ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ಸವಾಲು ಹಾಕಿದ ಪ್ರಭಾಸ್​; ಗೆಲ್ಲೋರು ಯಾರು?

ಹಬ್ಬ ಹಾಗೂ ವಿಶೇಷ ದಿನಗಳಂದು ಸ್ಟಾರ್​ ಸಿನಿಮಾಗಳು ತೆರೆಗೆ ಬರುತ್ತವೆ. ಸ್ವಾತಂತ್ರ್ಯ ದಿನಾಚರಣೆ, ದೀಪಾವಳಿ, ಗಣೇಶ ಚತುರ್ಥಿ, ದೀಪಾವಳಿ, ಕ್ರಿಸ್​​ಮಸ್​ ಸಂದರ್ಭದಲ್ಲಿ ಸ್ಟಾರ್​ ನಟರು ಸಿನಿಮಾ ರಿಲೀಸ್​ ಮಾಡೋಕೆ ಹೆಚ್ಚು ಒತ್ತು ನೀಡುತ್ತಾರೆ.

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ಸವಾಲು ಹಾಕಿದ ಪ್ರಭಾಸ್​; ಗೆಲ್ಲೋರು ಯಾರು?
ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ಸವಾಲು ಹಾಕಿದ ಪ್ರಭಾಸ್​; ಗೆಲ್ಲೋರು ಯಾರು?
Follow us
| Updated By: ರಾಜೇಶ್ ದುಗ್ಗುಮನೆ

Updated on:Sep 27, 2021 | 6:55 PM

ಕೊವಿಡ್​ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆ ಚಿತ್ರರಂಗದಲ್ಲಿ ಸಿನಿಮಾ ಕೆಲಸಗಳು ಗರಿಗೆದರಿವೆ. ಈಗ ಹೌಸ್​​ಫುಲ್​ಗೆ ಸರ್ಕಾರ ಅವಕಾಶ ನೀಡುತ್ತಿದ್ದು, ಇದರಿಂದ ದೊಡ್ಡ ಸಿನಿಮಾಗಳು ರಿಲೀಸ್​ಗೆ ರೆಡಿ ಆಗುತ್ತಿವೆ. ಅದೇ ರೀತಿ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ಗೆ ದಕ್ಷಿಣ ಭಾರತದ ನಟ ಪ್ರಭಾಸ್​ ಸವಾಲು ಹಾಕಿದ್ದಾರೆ. ಈ ಸವಾಲಿನಲ್ಲಿ ಗೆಲ್ಲೋದು ಯಾರು ಅನ್ನೋದು ಸದ್ಯದ ಕುತೂಹಲ.

ಹಬ್ಬ ಹಾಗೂ ವಿಶೇಷ ದಿನಗಳಂದು ಸ್ಟಾರ್​ ಸಿನಿಮಾಗಳು ತೆರೆಗೆ ಬರುತ್ತವೆ. ಸ್ವಾತಂತ್ರ್ಯ ದಿನಾಚರಣೆ, ದೀಪಾವಳಿ, ಗಣೇಶ ಚತುರ್ಥಿ, ದೀಪಾವಳಿ, ಕ್ರಿಸ್​​ಮಸ್​ ಸಂದರ್ಭದಲ್ಲಿ ಸ್ಟಾರ್​ ನಟರು ಸಿನಿಮಾ ರಿಲೀಸ್​ ಮಾಡೋಕೆ ಹೆಚ್ಚು ಒತ್ತು ನೀಡುತ್ತಾರೆ. ಈಗ ಆಗಿದ್ದೂ ಅದೇ. 2022ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಭಾಸ್​ ಮತ್ತು ಅಕ್ಷಯ್​ ಕುಮಾರ್​ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಇದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡೋದು ಪಕ್ಕಾ ಎನ್ನಲಾಗುತ್ತಿದೆ.

ಪ್ರಭಾಸ್​ ನಟನೆಯ ಆದಿಪುರುಷ್​ ಚಿತ್ರದ ಮೇಲೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗೆ ಕಾರಣ ಹಲವು. ಖ್ಯಾತ ನಿರ್ದೇಶಕ ಓಂ ರಾವುತ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ರಾಮನಾಗಿ ಪ್ರಭಾಸ್​ ಕಾಣಿಸಿಕೊಂಡರೆ, ರಾವಣನ ಪಾತ್ರಕ್ಕೆ ಸೈಫ್​ ಅಲಿ ಖಾನ್​ ಬಣ್ಣ ಹಚ್ಚುತ್ತಿದ್ದಾರೆ. ಈಗ ಈ ಸಿನಿಮಾ ರಿಲೀಸ್​ ದಿನಾಂಕ ಘೋಷಣೆ ಮಾಡಿದೆ. ಈ ಸಿನಿಮಾ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 11ಕ್ಕೆ ತೆರೆಗೆ ಬರುತ್ತಿದೆ.

ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾಬಂಧನ್​’ ಕೂಡ ಆಗಸ್ಟ್​ 11ಕ್ಕೆ ರಿಲೀಸ್​ ಆಗುತ್ತಿದೆ. ಹೆಸರೇ ಹೇಳುವಂತೆ ಇದು ಅಣ್ಣ-ತಂಗಿ ಸಂಬಂಧವನ್ನು ವಿವರಿಸುವ ಕಥೆ. 2022ರ ಆಗಸ್ಟ್​ 11 ರಕ್ಷಾಬಂಧನ. ಈ ಕಾರಣಕ್ಕೆ, ಅಕ್ಷಯ್​ ಸಿನಿಮಾ ಇದೇ ಡೇಟ್​ಗೆ ತೆರೆಗೆ ಬರಲಿದೆ ಎನ್ನಲಾಗುತ್ತಿದೆ. ಹಾಗಾಗಿ, ಇಬ್ಬರ ನಡುವೆ ದೊಡ್ಡ ಫೈಟ್​ ಏರ್ಪಡುವ ನಿರೀಕ್ಷೆ ಇದೆ. ಎರಡೂ ಸಿನಿಮಾಗಾಗಿ ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: ‘ರಾಧೆ ಶ್ಯಾಮ್’ ಸೆಟ್​ನಲ್ಲಿ ಪೂಜಾ ಹೆಗ್ಡೆ ನಡವಳಿಕೆಯಿಂದ ಪ್ರಭಾಸ್​ ಕಿರಿಕಿರಿಗೊಂಡಿದ್ದರೇ?; ಸುದ್ದಿಯ ಅಸಲಿಯತ್ತು ಇಲ್ಲಿದೆ

ಪ್ರಭಾಸ್​-ಪೂಜಾ ಹೆಗ್ಡೆ ಬಗ್ಗೆ ಕೇಳಿ ಬರುತ್ತಿದೆ ಹೊಸ ಗಾಸಿಪ್​; ಸ್ಪಷ್ಟನೆ ಕೊಟ್ಟರೂ ನಂಬುತ್ತಿಲ್ಲ ಫ್ಯಾನ್ಸ್​

Published On - 6:54 pm, Mon, 27 September 21

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ