AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಧೆ ಶ್ಯಾಮ್​’ ರಿಲೀಸ್​ ದಿನಾಂಕ ಮುಂದಕ್ಕೆ; ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದ ಪ್ರಭಾಸ್ ಸಿನಿಮಾ

ನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿವೆ. ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ದಿನಾಂಕವನ್ನು ಮುಂದೂಡಿತ್ತು. ಈಗ ಪ್ರಭಾಸ್ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾದ ಸರದಿ.

‘ರಾಧೆ ಶ್ಯಾಮ್​’ ರಿಲೀಸ್​ ದಿನಾಂಕ ಮುಂದಕ್ಕೆ; ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದ ಪ್ರಭಾಸ್ ಸಿನಿಮಾ
‘ರಾಧೆ ಶ್ಯಾಮ್’: ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇತ್ತೀಚೆಗೆ ಬಿಡುಗಡೆ ಆದ ಟ್ರೇಲರ್ ಕೂಡ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈ ಸಿನಿಮಾ ಸಂಕ್ರಾಂತಿ ನಿಮಿತ್ತ ಜನವರಿ 14ರಂದು ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕವನ್ನು ಮುಂದೂಡುವ ಅನಿವಾರ್ಯತೆ ಎದುರಾಗಿತ್ತು. ಈ ಚಿತ್ರ ಮಾರ್ಚ್ 4 ಅಥವಾ 11ರಂದು ತೆರೆಗೆ ಬರಲಿದೆ ಎನ್ನಲಾಗಿದೆ.
TV9 Web
| Edited By: |

Updated on:Jan 05, 2022 | 1:06 PM

Share

ಕೊವಿಡ್​ ಪ್ರಕರಣ ದಿನೇದಿನೇ ಹೆಚ್ಚುತ್ತಲೇ ಇದೆ. ಇದು ಸಹಜವಾಗಿಯೇ ಆತಂಕ ಮೂಡಿಸಿದೆ. ಶೀಘ್ರದಲ್ಲೇ ಮೂರನೆ ಅಲೆ ಅಪ್ಪಳಿಸುವ ಸೂಚನೆ ಸಿಕ್ಕಿದೆ. ಹೀಗಾಗಿ, ಸರ್ಕಾರ ಕೊವಿಡ್​ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಕಠಿಣ ನಿಯಮ ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಚಿತ್ರಮಂದಿರದಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ. ವೀಕೆಂಡ್​ ಕರ್ಫ್ಯೂ ಹೇರಲಾಗಿದೆ. ಹೀಗಾಗಿ, ವಾರಾಂತ್ಯದಲ್ಲಿ ಸಿನಿಮಾ ಪ್ರದರ್ಶನ ಅಸಾಧ್ಯವಾಗಿದೆ. ಅನೇಕ ರಾಜ್ಯಗಳು ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. ಹೀಗಾಗಿ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿವೆ. ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ದಿನಾಂಕವನ್ನು ಮುಂದೂಡಿತ್ತು. ಈಗ ಪ್ರಭಾಸ್ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾದ ಸರದಿ.

ಪ್ರಭಾಸ್​ ಹಾಗೂ ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್​’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇತ್ತೀಚೆಗೆ ಬಿಡುಗಡೆ ಆದ ಟ್ರೇಲರ್​ ಕೂಡ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈ ಸಿನಿಮಾ ಸಂಕ್ರಾಂತಿ ನಿಮಿತ್ತ ಜನವರಿ 14ರಂದು ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕವನ್ನು ಮುಂದೂಡುವ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ.

ಈ ಮೊದಲು ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ದಿನಾಂಕವನ್ನು ಮುಂದಕ್ಕೆ ಹಾಕಿತ್ತು. ಆದರೆ, ಈ ಬಗ್ಗೆ ‘ರಾಧೆ ಶ್ಯಾಮ್’ ಚಿತ್ರತಂಡ ದೃಢ ನಿರ್ಧಾರ ತೆಗೆದುಕೊಂಡಿತ್ತು. ‘ಆರ್​ಆರ್​ಆರ್​’ ಬಿಡುಗಡೆ ದಿನಾಂಕ ಮುಂದಕ್ಕೆ ಹೋದ ಬೆನ್ನಲ್ಲೇ ಸಿನಿಮಾ ಪೋಸ್ಟರ್​ ಬಿಡುಗಡೆ ಮಾಡಿ ಜನವರಿ 14ರಂದೇ ತೆರೆಗೆ ಬರುತ್ತಿದ್ದೇವೆ ಎನ್ನುವ ಮಾಹಿತಿಯನ್ನು ಕೊಟ್ಟಿತ್ತು. ಆದರೆ, ಕೆಲವೇ ದಿನಗಳಲ್ಲಿ ಎಲ್ಲವೂ ಬದಲಾಗಿದೆ.

ಈ ಚಿತ್ರಕ್ಕೆ ರಾಧಾಕೃಷ್ಣ ಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ‘ರಾಧೆ ಶ್ಯಾಮ್​’ ತೆರೆಕಾಣಲಿದೆ. ರೊಮ್ಯಾಂಟಿಕ್​ ಲವ್​ ಸ್ಟೋರಿ ಹೊಂದಿರುವ ಈ ಸಿನಿಮಾ ಪ್ರಭಾಸ್​ ವೃತ್ತಿಜೀವನದ ಡಿಫರೆಂಟ್ ಚಿತ್ರ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸಿನಿಪ್ರಿಯರಿಗೆ ನಿರಾಸೆ ಮೂಡಿಸಿದ ‘ಆರ್​ಆರ್​ಆರ್​’; ಅಧಿಕೃತವಾಗಿ ಚಿತ್ರದ ರಿಲೀಸ್​ ಡೇಟ್​ ಮುಂದೂಡಿಕೆ

ಪ್ರೇಕ್ಷಕರಿಗೆ 10 ಕೋಟಿ ರೂ. ವಾಪಸ್​ ನೀಡಬೇಕು ಆರ್​ಆರ್​ಆರ್​ ನಿರ್ಮಾಪಕರು; ಹೀಗಾದ್ರೆ ಚಿತ್ರದ ಭವಿಷ್ಯ ಏನು?

Published On - 12:16 pm, Wed, 5 January 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ