AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Masthan Death News: ಸುಮಾರು 2,000 ಚಿತ್ರಗಳಿಗೆ ಡಿಸೈನರ್ ಆಗಿ ಕಾರ್ಯನಿರ್ವಹಿಸಿದ್ದ ಖ್ಯಾತ ಚಿತ್ರ ವಿನ್ಯಾಸಕಾರ ಮಸ್ತಾನ್ ನಿಧನ

ಸುಮಾರು 2,000 ಚಿತ್ರಗಳಿಗೆ ಡಿಸೈನರ್ ಆಗಿ ಕಾರ್ಯನಿರ್ವಹಿಸಿದ್ದ ಹಾಗೂ ಮೂರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಮಸ್ತಾನ್ ಕೊರೊನಾ ವೈರಸ್ ತಗುಲಿ ನಿಧನರಾಗಿದ್ದಾರೆ.

Masthan Death News: ಸುಮಾರು 2,000 ಚಿತ್ರಗಳಿಗೆ ಡಿಸೈನರ್ ಆಗಿ ಕಾರ್ಯನಿರ್ವಹಿಸಿದ್ದ ಖ್ಯಾತ ಚಿತ್ರ ವಿನ್ಯಾಸಕಾರ ಮಸ್ತಾನ್ ನಿಧನ
ಸಿನಿಮಾ ನಿರ್ದೇಶನ ಮಸ್ತಾನ್
shruti hegde
|

Updated on: Apr 21, 2021 | 11:18 AM

Share

ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆ ಮಿತಿ ಮೀತಿ ಹರಡುತ್ತಿದೆ. ಜತೆಗೆ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ. ಇಂದು ಒಂದೇ ದಿನ ಭಾರತದಲ್ಲಿ 2.92 ಲಕ್ಷ ಹೊಸ ಕೊರೊನಾ ಕೇಸ್​ಗಳು ವರದಿ ಆಗಿವೆ. ಕೊರೊನಾ ವೈರಸ್​ನಿಂದ ಚಿತ್ರರಂಗ ಕೂಡ ಸಂಕಷ್ಟಕ್ಕೆ ತುತ್ತಾಗಿದೆ. ಈ ಮಧ್ಯೆ, ಸಾಕಷ್ಟು ಕಲಾವಿದರು ಹಾಗೂ ತಂತ್ರಜ್ಞರು ಕೊರೊನಾ ವೈರಸ್ ತಗುಲಿ ಮೃತಪಡುತ್ತಿದ್ದಾರೆ. 2,000 ಚಿತ್ರಗಳಿಗೆ ಡಿಸೈನರ್ ಆಗಿ ಕಾರ್ಯನಿರ್ವಹಿಸಿದ್ದ ಹಾಗೂ ಮೂರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಮಸ್ತಾನ್ ಕೊರೊನಾ ಸೋಂಕಿಗೆ ತುತ್ತಾಗಿ ನಿಧನರಾಗಿದ್ದಾರೆ.

ಮಸ್ತಾನ್ ಅವರಿಗೆ 63 ವರ್ಷ ವಯಸ್ಸಾಗಿತ್ತು. ಸುಮಾರು 42 ವರ್ಷಗಳಿಂದ ಚಿತ್ರರಂಗದಲ್ಲಿ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು. ಸಾವಿರಾರು ಕನ್ನಡ ಚಲನಚಿತ್ರಗಳ ಚಿತ್ರ ವಿನ್ಯಾಸಕಾರರಾಗಿ ಅವರು ಕಾರ್ಯ ನಿರ್ವಹಿಸಿದ್ದರು. ಅಲ್ಲದೇ ಶುಕ್ಲಾಂಬರದರಂ, ಕಲ್ಲೇಶಿ ಮಲ್ಲೇಶಿ, ಸಿತಾರ ಎಂಬ ಮೂರು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಸುಮಾರು 2,000 ಚಿತ್ರಗಳಿಗೆ ಡಿಸೈನರ್ ಆಗಿ ನಿರ್ವಹಿಸಿದ್ದು ಅವರ ಹೆಚ್ಚುಗಾರಿಕೆ. ಮಸ್ತಾನ್ ಅವರಿಗೆ ಇತ್ತೀಚೆಗೆ ಕೊರೊನಾ ವೈರಸ್ ಅಂಟಿತ್ತು. ಹೀಗಾಗಿ ಅವರನ್ನು ಹೆಸರುಘಟ್ಟ ಸಪ್ತಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಮಸ್ತಾನ್ ಅವರ ಅಗಲಿಕೆಗೆ ಕನ್ನಡ ಚಿತ್ರರಂಗ ಸಂತಾಪ ವ್ಯಕ್ತಪಡಿಸಿದೆ. ಕನ್ನಡ ಚಿತ್ರರಂಗದ ನಿರ್ದೇಶಕರು ಹಾಗೂ ಕಲಾವಿದರು ಅವರ ಆತ್ಮಕ್ಕೆ ಶಾಂತಿಕೋರಿದ್ದಾರೆ. ಕೊರೊನಾ ಎರಡನೇ ಅಲೆಗೆ ಅನೇಕ ಸೆಲೆಬ್ರಿಟಿಗಳು ಕೂಡ ನಿಧನರಾಗುತ್ತಿದ್ದಾರೆ. ಹಿರಿಯ ನಟ ಕಿಶೋರ್ ನಂದಲಸ್ಕರ್ ಅವರು ಮಂಗಳವಾರ (ಏ.20) ಮುಂಬೈನಲ್ಲಿ ಕೊನೆಯುಸಿರೆಳೆದಿದ್ದರು. ಹಿಂದಿ ಮತ್ತು ಮರಾಠಿ ಸಿನಿಮಾಗಳ ಮೂಲಕ ಕಿಶೋರ್ ನಂದಲಸ್ಕರ್ ಫೇಮಸ್ ಆಗಿದ್ದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಿಶೋರ್ ನಿಧನರಾದ ಸುದ್ದಿಯನ್ನು ಅವರು ಮೊಮ್ಮಗ ಖಚಿತಪಡಿಸಿದ್ದಾರೆ. ಕಳೆದ ಬುಧವಾರ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಏ.20ರಂದು ಮಧ್ಯಾಹ್ನ 12.30ರ ಸುಮಾರಿಗೆ ಇಹಲೋಕ ತ್ಯಜಿಸಿದ್ದರು.

ಇದನ್ನೂ ಓದಿ: ನಿಖಿಲ್​ ಕುಮಾರಸ್ವಾಮಿ ಬೆನ್ನಲ್ಲೇ ರೈಡರ್​ ಚಿತ್ರತಂಡಕ್ಕೂ ಕೊರೊನಾ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?