AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದೀಪ್​ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್​’ ಸಿನಿಮಾದಲ್ಲಿ ಜೋಡಿ ಆಗ್ತಾರಾ ತ್ರಿಶಾ-ಪ್ರಭಾಸ್​?

‘ವರ್ಷಂ’, ‘ಪೌರ್ಣಮಿ’, ‘ಬುಜ್ಜಿಗಾಡು’ ಸಿನಿಮಾಗಳಲ್ಲಿ ಪ್ರಭಾಸ್​ ಮತ್ತು ತ್ರಿಶಾ ಕೃಷ್ಣನ್​ ಜೋಡಿ ಆಗಿದ್ದರು. ಈಗ ಅವರನ್ನು ನಾಲ್ಕನೇ ಬಾರಿಗೆ ಒಂದಾಗಿಸಲು ಪ್ರಯತ್ನಗಳು ನಡೆಯುತ್ತಿವೆ. ‘ಸ್ಪಿರಿಟ್​’ ಸಿನಿಮಾದಲ್ಲಿ ಪ್ರಭಾಸ್​ ಜೊತೆ ತ್ರಿಶಾ ಅಭಿನಯಿಸುತ್ತಾರೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ತ್ರಿಶಾ ಜೊತೆ ಚಿತ್ರತಂಡದವರು ಮಾತಕಥೆ ನಡೆಸುತ್ತಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ.

ಸಂದೀಪ್​ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್​’ ಸಿನಿಮಾದಲ್ಲಿ ಜೋಡಿ ಆಗ್ತಾರಾ ತ್ರಿಶಾ-ಪ್ರಭಾಸ್​?
ಪ್ರಭಾಸ್​, ತ್ರಿಶಾ
ಮದನ್​ ಕುಮಾರ್​
|

Updated on: Aug 06, 2024 | 9:35 PM

Share

‘ಅನಿಮಲ್​’ ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರು ಪ್ರಭಾಸ್​ ಜೊತೆ ಹೊಸ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ ತಯಾರಿ ನಡೆಯುತ್ತಿದೆ. ‘ಸ್ಪಿರಿಟ್​’ ಎಂದು ಈ ಸಿನಿಮಾಗೆ ಶೀರ್ಷಿಕೆ ಇಡಲಾಗಿದೆ. ಪಾತ್ರವರ್ಗದ ಆಯ್ಕೆಯಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ಬ್ಯುಸಿ ಆಗಿದ್ದಾರೆ. ಚಿತ್ರತಂಡದಿಂದ ಅಧಿಕೃತವಾಗಿ ಮಾಹಿತಿ ಹೊರಬೀಳುವುದಕ್ಕೂ ಮುನ್ನವೇ ಕೆಲವು ಅಂತೆ-ಕಂತೆಗಳು ಹರಿದಾಡಲು ಆರಂಭಿಸಿವೆ. ‘ಸ್ಪಿರಿಟ್​’ ಸಿನಿಮಾದಲ್ಲಿ ಪ್ರಭಾಸ್​ ಅವರಿಗೆ ಜೋಡಿಯಾಗಿ ತ್ರಿಶಾ ಕೃಷ್ಣನ್​ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ನಟಿ ತ್ರಿಶಾ ಕೃಷ್ಣನ್​ ಅವರು ಕಳೆದ 2 ದಶಕಗಳಿಂದಲೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಹೀರೋಯಿನ್​ ಪಾತ್ರಗಳಿಗೆ ಈಗಲೂ ಅವರು ಬೇಡಿಕೆಯ ನಟಿಯಾಗಿದ್ದಾರೆ. ಸ್ಟಾರ್​ ನಟರಿಗೆ ತ್ರಿಶಾ ಜೋಡಿ ಆಗುತ್ತಿದ್ದಾರೆ. ‘ಸ್ಪಿರಿಟ್​’ ಚಿತ್ರಕ್ಕಾಗಿ ತ್ರಿಶಾ ಜೊತೆ ಸಂದೀಪ್ ರೆಡ್ಡಿ ವಂಗ ಅವರು ಮಾತುಕತೆ ನಡೆಸುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ. ಆದರೆ ಚಿತ್ರತಂಡದವರು ಅಧಿಕೃತವಾಗಿ ಘೋಷಿಸುವುದು ಬಾಕಿ ಇದೆ.

ಪ್ರಭಾಸ್​ ಅವರು ಈಗ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಯಾವುದೇ ರೀತಿಯಲ್ಲಿ ವಿಳಂಬ ಮಾಡದೇ ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಪ್ರಭಾಸ್​ ಬ್ಯುಸಿ ಆಗಿದ್ದಾರೆ. ‘ದಿ ರಾಜಾ ಸಾಬ್​’ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಸಂದೀಪ್​ ರೆಡ್ಡಿ ವಂಗಾ ಜೊತೆ ಪ್ರಭಾಸ್​ ಕೈ ಜೋಡಿಸಿರುವ ‘ಸ್ಪಿರಿಟ್​’ ಸಿನಿಮಾದ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ.

ಇದನ್ನೂ ಓದಿ: ‘ಆ ಉದ್ದೇಶಕ್ಕೆ ತ್ರಿಶಾರನ್ನು 25 ಲಕ್ಷ ರೂಪಾಯಿಗೆ ಕೇಳಿದ್ರು’ ಎಂದ ಎ.ವಿ. ರಾಜು ವಿರುದ್ಧ ನಟಿ ಗರಂ

ಸಂದೀಪ್​ ರೆಡ್ಡಿ ವಂಗಾ ಅವರು ‘ಅರ್ಜುನ್​ ರೆಡ್ಡಿ’, ‘ಕಬೀರ್ ಸಿಂಗ್​’, ‘ಅನಿಮಲ್​’ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಸಿನಿಮಾಗಳಲ್ಲಿ ಮಹಿಳೆಯರ ಪಾತ್ರವನ್ನು ಅವಹೇಳನಕಾರಿಯಾಗಿ ತೋರಿಸಲಾಗುತ್ತದೆ ಎಂಬ ಟೀಕೆ ಇದೆ. ‘ಅನಿಮಲ್​’ ಬಿಡುಗಡೆ ಆದಾಗ ಸಾಕಷ್ಟು ನೆಗೆಟಿವ್​ ಕಮೆಂಟ್​ಗಳು ಬಂದವು. ಹಾಗಾಗಿ ಸಂದೀಪ್ ರೆಡ್ಡಿ ವಂಗಾ ಜೊತೆ ಸಿನಿಮಾ ಮಾಡಲು ತ್ರಿಶಾ ಒಪ್ಪಿಕೊಳ್ಳುತ್ತಾರಾ ಎಂಬ ಅನುಮಾನ ಅನೇಕರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?