AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಭಾಸ್ ಮತ್ತು ಮಹೇಶ್ ಬಾಬು ನನಗಿಂತ ದೊಡ್ಡ ಹೀರೋಗಳು’; ಸಾರ್ವಜನಿಕವಾಗಿ ಒಪ್ಪಿಕೊಂಡ ಪವನ್ ಕಲ್ಯಾಣ್

Pawan Kalyan: ‘ಪ್ರಭಾಸ್ ಮತ್ತು ಮಹೇಶ್ ಬಾಬು ನನಗಿಂತ ದೊಡ್ಡ ಹೀರೋಗಳು. ಅವರೆಲ್ಲ ಪ್ಯಾನ್ ಇಂಡಿಯಾ ಹೀರೋಗಳು. ರಾಮ್ ಚರಣ್ ಮತ್ತು ಜೂ.ಎನ್​ಟಿಆರ್ ಜಾಗತಿಕ ಮಟ್ಟಕ್ಕೆ ಏರಿದ್ದಾರೆ’ ಎಂದಿದ್ದಾರೆ ಪವನ್ ಕಲ್ಯಾಣ್.

‘ಪ್ರಭಾಸ್ ಮತ್ತು ಮಹೇಶ್ ಬಾಬು ನನಗಿಂತ ದೊಡ್ಡ ಹೀರೋಗಳು’; ಸಾರ್ವಜನಿಕವಾಗಿ ಒಪ್ಪಿಕೊಂಡ ಪವನ್ ಕಲ್ಯಾಣ್
ಪ್ರಭಾಸ್, ಪವನ್ ಕಲ್ಯಾಣ್, ಮಹೇಶ್ ಬಾಬು
Follow us
ರಾಜೇಶ್ ದುಗ್ಗುಮನೆ
|

Updated on:Jun 22, 2023 | 9:53 AM

‘ಟಾಲಿವುಡ್ ಸ್ಟಾರ್ ಹೀರೋಗಳಾದ ಪ್ರಭಾಸ್ ಮತ್ತು ಮಹೇಶ್ ಬಾಬು (Mahesh Babu) ಅವರು ನನಗಿಂತ ದೊಡ್ಡ ಹೀರೋಗಳು. ನನಗಿಂತ ಅವರು ಹೆಚ್ಚು ಸಂಭಾವನೆ ಪಡೆಯುತ್ತಾರೆ’ ಎಂದು ಟಾಲಿವುಡ್ ನಟ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ (Pawan Kalyan) ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಯಾತ್ರೆ ಮಾಡುತ್ತಿದ್ದಾರೆ. ಅವರು ಬುಧವಾರ (ಜೂನ್ 21) ಕೋನಸೀಮಾ ಜಿಲ್ಲೆಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಅವರು ಈ ವೇಳೆ ಟಾಲಿವುಡ್ ಹೀರೋಗಳ ಬಗ್ಗೆ ಮಾತನಾಡಿದ್ದಾರೆ.

‘ನನ್ನ ಅಭಿಮಾನಿಗಳು ಮತ್ತು ಜೂ.ಎನ್‌ಟಿಆರ್ ಅಭಿಮಾನಿಗಳು ಯಾವಾಗಲೂ ಜಗಳವಾಡುತ್ತಾರೆ ಎಂದು ಕೆಲವರು ಹೇಳುತ್ತಾರೆ. ಸಿನಿಮಾ ಎಂದರೆ ಮನರಂಜನೆ ಮತ್ತು ಖುಷಿ. ಜೂನಿಯರ್ ಎನ್​​ಟಿಆರ್, ಮಹೇಶ್ ಬಾಬು, ರಾಮ್ ಚರಣ್, ಅಲ್ಲು ಅರ್ಜುನ್, ಚಿರಂಜೀವಿ, ಬಾಲಕೃಷ್ಣ ಹೀಗೆ ಎಲ್ಲ ಹೀರೋಗಳ ಬಗೆಗೂ ನನಗೆ ಗೌರವ ಇದೆ. ಅವರ ಎಲ್ಲಾ ಸಿನಿಮಾಗಳನ್ನು ನಾನು ನೋಡುತ್ತೇನೆ. ನಾವು ಮುಖಾಮುಖಿಯಾದಾಗ ಮಾತನಾಡುತ್ತೇವೆ. ರಾಜಕೀಯದಲ್ಲಿ ನಾಯಕರ ಮೇಲೆ ಪ್ರೀತಿ ತೋರಿಸಬೇಡಿ. ಸಿನಿಮಾ ಬೇರೆ, ರಾಜಕೀಯ ಬೇರೆ’ ಎಂದರು ಪವನ್ ಕಲ್ಯಾಣ್.

‘ಪ್ರಭಾಸ್ ಮತ್ತು ಮಹೇಶ್ ಬಾಬು ನನಗಿಂತ ದೊಡ್ಡ ಹೀರೋಗಳು. ಅವರೆಲ್ಲ ಪ್ಯಾನ್ ಇಂಡಿಯಾ ಹೀರೋಗಳು. ರಾಮ್ ಚರಣ್ ಮತ್ತು ಜೂ.ಎನ್​ಟಿಆರ್ ಜಾಗತಿಕ ಮಟ್ಟಕ್ಕೆ ಏರಿದ್ದಾರೆ. ಅವರು ನನಗಿಂತ ಹೆಚ್ಚು ಸಂಭಾವನೆ ಪಡೆಯುತ್ತಾರೆ. ಅವರು ಪ್ರಪಂಚ ತಿಳಿದಿರುವಷ್ಟು ನನಗೆ ತಿಳಿದಿಲ್ಲ. ಆ ವಿಚಾರ ಹೇಳಲು ನನಗೆ ಯಾವುದೇ ಅಹಂ ಇಲ್ಲ. ಪ್ರತಿ ವ್ಯಕ್ತಿಯೂ ಒಳ್ಳೆಯವನಾಗಿರಬೇಕು ಎಂದು ನಾನು ಬಯಸುತ್ತೇನೆ. ಜಾತಿಯ ಆಧಾರದ ಮೇಲೆ ನಮ್ಮೊಳಗೆ ಜಗಳವಾಡುವುದು ಬೇಡ. ಸಿನಿಮಾ ವಿಚಾರದಲ್ಲಿ ಎಲ್ಲರನ್ನೂ ಬೆಂಬಲಿಸೋಣ. ಆದರೆ ರಾಜಕೀಯದ ವಿಚಾರದಲ್ಲಿ ಒಟ್ಟಾಗಿ ಯೋಚಿಸೋಣ. ಹೋರಾಟ ಮಾಡುವವರು ಈ ಸಮಾಜಕ್ಕೆ ಬೇಕು. ನಾನು ಮಾ ತ್ರ ಸಾಕಾಗುವುದಿಲ್ಲ. ಅನ್ಯಾಯವನ್ನು ಪ್ರಶ್ನಿಸುವ ನಾಯಕರು ಬೇಕು’ ಎಂದರು ಪವನ್ ಕಲ್ಯಾಣ್.

ಇದನ್ನೂ ಓದಿ: ”ಪವನ್ ಕಲ್ಯಾಣ್ ಡ್ರಗ್ಸ್ ತೆಗೆದುಕೊಳ್ಳುತ್ತಾನೆ, ಆತನೊಬ್ಬ ರಾಜಕೀಯ ವ್ಯಭಿಚಾರಿ”

ಪವನ್ ಕಲ್ಯಾಣ್ ಅವರ ಈ ಹೇಳಿಕೆ ವೈರಲ್ ಆಗುತ್ತಿದೆ. ವಿವಿಧ ರೀತಿಯಲ್ಲಿ ಇದನ್ನು ಚರ್ಚಿಸಲಾಗುತ್ತಿದೆ. ರಾಜಕೀಯ ಲಾಭ ಪಡೆಯಲು ಪವನ್ ಹೀಗೆ ಹೇಳಿದ್ದಾರೆ ಎಂದು ಕೂಡ ಕೆಲವರು ಬಣ್ಣಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:01 am, Thu, 22 June 23

ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ