AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

GN Rangarajan Death: ಜಿಎನ್​ ರಂಗರಾಜನ್​ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂಪಾತ ಸೂಚಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಅನೇಕರು ಈ ವರ್ಷ ಸಾವಿನ ಮನೆಯ ದಾರಿ ಹಿಡಿದಿರುವುದು ಬೇಸರದ ಸಂಗತಿ.

ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು
ಜಿಎನ್​ ರಂಗರಾಜನ್​
ಮದನ್​ ಕುಮಾರ್​
| Edited By: |

Updated on: Jun 03, 2021 | 3:29 PM

Share

ತಮಿಳು ಚಿತ್ರರಂಗದಿಂದ ಮೇಲಿಂದ ಮೇಲೆ ಕಹಿ ಸುದ್ದಿಗಳು ಕೇಳಿಬರುತ್ತಿವೆ. ಕಾಲಿವುಡ್​ನ ಖ್ಯಾತ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನರಾಗಿದ್ದಾರೆ. ಹಲವು ಹಿಟ್​ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಅವರು ವಯೋಸಹಜ ಕಾಯಿಲೆಯಿಂದ ಗುರುವಾರ (ಜೂ.3) ಅಸುನೀಗಿದ್ದಾರೆ. ರಂಗರಾಜನ್​ ಅವರಿಗೆ 90 ವರ್ಷ ವಯಸ್ಸಾಗಿದೆ. ಅವರ ನಿಧನದ ಸುದ್ದಿಯನ್ನು ಪುತ್ರ ಜಿಎನ್​ಆರ್​ ಕುಮಾರವೇಲನ್​ ಖಚಿತಪಡಿಸಿದ್ದಾರೆ.

‘ನನ್ನ ತಂದೆ, ನನ್ನ ಗುರು, ನನ್ನ ಪ್ರೀತಿ​.. ಇಂದು ಬೆಳಗ್ಗೆ 8.45ಕ್ಕೆ ನಿಧನರಾದರು. ಅವರಿಗೆ ನಿಮ್ಮೆಲ್ಲರ ಪ್ರಾರ್ಥನೆ ಇರಲಿ’ ಎಂದು ಜಿಎನ್​ಆರ್​ ಕುಮಾರವೇಲನ್​ ಟ್ವೀಟ್​ ಮಾಡಿದ್ದಾರೆ. ರಂಗರಾಜನ್​ ಅವರ ಅಂತ್ಯಕ್ರಿಯೆಯು ಇಂದು ಚೆನ್ನೈನಲ್ಲಿ ನಡೆಯಲಿದೆ. ಕಮಲ್​ ಹಾಸನ್​, ಶ್ರೀದೇವಿ ನಟನೆಯ ‘ಮೀಂದುಂ ಕೋಕಿಲಾ’, ಕಲ್ಯಾಣರಾಮನ್​, ಮಹಾರಸನ್​ ಮುಂತಾದ ಸಿನಿಮಾಗಳಿಗೆ ರಂಗರಾಜನ್ ನಿರ್ದೇಶನ ಮಾಡಿದ್ದರು. ಕಳೆದ ವರ್ಷ ಡಿಸೆಂಬರ್​ನಲ್ಲಿ​ ಅವರು 90ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು.

ರಂಗರಾಜನ್​ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಸಂಪಾತ ಸೂಚಿಸುತ್ತಿದ್ದಾರೆ. ತಮಿಳು ಚಿತ್ರರಂಗದ ಅನೇಕರು ಈ ವರ್ಷ ಸಾವಿನ ಮನೆಯ ದಾರಿ ಹಿಡಿದಿರುವುದು ಬೇಸರದ ಸಂಗತಿ. ಖ್ಯಾತ ನಟ ವಿವೇಕ್​, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕೆ.ವಿ. ಆನಂದ್​, ಹಾಸ್ಯ ನಟ ಪಾಂಡು, ಅಸುರನ್​ ಖ್ಯಾತಿಯ ನಟ ನಿತೀಶ್​ ವೀರಾ ಸೇರಿದಂತೆ ಅನೇಕರನ್ನು ಇತ್ತೀಚಿನ ದಿನಗಳಲ್ಲಿ ಕಾಲಿವುಡ್​ ಕಳೆದುಕೊಂಡಿದೆ. ಈಗ ರಂಗರಾಜನ್​ ಅಸುನೀಗಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

Nitish Veera Death: ‘ಅಸುರನ್’​ ಚಿತ್ರದ ನಟ ನಿತೀಶ್​ ವೀರಾ ಕೊರೊನಾ ವೈರಸ್​ಗೆ ಬಲಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ