AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ಪ್ರಭಾಸ್​ ಅಭಿಮಾನಿಯ ಸೂಸೈಡ್​ ಲೆಟರ್​ ವೈರಲ್​; ‘ರಾಧೆ ಶ್ಯಾಮ್​’ ತಂಡಕ್ಕೆ ಹೊಸ ಕಿರಿಕಿರಿ

Radhe Shyam: ಸ್ಟಾರ್​ ನಟರಿಗೆ ಈ ರೀತಿಯ ಕೆಲವು ಹುಚ್ಚು ಅಭಿಮಾನಿಗಳು ಇರುತ್ತಾರೆ. ಈಗ ಪ್ರಭಾಸ್​ ಅಭಿಮಾನಿ ಈ ರೀತಿ ಸೂಸೈಡ್​ ಮಾಡಿಕೊಳ್ಳುವುದಾಗಿ ಹೇಳಿರುವುದು ತುಂಬ ಕ್ಷುಲ್ಲಕ ಕಾರಣಕ್ಕೆ.

Prabhas: ಪ್ರಭಾಸ್​ ಅಭಿಮಾನಿಯ ಸೂಸೈಡ್​ ಲೆಟರ್​ ವೈರಲ್​; ‘ರಾಧೆ ಶ್ಯಾಮ್​’ ತಂಡಕ್ಕೆ ಹೊಸ ಕಿರಿಕಿರಿ
‘ರಾಧೆ ಶ್ಯಾಮ್’​ ಸಿನಿಮಾದಲ್ಲಿ ಪೂಜಾ ಹೆಗ್ಡೆ, ಪ್ರಭಾಸ್​
TV9 Web
| Edited By: |

Updated on: Nov 13, 2021 | 8:13 AM

Share

ನಟ ಪ್ರಭಾಸ್​ (Prabhas) ಅವರು ‘ಬಾಹುಬಲಿ’ ಚಿತ್ರದ ಯಶಸ್ಸಿನ ಬಳಿಕ ಪ್ಯಾನ್​ ಇಂಡಿಯಾ ಸ್ಟಾರ್ ಆಗಿ ಬೆಳೆದರು. ಆ ನಂತರ ಅವರು ಅಭಿನಯಿಸಿದ ‘ಸಾಹೋ’ ಸಿನಿಮಾ ಅಷ್ಟೇನೂ ಸದ್ದು ಮಾಡಲಿಲ್ಲ. ಹಾಗಾಂತ ಅವರ ಫ್ಯಾನ್​ ಬೇಸ್​ ಕಿಂಚಿತ್ತೂ ಕಡಿಮೆ ಆಗಲಿಲ್ಲ. ಈಗ ಪ್ರಭಾಸ್​ ಹಲವು ಚಿತ್ರಗಳಲ್ಲಿ ತೊಡಗಿಕೊಂಡಿದ್ದಾರೆ. ಓಂ ರಾವುತ್​ ನಿರ್ದೇಶನದ ‘ಆದಿಪುರುಷ್​’, ಪ್ರಶಾಂತ್ ನೀಲ್​ ನಿರ್ದೇಶನದ ‘ಸಲಾರ್​’, ರಾಧಾ ಕೃಷ್ಣ ಕುಮಾರ್​ ನಿರ್ದೇಶನದ ‘ರಾಧೆಶ್ಯಾಮ್​’ (Radhe Shyam) ಸಿನಿಮಾಗಳು ಭಾರಿ ನಿರೀಕ್ಷೆ ಮೂಡಿಸಿವೆ. 2022ರ ಜ.14ರಂದು ‘ರಾಧೆ ಶ್ಯಾಮ್​’ ಬಿಡುಗಡೆ ಆಗಲಿದೆ. ಆದರೆ ಈಗ ಚಿತ್ರತಂಡಕ್ಕೆ ಕಿರಿಕಿರಿ ಆಗುವಂತಹ ಘಟನೆಯೊಂದು ನಡೆದಿದೆ. ಪ್ರಭಾಸ್​ ಅವರ ಹುಚ್ಚು ಅಭಿಮಾನಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಳ್ಳುವುದಾಗಿ ಹೇಳಿದ್ದಾನೆ. ಆತ ಬರೆದಿರುವ ಸೂಸೈಡ್​ ​ನೋಟ್ (Suicide Note)​ ಸಹ ವೈರಲ್​ ಆಗಿದೆ.

ಸ್ಟಾರ್​ ನಟರಿಗೆ ಈ ರೀತಿಯ ಕೆಲವು ಹುಚ್ಚು ಅಭಿಮಾನಿಗಳು ಇರುತ್ತಾರೆ. ವಿವೇಚನೆ ಇಲ್ಲದ ಕೆಲಸಕ್ಕೆ ಅಂಥವರು ಕೈ ಹಾಕುತ್ತಾರೆ. ಅಷ್ಟಕ್ಕೂ ಈಗ ಪ್ರಭಾಸ್​ ಅಭಿಮಾನಿ ಈ ರೀತಿ ಸೂಸೈಡ್​ ಮಾಡಿಕೊಳ್ಳುವುದಾಗಿ ಹೇಳಿರುವುದು ತುಂಬ ಕ್ಷುಲ್ಲಕ ಕಾರಣಕ್ಕೆ. ಪ್ರಭಾಸ್​ ನಟನೆಯ ‘ರಾಧೆಶ್ಯಾಮ್​’ ಚಿತ್ರತಂಡದಿಂದ ಯಾವುದೇ ಅಪ್​ಡೇಟ್​ ಸಿಗುತ್ತಿಲ್ಲ ಎಂಬ ಕಾರಣ ತಾನು ಸೂಸೈಡ್​ ಮಾಡಿಕೊಳ್ಳುವುದಾಗಿ ಆತ ಹೇಳಿದ್ದಾನೆ. ಈ ಚಿತ್ರಕ್ಕೆ ಪ್ರತಿಷ್ಠಿತ ‘ಯುವಿ ಕ್ರಿಯೇಷನ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. ತನ್ನ ಈ ಆತ್ಮಹತ್ಯೆ ನಿರ್ಧಾರಕ್ಕೆ ‘ಯುವಿ ಕ್ರಿಯೇಷನ್ಸ್​’ ಮತ್ತು ನಿರ್ದೇಶಕ ರಾಧಾ ಕೃಷ್ಣ ಕುಮಾರ್​ ಅವರೇ ಕಾರಣ ಎಂದು ಆತ ಸೂಸೈಡ್​​ ನೋಟ್​ನಲ್ಲಿ ಬರೆದಿದ್ದಾನೆ.

‘ಈವರೆಗೆ ನಾನು ಯಾವುದೇ ಲೆಟರ್​ ಬರೆದಿಲ್ಲ. ಆದರೆ ಸೂಸೈಡ್​ ಲೆಟರ್​ ಬರೆಯುತ್ತೇನೆ ಎಂದು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಕೊನೇ ಪಕ್ಷ ನನ್ನ ಸಾವನ್ನು ನೋಡಿದ ಬಳಿಕವಾದರೂ ರಾಧೆ ಶ್ಯಾಮ್​ ತಂಡದವರು ಅಪ್​ಡೇಟ್​ ನೀಡುತ್ತಾರೆ ಎಂದುಕೊಂಡಿದ್ದೇನೆ. ಸಾಕಾಗಿ ಹೋಗಿದೆ. ಇನ್ಮೇಲೆ ಕೇಳುವುದಿಲ್ಲ’ ಎಂದು ಆತ ಈ ಪತ್ರದಲ್ಲಿ ಬರೆದಿದ್ದಾನೆ.

ಈಗಾಗಲೇ ಈ ಸಿನಿಮಾದ ಟೀಸರ್​ಗಳು ರಿಲೀಸ್​ ಆಗಿದ್ದು, ಚಿತ್ರದ ಬಗೆಗಿನ ಕುತೂಹಲ ಹೆಚ್ಚಿಸಿವೆ. ವಿಕ್ರಮಾದಿತ್ಯ ಎಂಬ ಪಾತ್ರವನ್ನು ಪ್ರಭಾಸ್​ ನಿಭಾಯಿಸುತ್ತಿದ್ದಾರೆ. ಅವರಿಗೆ ಜೋಡಿಯಾಗಿ ಖ್ಯಾತ ನಟಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳಲಿದ್ದಾರೆ. ತೆಲುಗು ಮಾತ್ರವಲ್ಲದೆ ಕನ್ನಡ, ಹಿಂದಿ, ಮಲಯಾಳಂ ಮತ್ತು ತಮಿಳಿನಲ್ಲೂ ಈ ಚಿತ್ರ ಬಿಡುಗಡೆ ಆಗಲಿದೆ. ಪ್ರಭಾಸ್​ ಅವರ ಈ ಹಿಂದಿನ ಎಲ್ಲ ಸಿನಿಮಾಗಳಿಗಿಂತಲೂ ‘ರಾಧೆ ಶ್ಯಾಮ್​’ ಭಿನ್ನವಾಗಿ ಮೂಡಿಬಂದಿದೆ ಎಂಬುದಕ್ಕೆ ಟೀಸರ್​ಗಳೇ ಸಾಕ್ಷಿ ಒದಗಿಸುತ್ತಿವೆ. ಲವರ್​ ಬಾಯ್​ ಗೆಟಪ್​ನಲ್ಲಿ ಪ್ರಭಾಸ್​ ರಂಜಿಸಲಿದ್ದಾರೆ.

ಇದನ್ನೂ ಓದಿ:

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

Prabhas: ‘ಸಲಾರ್​’ ವಿಡಿಯೋ ಲೀಕ್​: ಕಿಡಿಗೇಡಿಗಳ ಕೆಲಸದಿಂದ ಪ್ರಭಾಸ್​ ಅಭಿಮಾನಿಗಳಿಗೆ ಪದೇಪದೇ ನಿರಾಸೆ

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ