AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

GN Rangarajan Death: ಜಿಎನ್​ ರಂಗರಾಜನ್​ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂಪಾತ ಸೂಚಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಅನೇಕರು ಈ ವರ್ಷ ಸಾವಿನ ಮನೆಯ ದಾರಿ ಹಿಡಿದಿರುವುದು ಬೇಸರದ ಸಂಗತಿ.

ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು
ಜಿಎನ್​ ರಂಗರಾಜನ್​
ಮದನ್​ ಕುಮಾರ್​
| Edited By: |

Updated on: Jun 03, 2021 | 3:29 PM

Share

ತಮಿಳು ಚಿತ್ರರಂಗದಿಂದ ಮೇಲಿಂದ ಮೇಲೆ ಕಹಿ ಸುದ್ದಿಗಳು ಕೇಳಿಬರುತ್ತಿವೆ. ಕಾಲಿವುಡ್​ನ ಖ್ಯಾತ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನರಾಗಿದ್ದಾರೆ. ಹಲವು ಹಿಟ್​ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಅವರು ವಯೋಸಹಜ ಕಾಯಿಲೆಯಿಂದ ಗುರುವಾರ (ಜೂ.3) ಅಸುನೀಗಿದ್ದಾರೆ. ರಂಗರಾಜನ್​ ಅವರಿಗೆ 90 ವರ್ಷ ವಯಸ್ಸಾಗಿದೆ. ಅವರ ನಿಧನದ ಸುದ್ದಿಯನ್ನು ಪುತ್ರ ಜಿಎನ್​ಆರ್​ ಕುಮಾರವೇಲನ್​ ಖಚಿತಪಡಿಸಿದ್ದಾರೆ.

‘ನನ್ನ ತಂದೆ, ನನ್ನ ಗುರು, ನನ್ನ ಪ್ರೀತಿ​.. ಇಂದು ಬೆಳಗ್ಗೆ 8.45ಕ್ಕೆ ನಿಧನರಾದರು. ಅವರಿಗೆ ನಿಮ್ಮೆಲ್ಲರ ಪ್ರಾರ್ಥನೆ ಇರಲಿ’ ಎಂದು ಜಿಎನ್​ಆರ್​ ಕುಮಾರವೇಲನ್​ ಟ್ವೀಟ್​ ಮಾಡಿದ್ದಾರೆ. ರಂಗರಾಜನ್​ ಅವರ ಅಂತ್ಯಕ್ರಿಯೆಯು ಇಂದು ಚೆನ್ನೈನಲ್ಲಿ ನಡೆಯಲಿದೆ. ಕಮಲ್​ ಹಾಸನ್​, ಶ್ರೀದೇವಿ ನಟನೆಯ ‘ಮೀಂದುಂ ಕೋಕಿಲಾ’, ಕಲ್ಯಾಣರಾಮನ್​, ಮಹಾರಸನ್​ ಮುಂತಾದ ಸಿನಿಮಾಗಳಿಗೆ ರಂಗರಾಜನ್ ನಿರ್ದೇಶನ ಮಾಡಿದ್ದರು. ಕಳೆದ ವರ್ಷ ಡಿಸೆಂಬರ್​ನಲ್ಲಿ​ ಅವರು 90ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು.

ರಂಗರಾಜನ್​ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂಪಾತ ಸೂಚಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಅನೇಕರು ಈ ವರ್ಷ ಸಾವಿನ ಮನೆಯ ದಾರಿ ಹಿಡಿದಿರುವುದು ಬೇಸರದ ಸಂಗತಿ. ಖ್ಯಾತ ನಟ ವಿವೇಕ್​, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆ.ವಿ. ಆನಂದ್​, ಹಾಸ್ಯ ನಟ ಪಾಂಡು, ಅಸುರನ್​ ಖ್ಯಾತಿಯ ನಟ ನಿತೀಶ್​ ವೀರಾ ಸೇರಿದಂತೆ ಅನೇಕರನ್ನು ಇತ್ತೀಚಿನ ದಿನಗಳಲ್ಲಿ ಕಾಲಿವುಡ್​ ಕಳೆದುಕೊಂಡಿದೆ. ಈಗ ರಂಗರಾಜನ್​ ಅಸುನೀಗಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

Nitish Veera Death: ‘ಅಸುರನ್’​ ಚಿತ್ರದ ನಟ ನಿತೀಶ್​ ವೀರಾ ಕೊರೊನಾ ವೈರಸ್​ಗೆ ಬಲಿ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ