AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ಪ್ರಭಾಸ್​ ಅಭಿಮಾನಿಯ ಸೂಸೈಡ್​ ಲೆಟರ್​ ವೈರಲ್​; ‘ರಾಧೆ ಶ್ಯಾಮ್​’ ತಂಡಕ್ಕೆ ಹೊಸ ಕಿರಿಕಿರಿ

Radhe Shyam: ಸ್ಟಾರ್​ ನಟರಿಗೆ ಈ ರೀತಿಯ ಕೆಲವು ಹುಚ್ಚು ಅಭಿಮಾನಿಗಳು ಇರುತ್ತಾರೆ. ಈಗ ಪ್ರಭಾಸ್​ ಅಭಿಮಾನಿ ಈ ರೀತಿ ಸೂಸೈಡ್​ ಮಾಡಿಕೊಳ್ಳುವುದಾಗಿ ಹೇಳಿರುವುದು ತುಂಬ ಕ್ಷುಲ್ಲಕ ಕಾರಣಕ್ಕೆ.

Prabhas: ಪ್ರಭಾಸ್​ ಅಭಿಮಾನಿಯ ಸೂಸೈಡ್​ ಲೆಟರ್​ ವೈರಲ್​; ‘ರಾಧೆ ಶ್ಯಾಮ್​’ ತಂಡಕ್ಕೆ ಹೊಸ ಕಿರಿಕಿರಿ
‘ರಾಧೆ ಶ್ಯಾಮ್’​ ಸಿನಿಮಾದಲ್ಲಿ ಪೂಜಾ ಹೆಗ್ಡೆ, ಪ್ರಭಾಸ್​
TV9 Web
| Edited By: |

Updated on: Nov 13, 2021 | 8:13 AM

Share

ನಟ ಪ್ರಭಾಸ್​ (Prabhas) ಅವರು ‘ಬಾಹುಬಲಿ’ ಚಿತ್ರದ ಯಶಸ್ಸಿನ ಬಳಿಕ ಪ್ಯಾನ್​ ಇಂಡಿಯಾ ಸ್ಟಾರ್ ಆಗಿ ಬೆಳೆದರು. ಆ ನಂತರ ಅವರು ಅಭಿನಯಿಸಿದ ‘ಸಾಹೋ’ ಸಿನಿಮಾ ಅಷ್ಟೇನೂ ಸದ್ದು ಮಾಡಲಿಲ್ಲ. ಹಾಗಾಂತ ಅವರ ಫ್ಯಾನ್​ ಬೇಸ್​ ಕಿಂಚಿತ್ತೂ ಕಡಿಮೆ ಆಗಲಿಲ್ಲ. ಈಗ ಪ್ರಭಾಸ್​ ಹಲವು ಚಿತ್ರಗಳಲ್ಲಿ ತೊಡಗಿಕೊಂಡಿದ್ದಾರೆ. ಓಂ ರಾವುತ್​ ನಿರ್ದೇಶನದ ‘ಆದಿಪುರುಷ್​’, ಪ್ರಶಾಂತ್ ನೀಲ್​ ನಿರ್ದೇಶನದ ‘ಸಲಾರ್​’, ರಾಧಾ ಕೃಷ್ಣ ಕುಮಾರ್​ ನಿರ್ದೇಶನದ ‘ರಾಧೆಶ್ಯಾಮ್​’ (Radhe Shyam) ಸಿನಿಮಾಗಳು ಭಾರಿ ನಿರೀಕ್ಷೆ ಮೂಡಿಸಿವೆ. 2022ರ ಜ.14ರಂದು ‘ರಾಧೆ ಶ್ಯಾಮ್​’ ಬಿಡುಗಡೆ ಆಗಲಿದೆ. ಆದರೆ ಈಗ ಚಿತ್ರತಂಡಕ್ಕೆ ಕಿರಿಕಿರಿ ಆಗುವಂತಹ ಘಟನೆಯೊಂದು ನಡೆದಿದೆ. ಪ್ರಭಾಸ್​ ಅವರ ಹುಚ್ಚು ಅಭಿಮಾನಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಳ್ಳುವುದಾಗಿ ಹೇಳಿದ್ದಾನೆ. ಆತ ಬರೆದಿರುವ ಸೂಸೈಡ್​ ​ನೋಟ್ (Suicide Note)​ ಸಹ ವೈರಲ್​ ಆಗಿದೆ.

ಸ್ಟಾರ್​ ನಟರಿಗೆ ಈ ರೀತಿಯ ಕೆಲವು ಹುಚ್ಚು ಅಭಿಮಾನಿಗಳು ಇರುತ್ತಾರೆ. ವಿವೇಚನೆ ಇಲ್ಲದ ಕೆಲಸಕ್ಕೆ ಅಂಥವರು ಕೈ ಹಾಕುತ್ತಾರೆ. ಅಷ್ಟಕ್ಕೂ ಈಗ ಪ್ರಭಾಸ್​ ಅಭಿಮಾನಿ ಈ ರೀತಿ ಸೂಸೈಡ್​ ಮಾಡಿಕೊಳ್ಳುವುದಾಗಿ ಹೇಳಿರುವುದು ತುಂಬ ಕ್ಷುಲ್ಲಕ ಕಾರಣಕ್ಕೆ. ಪ್ರಭಾಸ್​ ನಟನೆಯ ‘ರಾಧೆಶ್ಯಾಮ್​’ ಚಿತ್ರತಂಡದಿಂದ ಯಾವುದೇ ಅಪ್​ಡೇಟ್​ ಸಿಗುತ್ತಿಲ್ಲ ಎಂಬ ಕಾರಣ ತಾನು ಸೂಸೈಡ್​ ಮಾಡಿಕೊಳ್ಳುವುದಾಗಿ ಆತ ಹೇಳಿದ್ದಾನೆ. ಈ ಚಿತ್ರಕ್ಕೆ ಪ್ರತಿಷ್ಠಿತ ‘ಯುವಿ ಕ್ರಿಯೇಷನ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. ತನ್ನ ಈ ಆತ್ಮಹತ್ಯೆ ನಿರ್ಧಾರಕ್ಕೆ ‘ಯುವಿ ಕ್ರಿಯೇಷನ್ಸ್​’ ಮತ್ತು ನಿರ್ದೇಶಕ ರಾಧಾ ಕೃಷ್ಣ ಕುಮಾರ್​ ಅವರೇ ಕಾರಣ ಎಂದು ಆತ ಸೂಸೈಡ್​​ ನೋಟ್​ನಲ್ಲಿ ಬರೆದಿದ್ದಾನೆ.

‘ಈವರೆಗೆ ನಾನು ಯಾವುದೇ ಲೆಟರ್​ ಬರೆದಿಲ್ಲ. ಆದರೆ ಸೂಸೈಡ್​ ಲೆಟರ್​ ಬರೆಯುತ್ತೇನೆ ಎಂದು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಕೊನೇ ಪಕ್ಷ ನನ್ನ ಸಾವನ್ನು ನೋಡಿದ ಬಳಿಕವಾದರೂ ರಾಧೆ ಶ್ಯಾಮ್​ ತಂಡದವರು ಅಪ್​ಡೇಟ್​ ನೀಡುತ್ತಾರೆ ಎಂದುಕೊಂಡಿದ್ದೇನೆ. ಸಾಕಾಗಿ ಹೋಗಿದೆ. ಇನ್ಮೇಲೆ ಕೇಳುವುದಿಲ್ಲ’ ಎಂದು ಆತ ಈ ಪತ್ರದಲ್ಲಿ ಬರೆದಿದ್ದಾನೆ.

ಈಗಾಗಲೇ ಈ ಸಿನಿಮಾದ ಟೀಸರ್​ಗಳು ರಿಲೀಸ್​ ಆಗಿದ್ದು, ಚಿತ್ರದ ಬಗೆಗಿನ ಕುತೂಹಲ ಹೆಚ್ಚಿಸಿವೆ. ವಿಕ್ರಮಾದಿತ್ಯ ಎಂಬ ಪಾತ್ರವನ್ನು ಪ್ರಭಾಸ್​ ನಿಭಾಯಿಸುತ್ತಿದ್ದಾರೆ. ಅವರಿಗೆ ಜೋಡಿಯಾಗಿ ಖ್ಯಾತ ನಟಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳಲಿದ್ದಾರೆ. ತೆಲುಗು ಮಾತ್ರವಲ್ಲದೆ ಕನ್ನಡ, ಹಿಂದಿ, ಮಲಯಾಳಂ ಮತ್ತು ತಮಿಳಿನಲ್ಲೂ ಈ ಚಿತ್ರ ಬಿಡುಗಡೆ ಆಗಲಿದೆ. ಪ್ರಭಾಸ್​ ಅವರ ಈ ಹಿಂದಿನ ಎಲ್ಲ ಸಿನಿಮಾಗಳಿಗಿಂತಲೂ ‘ರಾಧೆ ಶ್ಯಾಮ್​’ ಭಿನ್ನವಾಗಿ ಮೂಡಿಬಂದಿದೆ ಎಂಬುದಕ್ಕೆ ಟೀಸರ್​ಗಳೇ ಸಾಕ್ಷಿ ಒದಗಿಸುತ್ತಿವೆ. ಲವರ್​ ಬಾಯ್​ ಗೆಟಪ್​ನಲ್ಲಿ ಪ್ರಭಾಸ್​ ರಂಜಿಸಲಿದ್ದಾರೆ.

ಇದನ್ನೂ ಓದಿ:

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

Prabhas: ‘ಸಲಾರ್​’ ವಿಡಿಯೋ ಲೀಕ್​: ಕಿಡಿಗೇಡಿಗಳ ಕೆಲಸದಿಂದ ಪ್ರಭಾಸ್​ ಅಭಿಮಾನಿಗಳಿಗೆ ಪದೇಪದೇ ನಿರಾಸೆ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ