Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

GN Rangarajan Death: ಜಿಎನ್​ ರಂಗರಾಜನ್​ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂಪಾತ ಸೂಚಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಅನೇಕರು ಈ ವರ್ಷ ಸಾವಿನ ಮನೆಯ ದಾರಿ ಹಿಡಿದಿರುವುದು ಬೇಸರದ ಸಂಗತಿ.

ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು
ಜಿಎನ್​ ರಂಗರಾಜನ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Jun 03, 2021 | 3:29 PM

ತಮಿಳು ಚಿತ್ರರಂಗದಿಂದ ಮೇಲಿಂದ ಮೇಲೆ ಕಹಿ ಸುದ್ದಿಗಳು ಕೇಳಿಬರುತ್ತಿವೆ. ಕಾಲಿವುಡ್​ನ ಖ್ಯಾತ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನರಾಗಿದ್ದಾರೆ. ಹಲವು ಹಿಟ್​ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಅವರು ವಯೋಸಹಜ ಕಾಯಿಲೆಯಿಂದ ಗುರುವಾರ (ಜೂ.3) ಅಸುನೀಗಿದ್ದಾರೆ. ರಂಗರಾಜನ್​ ಅವರಿಗೆ 90 ವರ್ಷ ವಯಸ್ಸಾಗಿದೆ. ಅವರ ನಿಧನದ ಸುದ್ದಿಯನ್ನು ಪುತ್ರ ಜಿಎನ್​ಆರ್​ ಕುಮಾರವೇಲನ್​ ಖಚಿತಪಡಿಸಿದ್ದಾರೆ.

‘ನನ್ನ ತಂದೆ, ನನ್ನ ಗುರು, ನನ್ನ ಪ್ರೀತಿ​.. ಇಂದು ಬೆಳಗ್ಗೆ 8.45ಕ್ಕೆ ನಿಧನರಾದರು. ಅವರಿಗೆ ನಿಮ್ಮೆಲ್ಲರ ಪ್ರಾರ್ಥನೆ ಇರಲಿ’ ಎಂದು ಜಿಎನ್​ಆರ್​ ಕುಮಾರವೇಲನ್​ ಟ್ವೀಟ್​ ಮಾಡಿದ್ದಾರೆ. ರಂಗರಾಜನ್​ ಅವರ ಅಂತ್ಯಕ್ರಿಯೆಯು ಇಂದು ಚೆನ್ನೈನಲ್ಲಿ ನಡೆಯಲಿದೆ. ಕಮಲ್​ ಹಾಸನ್​, ಶ್ರೀದೇವಿ ನಟನೆಯ ‘ಮೀಂದುಂ ಕೋಕಿಲಾ’, ಕಲ್ಯಾಣರಾಮನ್​, ಮಹಾರಸನ್​ ಮುಂತಾದ ಸಿನಿಮಾಗಳಿಗೆ ರಂಗರಾಜನ್ ನಿರ್ದೇಶನ ಮಾಡಿದ್ದರು. ಕಳೆದ ವರ್ಷ ಡಿಸೆಂಬರ್​ನಲ್ಲಿ​ ಅವರು 90ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು.

ರಂಗರಾಜನ್​ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂಪಾತ ಸೂಚಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಅನೇಕರು ಈ ವರ್ಷ ಸಾವಿನ ಮನೆಯ ದಾರಿ ಹಿಡಿದಿರುವುದು ಬೇಸರದ ಸಂಗತಿ. ಖ್ಯಾತ ನಟ ವಿವೇಕ್​, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆ.ವಿ. ಆನಂದ್​, ಹಾಸ್ಯ ನಟ ಪಾಂಡು, ಅಸುರನ್​ ಖ್ಯಾತಿಯ ನಟ ನಿತೀಶ್​ ವೀರಾ ಸೇರಿದಂತೆ ಅನೇಕರನ್ನು ಇತ್ತೀಚಿನ ದಿನಗಳಲ್ಲಿ ಕಾಲಿವುಡ್​ ಕಳೆದುಕೊಂಡಿದೆ. ಈಗ ರಂಗರಾಜನ್​ ಅಸುನೀಗಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

Nitish Veera Death: ‘ಅಸುರನ್’​ ಚಿತ್ರದ ನಟ ನಿತೀಶ್​ ವೀರಾ ಕೊರೊನಾ ವೈರಸ್​ಗೆ ಬಲಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ