ಪ್ರಶಾಂತ್​ ನೀಲ್​-ಪ್ರಭಾಸ್​ ಮತ್ತೊಂದು ಸಿನಿಮಾ? ‘ರವಣಂ’ ಟೈಟಲ್ ಫಿಕ್ಸ್

ಪ್ರಶಾಂತ್ ನೀಲ್ ‘ಕೆಜಿಎಫ್’ ಸರಣಿ ಮೂಲಕ ತಮ್ಮ ಕಸುಬುದಾರಿಕೆಯನ್ನು ತೋರಿಸಿದ್ದಾರೆ. ಸದ್ಯ ‘ಸಲಾರ್​’ ಸಿನಿಮಾದ ಪೋಸ್ಟರ್​​ಗಳು ಗಮನ ಸೆಳೆದಿವೆ.

ಪ್ರಶಾಂತ್​ ನೀಲ್​-ಪ್ರಭಾಸ್​ ಮತ್ತೊಂದು ಸಿನಿಮಾ? ‘ರವಣಂ’ ಟೈಟಲ್ ಫಿಕ್ಸ್
ಪ್ರಭಾಸ್​​- ಪ್ರಶಾಂತ್ ನೀಲ್ (ಸಂಗ್ರಹ ಚಿತ್ರ)
Follow us
| Updated By: ರಾಜೇಶ್ ದುಗ್ಗುಮನೆ

Updated on:Jan 17, 2023 | 12:31 PM

ಪ್ರಶಾಂತ್ ನೀಲ್ (Prashanth Neel) ಹಾಗೂ ಪ್ರಭಾಸ್​ ‘ಸಲಾರ್​’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಘೋಷಣೆ ಆಗಿ ಬಹಳ ಸಮಯ ಕಳೆದಿದೆ. ಕೊವಿಡ್, ಪ್ರಭಾಸ್​ ಅವರ ಇತರ ಕಮಿಟ್​ಮೆಂಟ್​​ಗಳಿಂದ ‘ಸಲಾರ್​’ ಸಿನಿಮಾ (Salar Movie) ಶೂಟಿಂಗ್ ವಿಳಂಬ ಆಗಿದೆ. ಹೀಗಿರುವಾಗಲೇ ಪ್ರಶಾಂತ್ ನೀಲ್ ಮುಂದಿನ ಸಿನಿಮಾ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ದಿಲ್ ರಾಜು ಬಂಡವಾಳ ಹೂಡುತ್ತಿರುವ ಈ ಸಿನಿಮಾದಲ್ಲಿ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ. ಈ ಚಿತ್ರಕ್ಕೆ ‘ರವಣಂ’ ಟೈಟಲ್ ಫಿಕ್ಸ್ ಆಗಿದೆ.

ಪ್ರಶಾಂತ್ ನೀಲ್ ‘ಕೆಜಿಎಫ್’ ಸರಣಿ ಮೂಲಕ ತಮ್ಮ ಕಸುಬುದಾರಿಕೆಯನ್ನು ತೋರಿಸಿದ್ದಾರೆ. ಸದ್ಯ ‘ಸಲಾರ್​’ ಸಿನಿಮಾದ ಪೋಸ್ಟರ್​​ಗಳು ಗಮನ ಸೆಳೆದಿವೆ. ಈ ಚಿತ್ರಕ್ಕೆ ಪ್ರಭಾಸ್ ಹೀರೋ. ಅವರ ರಗಡ್ ಲುಕ್ ಈಗಾಗಲೇ ಅನಾವರಣಗೊಂಡಿದೆ. ಈ ಚಿತ್ರದ ಕೆಲಸಗಳು ಪ್ರಗತಿಯಲ್ಲಿರುವಾಗಲೇ ಪ್ರಭಾಸ್-ಪ್ರಶಾಂತ್​ ನೀಲ್​ ಮತ್ತೊಂದು ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ದಿಲ್ ರಾಜು ನಿರ್ಮಾಣದ ‘ವಾರಿಸು’ ಸಿನಿಮಾ ಯಶಸ್ಸು ಕಂಡಿದೆ. ತಮಿಳಲ್ಲಿ ದಿಲ್ ರಾಜು ನಿರ್ಮಾಣದ ಮೊದಲ ಸಿನಿಮಾ ಇದಾಗಿದೆ. ಈ ಚಿತ್ರ ಗೆದ್ದ ಖುಷಿಯಲ್ಲಿ ಅವರು ‘ಟಿವಿ9 ತೆಲುಗು’ಗೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಅವರು ತಮ್ಮ ಮುಂದಿನ ಪ್ರಾಜೆಕ್ಟ್ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Prashanth Neel: ಪ್ರಶಾಂತ್ ನೀಲ್ ಟ್ವಿಟರ್ ಖಾತೆ ಕ್ಲೋಸ್​; ನಿರ್ಧಾರಕ್ಕೆ ಕಾರಣವಾಯ್ತಾ ಉರ್ದು ಟ್ವೀಟ್​?
Image
Yash Birthday: ಬರ್ತ್​ಡೇಗೂ ಮೊದಲು ಅಭಿಮಾನಿಗಳ ಭೇಟಿ ಮಾಡಿದ ಯಶ್; ಇದಕ್ಕಿದೆ ಕಾರಣ
Image
Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ
Image
Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಅವರ ಕಾಲ್​​ಶೀಟ್ ದಿಲ್ ರಾಜು ಬಳಿ ಇದೆ. ಈಗ ಮಾತನಾಡಿರುವ ದಿಲ್ ರಾಜು, ‘ಪ್ರಶಾಂತ್ ನೀಲ್ ಜತೆ ರವಣಂ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ. ಇದು ಬಯೋಪಿಕ್​ ಎಂದು ಹೇಳಲಾಗುತ್ತಿದೆ. ಈ ಚಿತ್ರಕ್ಕೆ ಪ್ರಭಾಸ್ ಹೀರೋ ಎನ್ನಲಾಗುತ್ತಿದೆ.

ಇದನ್ನೂ ಓದಿ: Prashanth Neel: ಪ್ರಶಾಂತ್ ನೀಲ್ ಟ್ವಿಟರ್ ಖಾತೆ ಕ್ಲೋಸ್​; ನಿರ್ಧಾರಕ್ಕೆ ಕಾರಣವಾಯ್ತಾ ಉರ್ದು ಟ್ವೀಟ್​?

ಪ್ರಭಾಸ್ ಅವರು ಬ್ಯುಸಿ ಹೀರೋ ಎನಿಸಿಕೊಂಡಿದ್ದಾರೆ. ‘ಸಲಾರ್​’, ‘ಪ್ರಾಜೆಕ್ಟ್​ ಕೆ’, ‘ಆದಿಪುರುಷ್​’ ಮೊದಲಾದ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಇದರ ಜತೆಗೆ ಮೈತ್ರಿ ಮೂವಿ ಮೇಕರ್ಸ್ ಜತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಈ ಎಲ್ಲಾ ಕಮಿಟ್​ಮೆಂಟ್​​ಗಳು ಮುಗಿದ ಬಳಿಕವೇ ‘ರವಣಂ’ ಸಿನಿಮಾ ಸೆಟ್ಟೇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:31 pm, Tue, 17 January 23

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್