AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ಸವಾಲು ಹಾಕಿದ ಪ್ರಭಾಸ್​; ಗೆಲ್ಲೋರು ಯಾರು?

ಹಬ್ಬ ಹಾಗೂ ವಿಶೇಷ ದಿನಗಳಂದು ಸ್ಟಾರ್​ ಸಿನಿಮಾಗಳು ತೆರೆಗೆ ಬರುತ್ತವೆ. ಸ್ವಾತಂತ್ರ್ಯ ದಿನಾಚರಣೆ, ದೀಪಾವಳಿ, ಗಣೇಶ ಚತುರ್ಥಿ, ದೀಪಾವಳಿ, ಕ್ರಿಸ್​​ಮಸ್​ ಸಂದರ್ಭದಲ್ಲಿ ಸ್ಟಾರ್​ ನಟರು ಸಿನಿಮಾ ರಿಲೀಸ್​ ಮಾಡೋಕೆ ಹೆಚ್ಚು ಒತ್ತು ನೀಡುತ್ತಾರೆ.

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ಸವಾಲು ಹಾಕಿದ ಪ್ರಭಾಸ್​; ಗೆಲ್ಲೋರು ಯಾರು?
ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ಸವಾಲು ಹಾಕಿದ ಪ್ರಭಾಸ್​; ಗೆಲ್ಲೋರು ಯಾರು?
TV9 Web
| Edited By: |

Updated on:Sep 27, 2021 | 6:55 PM

Share

ಕೊವಿಡ್​ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆ ಚಿತ್ರರಂಗದಲ್ಲಿ ಸಿನಿಮಾ ಕೆಲಸಗಳು ಗರಿಗೆದರಿವೆ. ಈಗ ಹೌಸ್​​ಫುಲ್​ಗೆ ಸರ್ಕಾರ ಅವಕಾಶ ನೀಡುತ್ತಿದ್ದು, ಇದರಿಂದ ದೊಡ್ಡ ಸಿನಿಮಾಗಳು ರಿಲೀಸ್​ಗೆ ರೆಡಿ ಆಗುತ್ತಿವೆ. ಅದೇ ರೀತಿ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ದಕ್ಷಿಣ ಭಾರತದ ನಟ ಪ್ರಭಾಸ್​ ಸವಾಲು ಹಾಕಿದ್ದಾರೆ. ಈ ಸವಾಲಿನಲ್ಲಿ ಗೆಲ್ಲೋದು ಯಾರು ಅನ್ನೋದು ಸದ್ಯದ ಕುತೂಹಲ.

ಹಬ್ಬ ಹಾಗೂ ವಿಶೇಷ ದಿನಗಳಂದು ಸ್ಟಾರ್​ ಸಿನಿಮಾಗಳು ತೆರೆಗೆ ಬರುತ್ತವೆ. ಸ್ವಾತಂತ್ರ್ಯ ದಿನಾಚರಣೆ, ದೀಪಾವಳಿ, ಗಣೇಶ ಚತುರ್ಥಿ, ದೀಪಾವಳಿ, ಕ್ರಿಸ್​​ಮಸ್​ ಸಂದರ್ಭದಲ್ಲಿ ಸ್ಟಾರ್​ ನಟರು ಸಿನಿಮಾ ರಿಲೀಸ್​ ಮಾಡೋಕೆ ಹೆಚ್ಚು ಒತ್ತು ನೀಡುತ್ತಾರೆ. ಈಗ ಆಗಿದ್ದೂ ಅದೇ. 2022ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಭಾಸ್​ ಮತ್ತು ಅಕ್ಷಯ್​ ಕುಮಾರ್​ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಇದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡೋದು ಪಕ್ಕಾ ಎನ್ನಲಾಗುತ್ತಿದೆ.

ಪ್ರಭಾಸ್​ ನಟನೆಯ ಆದಿಪುರುಷ್​ ಚಿತ್ರದ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗೆ ಕಾರಣ ಹಲವು. ಖ್ಯಾತ ನಿರ್ದೇಶಕ ಓಂ ರಾವುತ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡರೆ, ರಾವಣನ ಪಾತ್ರಕ್ಕೆ ಸೈಫ್​ ಅಲಿ ಖಾನ್​ ಬಣ್ಣ ಹಚ್ಚುತ್ತಿದ್ದಾರೆ. ಈಗ ಈ ಸಿನಿಮಾ ರಿಲೀಸ್​ ದಿನಾಂಕ ಘೋಷಣೆ ಮಾಡಿದೆ. ಈ ಸಿನಿಮಾ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 11ಕ್ಕೆ ತೆರೆಗೆ ಬರುತ್ತಿದೆ.

ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾಬಂಧನ್​’ ಕೂಡ ಆಗಸ್ಟ್​ 11ಕ್ಕೆ ರಿಲೀಸ್​ ಆಗುತ್ತಿದೆ. ಹೆಸರೇ ಹೇಳುವಂತೆ ಇದು ಅಣ್ಣ-ತಂಗಿ ಸಂಬಂಧವನ್ನು ವಿವರಿಸುವ ಕಥೆ. 2022ರ ಆಗಸ್ಟ್​ 11 ರಕ್ಷಾಬಂಧನ. ಈ ಕಾರಣಕ್ಕೆ, ಅಕ್ಷಯ್​ ಸಿನಿಮಾ ಇದೇ ಡೇಟ್​ಗೆ ತೆರೆಗೆ ಬರಲಿದೆ ಎನ್ನಲಾಗುತ್ತಿದೆ. ಹಾಗಾಗಿ, ಇಬ್ಬರ ನಡುವೆ ದೊಡ್ಡ ಫೈಟ್​ ಏರ್ಪಡುವ ನಿರೀಕ್ಷೆ ಇದೆ. ಎರಡೂ ಸಿನಿಮಾಗಾಗಿ ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: ‘ರಾಧೆ ಶ್ಯಾಮ್’ ಸೆಟ್​ನಲ್ಲಿ ಪೂಜಾ ಹೆಗ್ಡೆ ನಡವಳಿಕೆಯಿಂದ ಪ್ರಭಾಸ್​ ಕಿರಿಕಿರಿಗೊಂಡಿದ್ದರೇ?; ಸುದ್ದಿಯ ಅಸಲಿಯತ್ತು ಇಲ್ಲಿದೆ

ಪ್ರಭಾಸ್​-ಪೂಜಾ ಹೆಗ್ಡೆ ಬಗ್ಗೆ ಕೇಳಿ ಬರುತ್ತಿದೆ ಹೊಸ ಗಾಸಿಪ್​; ಸ್ಪಷ್ಟನೆ ಕೊಟ್ಟರೂ ನಂಬುತ್ತಿಲ್ಲ ಫ್ಯಾನ್ಸ್​

Published On - 6:54 pm, Mon, 27 September 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ