AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ‘ಸಲಾರ್’ ಸೆಟ್​ ಫೋಟೋ ಲೀಕ್​; ಮೈಸೂರಿಗೂ-ಸಿನಿಮಾಗೂ ಇದೆ ಲಿಂಕ್​

ಕೊವಿಡ್​ ಲಾಕ್​ಡೌನ್​ ಪೂರ್ಣಗೊಂಡಿರುವುದರಿಂದ ಸಲಾರ್​ ಚಿತ್ರದ ಶೂಟಿಂಗ್​ ಮತ್ತೆ ಆರಂಭಗೊಂಡಿದೆ. ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ ಸಿನಿಮಾ ಸೆಟ್​ ಫೋಟೋಗಳು ಲೀಕ್​ ಆಗಿವೆ.

ಪ್ರಭಾಸ್​ ‘ಸಲಾರ್’ ಸೆಟ್​ ಫೋಟೋ ಲೀಕ್​; ಮೈಸೂರಿಗೂ-ಸಿನಿಮಾಗೂ ಇದೆ ಲಿಂಕ್​
ಸಲಾರ್​ ಸೆಟ್​ನಲ್ಲಿ ಪ್ರಭಾಸ್​
TV9 Web
| Edited By: |

Updated on: Jul 05, 2021 | 5:14 PM

Share

ಪ್ರಭಾಸ್​ ನಟನೆಯ, ಪ್ರಶಾಂತ್​ ನೀಲ್ ನಿರ್ದೇಶನದ ‘ಸಲಾರ್​’ ಚಿತ್ರ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇದೆ. ಆರಂಭದಿಂದಲೂ ಬಜೆಟ್​ ವಿಚಾರಕ್ಕೆ ಸದ್ದು ಮಾಡುತ್ತಿರುವ ಈ ಸಿನಿಮಾ, ಎರಡು ಪಾರ್ಟ್​ಗಳಲ್ಲಿ ತೆರೆಗೆ ಬರಲಿದೆ ಎನ್ನಲಾಗಿತ್ತು. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಸಿನಿಮಾ ಕಥೆಗೂ ಮೈಸೂರಿಗೂ ಒಂದು ಲಿಂಕ್ ಇದೆಯಂತೆ!

ಕೊವಿಡ್​ ಲಾಕ್​ಡೌನ್​ ಪೂರ್ಣಗೊಂಡಿರುವುದರಿಂದ ಸಲಾರ್​ ಚಿತ್ರದ ಶೂಟಿಂಗ್​ ಮತ್ತೆ ಆರಂಭಗೊಂಡಿದೆ. ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ ಸಿನಿಮಾ ಸೆಟ್​ ಫೋಟೋಗಳು ಲೀಕ್​ ಆಗಿವೆ. ಇದರಲ್ಲಿ ಪ್ರಭಾಸ್​ ಬೈಕ್​ ಸಾಕಷ್ಟು ಗಮನ ಸೆಳೆಯುತ್ತಿದೆ.

ಈ ಚಿತ್ರಕ್ಕೆ ವಿಂಟೇಜ್​ ಮಾಡೆಲ್​ ಬೈಕ್​ ಬಳಕೆ ಮಾಡಿಕೊಳ್ಳಲಾಗಿದೆ. ಎಂಇಸಿ ನಂಬರ್​ಪ್ಲೇಟ್​ ಇರುವ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾದ ಕಥೆ ಮೈಸೂರಿನಲ್ಲಿ ನಡೆಯಲಿದ್ದು, 1970ರ ಕಾಲಘಟದ್ದಲ್ಲಿ ಕಥೆ ಸಾಗಲಿದೆ. ಬೈಕ್​ ನಂಬರ್​ ಪ್ಲೇಟ್​ ಮೇಲೆ ಎಂಇಸಿ 6987 ಎಂದಿದೆ. ಸದ್ಯ, ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ವೈರಲ್​ ಆಗಿವೆ.

‘ಕೆಜಿಎಫ್​’ ಚಿತ್ರ ರೆಟ್ರೋ ಲುಕ್​ನಲ್ಲಿ ಮೂಡಿ ಬಂದಿತ್ತು. ಇದನ್ನು ನಿರ್ದೇಶಕ ಪ್ರಶಾಂತ್​ ನೀಲ್​ ಅದ್ಭುತವಾಗಿ ಕಟ್ಟಿ ಕೊಟ್ಟಿದ್ದರು. ಈಗ ‘ಸಲಾರ್​’ ಚಿತ್ರ ಕೂಡ ರೆಟ್ರೋ ಶೈಲಿಯಲ್ಲೇ ಮೂಡಿ ಬರುತ್ತಿದ್ದು, ಕಥೆಗೆ ಮೈಸೂರಿನ ಲಿಂಕ್​ ಕೊಟ್ಟಿರೋದು ಸಾಕಷ್ಟು ಕುತೂಹಲ ಮೂಡಿಸಿದೆ.

ಕೊವಿಡ್​ ಕಾಣಿಸಿಕೊಂಡ ನಂತರದಲ್ಲಿ ಸಲಾರ್ ಸಿನಿಮಾ ಕೆಲಸಗಳು ಸಂಪೂರ್ಣವಾಗಿ ನಿಂತಿದ್ದವು. ಈಗ ಲಾಕ್​ಡೌನ್​ ಸಡಿಲಗೊಂಡಿದ್ದು, ಮತ್ತೆ ಚಿತ್ರೀಕರಣ ಪ್ರಾರಂಭಗೊಂಡಿದೆ.2022ರ ಏಪ್ರಿಲ್​ ತಿಂಗಳಲ್ಲಿ ಸಲಾರ್​ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ. ತೆಲುಗು ಹಾಗೂ ಕನ್ನಡದಲ್ಲಿ ಸಿನಿಮಾ ತಯಾರಾಗುತ್ತಿದೆ. ಪ್ರಭಾಸ್​ಗೆ ಜತೆಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ. ಕೆಜಿಎಫ್​ ಸಿನಿಮಾದಲ್ಲಿ ಕೆಲಸ ಮಾಡಿದ ತಾಂತ್ರಿಕ ವರ್ಗದ ಅನೇಕರು ಸಲಾರ್​ ಸಿನಿಮಾದಲ್ಲೂ ಕೆಲಸ ಮಾಡುತ್ತಿದ್ದಾರೆ. ಈ ಸಿನಿಮಾ ಎರಡು ಪಾರ್ಟ್​ಗಳಲ್ಲಿ ತೆರೆಗೆ ಬರಲಿದೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.

ಇದನ್ನೂ ಓದಿ: ಸಲಾರ್​ ಚಿತ್ರದಲ್ಲಿ ಪ್ರಭಾಸ್​ ಕೇಶ ವಿನ್ಯಾಸಕ್ಕೆ ಲಕ್ಷಲಕ್ಷ ಸುರಿದ ನಿರ್ಮಾಪಕರು

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!