AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ-ತೆಲಂಗಾಣ ಪ್ರವಾಹ, ಪರಿಹಾರ ಕಾರ್ಯಕ್ಕೆ ಭಾರಿ ಮೊತ್ತದ ದೇಣಿಗೆ ನೀಡಿದ

ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ತೆಲುಗು ನಟರು ಪ್ರವಾಹ ಪೀಡಿತರ ನೆರವಿಗೆ ಧಾವಿಸಿದ್ದಾರೆ. ಹಲವು ಸ್ಟಾರ್ ನಟರು ಕೋಟ್ಯಂತರ ರೂಪಾಯಿ ಹಣವನ್ನು ಎರಡೂ ರಾಜ್ಯಗಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ಮಾಡಿದ್ದಾರೆ. ನಟ ಪ್ರಭಾಸ್ ಅಂತೂ ಭಾರಿ ಮೊತ್ತವನ್ನೇ ದೇಣಿಗೆಯಾಗಿ ನೀಡಿದ್ದಾರೆ.

ಆಂಧ್ರ-ತೆಲಂಗಾಣ ಪ್ರವಾಹ, ಪರಿಹಾರ ಕಾರ್ಯಕ್ಕೆ ಭಾರಿ ಮೊತ್ತದ ದೇಣಿಗೆ ನೀಡಿದ
ಮಂಜುನಾಥ ಸಿ.
|

Updated on:Sep 04, 2024 | 3:25 PM

Share

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರ ಪ್ರದೇಶ, ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ವರೆಗೆ 40 ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ. ಮಾತ್ರವಲ್ಲದೆ ನೂರಾರು ಮಂದಿ ಗಾಯಾಳುಗಳಾಗಿದ್ದಾರೆ. ಸಾವಿರ ಕೋಟಿ ಮೌಲ್ಯದ ಆಸ್ತಿ ನಷ್ಟವಾಗಿದೆ. ಹಲವಾರು ಮಂದಿ ಮನೆ, ಜಾನುವಾರ ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ಆಂಧ್ರ ಹಾಗೂ ತೆಲಂಗಾಣ ರಾಜ್ಯ ಸರ್ಕಾರಗಳು ಪ್ರವಾಹ ಪೀಡಿತರ ನೆರವಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ತೆಲುಗು ಚಿತ್ರರಂಗ ಸಹ ಎರಡೂ ರಾಜ್ಯಗಳ ಸರ್ಕಾರಗಳ ನೆರವಿಗೆ ನಿಂತಿದೆ. ಅದರಲ್ಲೂ ಕೆಲ ಸ್ಟಾರ್ ನಟರುಗಳು ದೊಡ್ಡ ಮೊತ್ತವನ್ನು ಪರಿಹಾರ ಕಾರ್ಯಗಳಿಗಾಗಿ ನೀಡಿದ್ದಾರೆ.

ನಟ ಜೂ ಎನ್​ಟಿಆರ್ ನಿನ್ನೆಯಷ್ಟೆ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ತಲಾ 50 ಲಕ್ಷ ರೂಪಾಯಿಗಳಂತೆ ಒಂದು ಕೋಟಿ ರೂಪಾಯಿ ನೆರವನ್ನು ಘೋಷಣೆ ಮಾಡಿದ್ದರು. ಅದರ ಬಳಿಕ ‘ಕಲ್ಕಿ 2898 ಎಡಿ’ ಚಿತ್ರತಂಡ ತಲಾ 25 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿತ್ತು. ಆ ಬಳಿಕ ನಟ ಮೆಗಾಸ್ಟಾರ್ ಚಿರಂಜೀವಿ ಎರಡು ರಾಜ್ಯಗಳಿಗೆ ತಲಾ 50 ಲಕ್ಷ ರೂಪಾಯಿಯಂತೆ ಒಂದು ಕೋಟಿ ರೂಪಾಯಿ ದೇಣಿಗೆ ಪ್ರಕಟಿಸಿದ್ದಾರೆ. ಇದೀಗ ತೆಲುಗು ಚಿತ್ರರಂಗದ ದೊಡ್ಡ ಸ್ಟಾರ್ ಎಂದೇ ಕರೆಸಿಕೊಳ್ಳುವ ಪ್ರಭಾಸ್ ಎಲ್ಲರಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಬರೋಬ್ಬರಿ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಇದನ್ನೂ ಓದಿ: ಆಂಧ್ರ-ತೆಲಂಗಾಣ ಪ್ರವಾಹ: ಸಹಾಯ ಹಸ್ತ ಚಾಚಿದ ಜೂ ಎನ್​ಟಿಆರ್

ತೆಲಂಗಾಣ ಸಿಎಂ ಪರಿಹಾರ ನಿಧಿಗೆ 1 ಕೋಟಿ ಹಾಗೂ ಆಂಧ್ರ ಪ್ರದೇಶ ಸಿಎಂ ರಿಲೀಫ್ ಫಂಡ್​ಗೆ 1 ಕೋಟಿ ರೂಪಾಯಿಗಳಂತೆ ಬರೋಬ್ಬರಿ 5 ಕೋಟಿ ರೂಪಾಯಿಗಳನ್ನು ಪ್ರಭಾಸ್ ದೇಣಿಗೆಯಾಗಿ ನೀಡಿದ್ದಾರೆ. ಈ ಹಿಂದೆ ಕೇರಳದಲ್ಲಿ ಭಾರಿ ಪ್ರವಾಹ ಉಂಟಾದಾಗ ನಟ ಪ್ರಭಾಸ್ ಒಂದು ಕೋಟಿ ರೂಪಾಯಿ ಹಣವನ್ನು ದೇಣಿಗೆ ನೀಡಿದ್ದರು. ಈಗ ತಮ್ಮ ಸ್ವಂತ ರಾಜ್ಯದಲ್ಲೇ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣ ಪರಿಹಾರ ಮೊತ್ತವನ್ನು ಹೆಚ್ಚು ಮಾಡಿ ಐದು ಕೋಟಿ ರೂಪಾಯಿ ಹಣ ನೀಡಿದ್ದಾರೆ.

ಇವರುಗಳು ಮಾತ್ರವೇ ಅಲ್ಲದೆ ಮಹೇಶ್ ಬಾಬು ತಲಾ 50 ಲಕ್ಷದಂತೆ 1 ಕೋಟಿ, ನಟ, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ 1 ಕೋಟಿ, ನಟ ಅಲ್ಲು ಅರ್ಜುನ್ 1 ಕೋಟಿ, ನಂದಮೂರಿ ಬಾಲಕೃಷ್ಣ 1 ಕೋಟಿ, ಯುವನಟ ವಿಶ್ವಕ್ ಸೇನ್ 10 ಲಕ್ಷ, ಸಿದ್ದು ಜೊನ್ನಗಡ್ಡ 30 ಲಕ್ಷ, ನಟಿ ಅನನ್ಯಾ ನಾಗಳ್ಳ ಐದು ಲಕ್ಷ ರೂಪಾಯಿ ಹಣ ಸಹಾಯ ಮಾಡಿದ್ದಾರೆ. ಇನ್ನು ಆಂಧ್ರ ಪ್ರದೇಶ ರಾಜ್ಯದ ಉಪಮುಖ್ಯಮಂತ್ರಿಯೂ ಆಗಿರುವ ಪವನ್ ಕಲ್ಯಾಣ್, ಎರಡು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಇರುವ ಕಾರಣ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳದೇ ಇರಲು ನಿರ್ಧರಿಸಿದ್ದು, ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:55 pm, Wed, 4 September 24

ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್
ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ