AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ಸವಾಲು ಹಾಕಿದ ಪ್ರಭಾಸ್​; ಗೆಲ್ಲೋರು ಯಾರು?

ಹಬ್ಬ ಹಾಗೂ ವಿಶೇಷ ದಿನಗಳಂದು ಸ್ಟಾರ್​ ಸಿನಿಮಾಗಳು ತೆರೆಗೆ ಬರುತ್ತವೆ. ಸ್ವಾತಂತ್ರ್ಯ ದಿನಾಚರಣೆ, ದೀಪಾವಳಿ, ಗಣೇಶ ಚತುರ್ಥಿ, ದೀಪಾವಳಿ, ಕ್ರಿಸ್​​ಮಸ್​ ಸಂದರ್ಭದಲ್ಲಿ ಸ್ಟಾರ್​ ನಟರು ಸಿನಿಮಾ ರಿಲೀಸ್​ ಮಾಡೋಕೆ ಹೆಚ್ಚು ಒತ್ತು ನೀಡುತ್ತಾರೆ.

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ಸವಾಲು ಹಾಕಿದ ಪ್ರಭಾಸ್​; ಗೆಲ್ಲೋರು ಯಾರು?
ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ಸವಾಲು ಹಾಕಿದ ಪ್ರಭಾಸ್​; ಗೆಲ್ಲೋರು ಯಾರು?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Sep 27, 2021 | 6:55 PM

ಕೊವಿಡ್​ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆ ಚಿತ್ರರಂಗದಲ್ಲಿ ಸಿನಿಮಾ ಕೆಲಸಗಳು ಗರಿಗೆದರಿವೆ. ಈಗ ಹೌಸ್​​ಫುಲ್​ಗೆ ಸರ್ಕಾರ ಅವಕಾಶ ನೀಡುತ್ತಿದ್ದು, ಇದರಿಂದ ದೊಡ್ಡ ಸಿನಿಮಾಗಳು ರಿಲೀಸ್​ಗೆ ರೆಡಿ ಆಗುತ್ತಿವೆ. ಅದೇ ರೀತಿ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ದಕ್ಷಿಣ ಭಾರತದ ನಟ ಪ್ರಭಾಸ್​ ಸವಾಲು ಹಾಕಿದ್ದಾರೆ. ಈ ಸವಾಲಿನಲ್ಲಿ ಗೆಲ್ಲೋದು ಯಾರು ಅನ್ನೋದು ಸದ್ಯದ ಕುತೂಹಲ.

ಹಬ್ಬ ಹಾಗೂ ವಿಶೇಷ ದಿನಗಳಂದು ಸ್ಟಾರ್​ ಸಿನಿಮಾಗಳು ತೆರೆಗೆ ಬರುತ್ತವೆ. ಸ್ವಾತಂತ್ರ್ಯ ದಿನಾಚರಣೆ, ದೀಪಾವಳಿ, ಗಣೇಶ ಚತುರ್ಥಿ, ದೀಪಾವಳಿ, ಕ್ರಿಸ್​​ಮಸ್​ ಸಂದರ್ಭದಲ್ಲಿ ಸ್ಟಾರ್​ ನಟರು ಸಿನಿಮಾ ರಿಲೀಸ್​ ಮಾಡೋಕೆ ಹೆಚ್ಚು ಒತ್ತು ನೀಡುತ್ತಾರೆ. ಈಗ ಆಗಿದ್ದೂ ಅದೇ. 2022ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಭಾಸ್​ ಮತ್ತು ಅಕ್ಷಯ್​ ಕುಮಾರ್​ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಇದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡೋದು ಪಕ್ಕಾ ಎನ್ನಲಾಗುತ್ತಿದೆ.

ಪ್ರಭಾಸ್​ ನಟನೆಯ ಆದಿಪುರುಷ್​ ಚಿತ್ರದ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗೆ ಕಾರಣ ಹಲವು. ಖ್ಯಾತ ನಿರ್ದೇಶಕ ಓಂ ರಾವುತ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡರೆ, ರಾವಣನ ಪಾತ್ರಕ್ಕೆ ಸೈಫ್​ ಅಲಿ ಖಾನ್​ ಬಣ್ಣ ಹಚ್ಚುತ್ತಿದ್ದಾರೆ. ಈಗ ಈ ಸಿನಿಮಾ ರಿಲೀಸ್​ ದಿನಾಂಕ ಘೋಷಣೆ ಮಾಡಿದೆ. ಈ ಸಿನಿಮಾ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 11ಕ್ಕೆ ತೆರೆಗೆ ಬರುತ್ತಿದೆ.

ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾಬಂಧನ್​’ ಕೂಡ ಆಗಸ್ಟ್​ 11ಕ್ಕೆ ರಿಲೀಸ್​ ಆಗುತ್ತಿದೆ. ಹೆಸರೇ ಹೇಳುವಂತೆ ಇದು ಅಣ್ಣ-ತಂಗಿ ಸಂಬಂಧವನ್ನು ವಿವರಿಸುವ ಕಥೆ. 2022ರ ಆಗಸ್ಟ್​ 11 ರಕ್ಷಾಬಂಧನ. ಈ ಕಾರಣಕ್ಕೆ, ಅಕ್ಷಯ್​ ಸಿನಿಮಾ ಇದೇ ಡೇಟ್​ಗೆ ತೆರೆಗೆ ಬರಲಿದೆ ಎನ್ನಲಾಗುತ್ತಿದೆ. ಹಾಗಾಗಿ, ಇಬ್ಬರ ನಡುವೆ ದೊಡ್ಡ ಫೈಟ್​ ಏರ್ಪಡುವ ನಿರೀಕ್ಷೆ ಇದೆ. ಎರಡೂ ಸಿನಿಮಾಗಾಗಿ ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: ‘ರಾಧೆ ಶ್ಯಾಮ್’ ಸೆಟ್​ನಲ್ಲಿ ಪೂಜಾ ಹೆಗ್ಡೆ ನಡವಳಿಕೆಯಿಂದ ಪ್ರಭಾಸ್​ ಕಿರಿಕಿರಿಗೊಂಡಿದ್ದರೇ?; ಸುದ್ದಿಯ ಅಸಲಿಯತ್ತು ಇಲ್ಲಿದೆ

ಪ್ರಭಾಸ್​-ಪೂಜಾ ಹೆಗ್ಡೆ ಬಗ್ಗೆ ಕೇಳಿ ಬರುತ್ತಿದೆ ಹೊಸ ಗಾಸಿಪ್​; ಸ್ಪಷ್ಟನೆ ಕೊಟ್ಟರೂ ನಂಬುತ್ತಿಲ್ಲ ಫ್ಯಾನ್ಸ್​

Published On - 6:54 pm, Mon, 27 September 21

ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ