Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟನಿಗೆ ಇದೆಂಥಾ ಗತಿ? ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ ನೋಡಿ ಕಣ್ಣೀರಿಟ್ಟ ಫ್ಯಾನ್ಸ್​​​

ಕೆಲ ತಿಂಗಳ ಹಿಂದೆ ಶ್ರೀನಿವಾಸನ್​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಕ್ತದ ಒತ್ತಡದಲ್ಲಿ ಏರುಪೇರಾಗಿದ್ದು ಇದಕ್ಕೆ ಪ್ರಮುಖ ಕಾರಣವಾಗಿತ್ತು.

ಖ್ಯಾತ ನಟನಿಗೆ ಇದೆಂಥಾ ಗತಿ? ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ ನೋಡಿ ಕಣ್ಣೀರಿಟ್ಟ ಫ್ಯಾನ್ಸ್​​​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 15, 2021 | 3:54 PM

ತಮಿಳಿನ ಖ್ಯಾತ ಹಾಸ್ಯ ನಟ ‘ಪವರ್​ಸ್ಟಾರ್’​ ಶ್ರೀನಿವಾಸನ್ (Powerstar Srinivasan )​​ ಅವರು ಆಸ್ಪತ್ರೆಗೆ ದಾಖಲಾಗಿ ಕೆಲ ತಿಂಗಳು ಕಳೆದಿದೆ. ಇತ್ತೀಚೆಗೆ ಅವರಿಗೆ ಆರೋಗ್ಯ ತುಂಬಾನೇ ಕೈಕೊಟ್ಟಿದೆ. 2010ರಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿರುವ ಶ್ರೀನಿವಾಸನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ದೇಹ ಸಂಪೂರ್ಣ ಕುಗ್ಗಿ ಹೋಗಿದೆ. ಮತ್ತೊಬ್ಬರ ಸಹಾಯವಿಲ್ಲದೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆರಳಲೂ ಆಗದೆ ಇರುವ ಪರಿಸ್ಥಿತಿಗೆ ಬಂದು ನಿಂತಿದ್ದಾರೆ. ಈ ವಿಡಿಯೋಗಳು ಈಗ ವೈರಲ್​ ಆಗಿದೆ. ಈ ಬಗ್ಗೆ ಕುಟುಂಬದವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಈ ವಿಡಿಯೋ ನೋಡಿದ ಅಭಿಮಾನಿಗಳು ತುಂಬಾನೇ ಬೇಸರಗೊಂಡಿದ್ದಾರೆ. ಇನ್ನೂ ಕೆಲವರು ಕಣ್ಣೀರು ಹಾಕಿದ್ದಾರೆ. ನಟನ ಈ ಸ್ಥಿತಿ ನೋಡಿ ಕೆಲವರು ಸಹಾಯಕ್ಕೂ ಮುಂದೆ ಬಂದಿದ್ದಾರೆ.

ಕೆಲ ತಿಂಗಳ ಹಿಂದೆ ಶ್ರೀನಿವಾಸನ್​ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಕ್ತದ ಒತ್ತಡದಲ್ಲಿ ಏರುಪೇರಾಗಿದ್ದು ಇದಕ್ಕೆ ಪ್ರಮುಖ ಕಾರಣವಾಗಿತ್ತು. ಇಷ್ಟೇ ಆಗಿದ್ದರೆ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಬೇಕಿತ್ತು. ಆದರೆ, ಅವರಿಗೆ ನಿಜಕ್ಕೂ ಆಗಿದ್ದೇನು ಎನ್ನುವ ವಿಚಾರವನ್ನು ಯಾರೂ ಬಿಟ್ಟುಕೊಟ್ಟಿಲ್ಲ. ಈ ಬಗ್ಗೆ ಆಸ್ಪತ್ರೆಯವರು ಕೂಡ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಇದು ಫ್ಯಾನ್ಸ್​ ಆತಂಕಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಅವರ ವಿಡಿಯೋ ವೈರಲ್​ ಆಗಿದ್ದು ನೋಡಿ ಫ್ಯಾನ್ಸ್​ ನೊಂದುಕೊಂಡಿದ್ದಾರೆ. ಈ ಬಗ್ಗೆ ಕುಟುಂಬದವರು ಯಾವ ರೀತಿಯ ಅಪ್​ಡೇಟ್​ ನೀಡುತ್ತಾರೆ ಎಂದು ಕಾದು ಕೂತಿದ್ದಾರೆ.

ಶ್ರೀನಿವಾಸನ್​ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದರು. 2010ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಸಣ್ಣಪುಟ್ಟ ಪಾತ್ರಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದರು. ನಂತರ ಸಿನಿಮಾವನ್ನು ತಾವೇ ನಿರ್ಮಾಣ ಮಾಡಿ ಅದರಲ್ಲಿ ಹೀರೋ ಆಗಿ ನಟಿಸಿದರು. 2011ರಲ್ಲಿ ಬಿಡುಗಡೆಯಾದ ಈ ಸಿನಿಮಾಗೆ ‘ಲಥಿಕಾ’ ಎಂದು ಹೆಸರಿಡಲಾಗಿತ್ತು. ನಂತರ ಅವರಿಗೆ ಸಾಲುಸಾಲು ಸಿನಿಮಾ ಆಫರ್​ಗಳು ಬಂದವು. ಕಾಮಿಡಿಯನ್​ ಆಗಿ ಶ್ರೀನಿವಾಸನ್​ ಹೆಚ್ಚು ಗುರುತಿಸಿಕೊಂಡರು.

ಇದನ್ನೂ ಓದಿ: ವಿಕ್ಕಿ ಕೌಶಲ್​ಗಿಂತ ಕತ್ರಿನಾ ಕೈಫ್​ ಎಷ್ಟು ವರ್ಷ ದೊಡ್ಡವರು? ಮದುವೆಗೆ ಅಡ್ಡಿ ಆಗಲಿಲ್ಲ ವಯಸ್ಸಿನ ಅಂತರ

ಅಂಡರ್​​​ವಾಟರ್​​ನಲ್ಲಿ ಲಿಪ್​ಲಾಕ್​ ಮಾಡಿದ ಪ್ರೆಗ್ನೆಂಟ್ ನಟಿ; ​ಫೋಟೋ ವೈರಲ್

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?