AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

GN Rangarajan Death: ಜಿಎನ್​ ರಂಗರಾಜನ್​ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂಪಾತ ಸೂಚಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಅನೇಕರು ಈ ವರ್ಷ ಸಾವಿನ ಮನೆಯ ದಾರಿ ಹಿಡಿದಿರುವುದು ಬೇಸರದ ಸಂಗತಿ.

ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು
ಜಿಎನ್​ ರಂಗರಾಜನ್​
ಮದನ್​ ಕುಮಾರ್​
| Edited By: |

Updated on: Jun 03, 2021 | 3:29 PM

Share

ತಮಿಳು ಚಿತ್ರರಂಗದಿಂದ ಮೇಲಿಂದ ಮೇಲೆ ಕಹಿ ಸುದ್ದಿಗಳು ಕೇಳಿಬರುತ್ತಿವೆ. ಕಾಲಿವುಡ್​ನ ಖ್ಯಾತ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನರಾಗಿದ್ದಾರೆ. ಹಲವು ಹಿಟ್​ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಅವರು ವಯೋಸಹಜ ಕಾಯಿಲೆಯಿಂದ ಗುರುವಾರ (ಜೂ.3) ಅಸುನೀಗಿದ್ದಾರೆ. ರಂಗರಾಜನ್​ ಅವರಿಗೆ 90 ವರ್ಷ ವಯಸ್ಸಾಗಿದೆ. ಅವರ ನಿಧನದ ಸುದ್ದಿಯನ್ನು ಪುತ್ರ ಜಿಎನ್​ಆರ್​ ಕುಮಾರವೇಲನ್​ ಖಚಿತಪಡಿಸಿದ್ದಾರೆ.

‘ನನ್ನ ತಂದೆ, ನನ್ನ ಗುರು, ನನ್ನ ಪ್ರೀತಿ​.. ಇಂದು ಬೆಳಗ್ಗೆ 8.45ಕ್ಕೆ ನಿಧನರಾದರು. ಅವರಿಗೆ ನಿಮ್ಮೆಲ್ಲರ ಪ್ರಾರ್ಥನೆ ಇರಲಿ’ ಎಂದು ಜಿಎನ್​ಆರ್​ ಕುಮಾರವೇಲನ್​ ಟ್ವೀಟ್​ ಮಾಡಿದ್ದಾರೆ. ರಂಗರಾಜನ್​ ಅವರ ಅಂತ್ಯಕ್ರಿಯೆಯು ಇಂದು ಚೆನ್ನೈನಲ್ಲಿ ನಡೆಯಲಿದೆ. ಕಮಲ್​ ಹಾಸನ್​, ಶ್ರೀದೇವಿ ನಟನೆಯ ‘ಮೀಂದುಂ ಕೋಕಿಲಾ’, ಕಲ್ಯಾಣರಾಮನ್​, ಮಹಾರಸನ್​ ಮುಂತಾದ ಸಿನಿಮಾಗಳಿಗೆ ರಂಗರಾಜನ್ ನಿರ್ದೇಶನ ಮಾಡಿದ್ದರು. ಕಳೆದ ವರ್ಷ ಡಿಸೆಂಬರ್​ನಲ್ಲಿ​ ಅವರು 90ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು.

ರಂಗರಾಜನ್​ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂಪಾತ ಸೂಚಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಅನೇಕರು ಈ ವರ್ಷ ಸಾವಿನ ಮನೆಯ ದಾರಿ ಹಿಡಿದಿರುವುದು ಬೇಸರದ ಸಂಗತಿ. ಖ್ಯಾತ ನಟ ವಿವೇಕ್​, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆ.ವಿ. ಆನಂದ್​, ಹಾಸ್ಯ ನಟ ಪಾಂಡು, ಅಸುರನ್​ ಖ್ಯಾತಿಯ ನಟ ನಿತೀಶ್​ ವೀರಾ ಸೇರಿದಂತೆ ಅನೇಕರನ್ನು ಇತ್ತೀಚಿನ ದಿನಗಳಲ್ಲಿ ಕಾಲಿವುಡ್​ ಕಳೆದುಕೊಂಡಿದೆ. ಈಗ ರಂಗರಾಜನ್​ ಅಸುನೀಗಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

Nitish Veera Death: ‘ಅಸುರನ್’​ ಚಿತ್ರದ ನಟ ನಿತೀಶ್​ ವೀರಾ ಕೊರೊನಾ ವೈರಸ್​ಗೆ ಬಲಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?