ಟ್ರ ಸಿಎಂ

ಇದನ್ನೂ ಓದಿ: Heart Attack: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಗೆ ಮರದಲ್ಲೇ ಹೃದಯಾಘಾತ, ಸಾವು

ಮಯಿಲ್​ಸಾಮಿ ಬಗ್ಗೆ ಕಮಲ್​ ಹಾಸನ್​, ಶರತ್​ ಕುಮಾರ್​ ಟ್ವೀಟ್​:

‘ತಮ್ಮದೇ ಶೈಲಿಯಲ್ಲಿ ಹಾಸ್ಯ ನಟನೆ ಮಾಡುವುದರಲ್ಲಿ ನನ್ನ ಸ್ನೇಹಿತ ಮಯಿಲ್​ಸಾಮಿ ಅವರು ಯಶಸ್ವಿ ಆಗಿದ್ದರು. ಎಲ್ಲರಿಗೂ ಅವರು ಸಹಕಾರ ನೀಡುತ್ತಿದ್ದರು. ಅವರಿಗೆ ನನ್ನ ನಮನಗಳು’ ಎಂದು ಕಮಲ್​ ಹಾಸನ್​ ಅವರು ಟ್ವೀಟ್​ ಮಾಡಿದ್ದಾರೆ. ಅದೇ ರೀತಿ ಇನ್ನೋರ್ವ ಫೇಮಸ್ ನಟ ಆರ್​. ಶರತ್​ ಕುಮಾರ್​ ಕೂಡ ಸಂತಾಪ ಸೂಚಿಸಿದ್ದಾರೆ. ‘ಉತ್ತಮ ಸ್ನೇಹಿತ, ಒಳ್ಳೆಯ ಮನುಷ್ಯ, ಪರೋಪಕಾರಿ ಆಗಿದ್ದ ಮಯಿಲ್​ಸಾಮಿ ನಿಧನದ ಸುದ್ಧಿ ತಿಳಿದು ಆಘಾತ ಆಯಿತು. ಅವರ ಕುಟುಂಬದವರಿಗೆ, ಸ್ನೇಹಿತರಿಗೆ ಮತ್ತು ಚಿತ್ರರಂಗದ ಸಹೋದ್ಯೋಗಿಗಳಿಗೆ ನನ್ನ ಸಂತಾಪಗಳು’ ಎಂದು ಶರತ್​ ಕುಮಾರ್​ ಟ್ವೀಟ್​ ಮಾಡಿದ್ದಾರೆ.

ನಟಿ ಸಾಕ್ಷಿ ಅಗರ್​ವಾಲ್​ ಕೂಡ ಮಯಿಲ್​ಸಾಮಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ‘ಈ ಸುದ್ದಿ ಕೇಳಿ ಆಘಾತ ಆಯಿತು. ನಿಮ್ಮ ಹಾಸ್ಯ ಪ್ರಜ್ಞೆ ಮತ್ತು ಪಾಸಿಟಿವ್​ ಗುಣದಿಂದಾಗಿ ಶೂಟಿಂಗ್​ ಸ್ಥಳದಲ್ಲಿ ಯಾವಾಗಲೂ ನಗು ಮತ್ತು ಖುಷಿ ತುಂಬಿರುತ್ತಿತ್ತು. ಮಯಿಲ್​ಸಾಮಿ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಸಂತಾಪಗಳು’ ಎಂದು ಸಾಕ್ಷಿ ಅಗರ್​ವಾಲ್​ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: Anekal: ಕಾಲೇಜಿನಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

‘ವೀರಂ’, ‘ಕಾಂಚನ’, ‘ವಸೀಗಾರ’, ‘ಗಿರಿ’, ‘ಗಿಲ್ಲಿ’ ಮುಂತಾದ ಸಿನಿಮಾಗಳಲ್ಲಿ ಮಯಿಲ್​ಸಾಮಿ ನಟಿಸಿದ್ದರು. ತಮಿಳುನಾಡು ಸರ್ಕಾರ ನೀಡುವ ‘ಅತ್ಯುತ್ತಮ ಹಾಸ್ಯನಟ’ ರಾಜ್ಯ ಪ್ರಶಸ್ತಿ ಕೂಡ ಅವರಿಗೆ ಸಿಕ್ಕಿತ್ತು. ರಂಗಭೂಮಿ ಕಲಾವಿದನಾಗಿ, ಸ್ಟ್ಯಾಂಡಪ್​ ಕಾಮಿಡಿಯನ್​ ಆಗಿಯೂ ಅವರು ಗುರುತಿಸಿಕೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:47 pm, Sun, 19 February 23

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?