AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಸಿಕ್ಕ ಮೇಲೂ ಜೈಲು, ಪೋಸಾನಿಯ ಕಾಡುತ್ತಿರುವ ಪವನ್ ಕಲ್ಯಾಣ್

Pawan Kalyan: ಪವನ್ ಕಲ್ಯಾಣ್ ವಿರುದ್ಧ ನೀಚ ಹೇಳಿಕೆಗಳನ್ನು ನೀಡಿದ್ದ ಪೋಸಾನಿ ಕೃಷ್ಣ ಮುರಳಿಗೆ ಸಂಕಷ್ಟಗಳು ಕಡಿಮೆ ಆಗುತ್ತಲೇ ಇಲ್ಲ. ಫೆಬ್ರವರಿ 26 ರಂದು ಬಂಧನಕ್ಕೆ ಒಳಗಾಗಿದ್ದ ಪೋಸಾನಿ ಕೃಷ್ಣ ಮುರಳಿಗೆ ಜಾಮೀನು ಸಿಕ್ಕರೂ ಸಹ ಜೈಲಿನಿಂದ ಬಿಡುಗಡೆ ಆಗಲಾಗುತ್ತಿಲ್ಲ. ಪವನ್ ಕಲ್ಯಾಣ್ ಅನ್ನು ಎದುರು ಹಾಕಿಕೊಂಡಿದ್ದಕ್ಕೆ ಈ ಶಿಕ್ಷೆಯೇ?

ಜಾಮೀನು ಸಿಕ್ಕ ಮೇಲೂ ಜೈಲು, ಪೋಸಾನಿಯ ಕಾಡುತ್ತಿರುವ ಪವನ್ ಕಲ್ಯಾಣ್
Posani Pawan
ಮಂಜುನಾಥ ಸಿ.
|

Updated on: Mar 13, 2025 | 10:56 AM

Share

ವಾರದ ಹಿಂದೆ ಬಂಧನಕ್ಕೆ ಒಳಗಾಗಿದ್ದ ತೆಲುಗು ಚಿತ್ರರಂಗದ ಜನಪ್ರಿಯ ಪೋಷಕ ನಟ ಪೋಸಾನಿ ಕೃಷ್ಣ ಮುರಳಿ ಕರ್ನೂಲು ಜೈಲಿನಲ್ಲಿದ್ದರು. ಪೋಸಾನಿ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿ ಜಾಮೀನು ಪಡೆದಿದ್ದರು. ಇನ್ನೇನು ಪೋಸಾನಿ ಕೃಷ್ಣ ಮುರಳಿ ಜೈಲಿನಿಂದ ಬಿಡುಗಡೆ ಆಗುತ್ತಾರೆ ಎಂಬ ಸಮಯದಲ್ಲಿ ಪೊಲೀಸರು ಮತ್ತೆ ಕೆಲವು ಕೇಸುಗಳನ್ನು ದಾಖಲಿಸಿ ಜಾಮೀನಿನ ಮೇಲೆ ಪೋಸಾನಿ ಬಿಡುಗಡೆ ಆಗುವ ಮುಂಚೆಯೇ ಅವರನ್ನು ವಶಕ್ಕೆ ಪಡೆದು ಮತ್ತೆ ನ್ಯಾಯಾಲಯದಲ್ಲಿ ಹಾಜರು ಪಡಿಸಿದರು. ಇದರಿಂದಾಗಿ ಪೋಸಾನಿ, ಜಾಮೀನು ದೊರೆತರೂ ಇನ್ನೂ ಕೆಲ ದಿನಗಳ ಕಾಲ ಜೈಲಿನಲ್ಲೇ ಸಮಯ ಕಳೆಯಬೇಕಿದೆ.

ಈ ಹಿಂದೆ ಅನ್ನಮಯ್ಯ ಜಿಲ್ಲೆಯ ಪೊಲೀಸರು ಪೋಸಾನಿ ಕೃಷ್ಣ ಮುರಳಿಯನ್ನು ಜಾತಿ ನಿಂದನೆ, ಅವಾಚ್ಯ ಶಬ್ದಗಳಿಂದ ನಿಂದನೆ ಇನ್ನಿತರೆ ಪ್ರಕರಣಗಳಲ್ಲಿ ಫೆಬ್ರವರಿ 26 ರಂದು ಬಂಧಿಸಿದ್ದರು. ಪೋಸಾನಿ ವಿರುದ್ಧ ಹಲವು ಸೆಕ್ಷನ್​ಗಳ ಅಡಿಯಲ್ಲಿ ಕೇಸು ದಾಖಲಿಸಲಾಗಿತ್ತು. ಪೋಸಾನಿ ಕೃಷ್ಣ ಮುರಳಿ ಬಹುತೇಕ ಎಲ್ಲ ಪ್ರಕರಣಗಳಲ್ಲಿಯೂ ಜಾಮೀನು ಪಡೆದಿದ್ದರು. ಆದರೆ ಇನ್ನೇನು ಬಿಡುಗಡೆ ಆಗಬೇಕು ಎನ್ನುವಾಗ ಗುಂಟೂರು ಸಿಐಡಿ ಪೊಲೀಸರು ಹೊಸದಾಗಿ ಪೋಸಾನಿ ವಿರುದ್ಧ ದೂರು ಸಲ್ಲಿಸಿ ಅವರನ್ನು ವಶಕ್ಕೆ ಪಡೆದರು.

ಪೋಸಾನಿ ಕೃಷ್ಣ ಮುರಳಿಯನ್ನು ನಿನ್ನೆ ಗುಂಟೂರು ಪೊಲೀಸರು ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ಪೋಸಾನಿ ಕೃಷ್ಣ ಮುರಳಿ, ತಪ್ಪು ಮಾಡಿದ್ದರೆ ಶಿಕ್ಷೆ ನೀಡಿ ಆದರೆ ಹೀಗೆ ಚಿತ್ರಹಿಂಸೆ ಕೊಡಬೇಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ್ದರು. ಅಲ್ಲದೆ ತಮಗೆ ಎರಡೆರಡು ಶಸ್ತ್ರಚಿಕಿತ್ಸೆ ಆಗಿದ್ದು, ಹೀಗೆಲ್ಲ ಚಿತ್ರಹಿಂಸೆ ಕೊಟ್ಟರೆ ನನಗೆ ಆತ್ಮಹತ್ಯೆ ಒಂದೇ ಉಳಿದಿರುವ ದಾರಿ ಎಂದು ಅಂಗಲಾಚಿದರು. ಆದರೆ ಯಾವುದಕ್ಕೂ ಬಗ್ಗದ ನ್ಯಾಯಾಧೀಶರು ಪೋಸಾನಿಗೆ 12 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಇದನ್ನೂ ಓದಿ:ನಟ ಪೋಸಾನಿ ಕೃಷ್ಣ ಮುರಳಿ ಬಂಧನ, ಪವನ್ ಕಲ್ಯಾಣ್ ಕೈವಾಡ?

ಪೋಸಾನಿ ಕೃಷ್ಣ ಮುರಳಿ ವಿರುದ್ಧ ಬರೋಬ್ಬರಿ 17 ಕೇಸುಗಳನ್ನು ಪೊಲೀಸರು ದಾಖಲಿಸಿದ್ದಾರೆ. ಹೀಗೆ ನಟನೊಬ್ಬನ ವಿರುದ್ಧ ಒಂದರ ಹಿಂದೊಂದರಂತೆ ಕೇಸು ದಾಖಲಿಸಿ ಜೈಲಿನಲ್ಲಿ ಸಮಯ ಕಳೆಯುವಂತೆ ಮಾಡುವಲ್ಲಿ ರಾಜಕೀಯ ದ್ವೇಷ ಅಡಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ನಟ ಪೋಸಾನಿ ಕೃಷ್ಣ ಮುರಳಿ, ವೈಸಿಪಿ ಪಕ್ಷದ ಮುಖಂಡರೂ ಆಗಿದ್ದು, ಸುದ್ದಿಗೋಷ್ಠಿಯಲ್ಲಿ ಪವನ್ ಕಲ್ಯಾಣ್ ವಿರುದ್ಧ ತೀರ ಕೆಳದರ್ಜೆಯ ಪದಗಳನ್ನು ಬಳಸಿ ನಿಂದಿಸಿದ್ದರು. ಪವನ್ ಕಲ್ಯಾಣ್ ಪತ್ನಿಗೆ ಅಕ್ರಮ ಸಂಬಂಧ ಇದೆ ಎಂದೆಲ್ಲ ನೀಚ ಆರೋಪಗಳನ್ನು ಮಾಡಿದ್ದರು. ಇದೇ ಕಾರಣಕ್ಕೆ ಇದೀಗ ಪವನ್ ಕಲ್ಯಾಣ್, ದ್ವೇಷ ತೀರಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ