AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ದೇಶಾದ್ಯಂತ ಮಾತ್ರವಲ್ಲದೇ ವಿದೇಶದಲ್ಲೂ ಅವರಿಗೆ ಅಭಿಮಾನಿಗಳು ಇದ್ದಾರೆ. ಅದಕ್ಕೆ ಇಲ್ಲೊಂದು ಲೇಟೆಸ್ಟ್ ಸಾಕ್ಷಿ ಸಿಕ್ಕಿದೆ. ಟೋಕಿಯೋದಲ್ಲಿ ಇರುವ ಪ್ರಭಾಸ್ ಅಭಿಮಾನಿಗಳು ಮುಂಚಿತವಾಗಿಯೇ ಪ್ರಭಾಸ್ ಅವರ ಜನ್ಮದಿನವನ್ನು ಆಚರಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು
ಪ್ರಭಾಸ್ ಫ್ಯಾನ್ಸ್​
ಮದನ್​ ಕುಮಾರ್​
|

Updated on: Oct 21, 2024 | 7:21 PM

Share

ನಟ ಪ್ರಭಾಸ್ ಅವರು ಅಭಿಮಾನಿಗಳ ಪಾಲಿನ ಡಾರ್ಲಿಂಗ್. ‘ಬಾಹುಬಲಿ’ ಸಿನಿಮಾ ಸೂಪರ್​ ಹಿಟ್ ಆದ ಬಳಿಕ ಅವರ ಹವಾ ಹೆಚ್ಚಾಯಿತು. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಅವರು ಗುರುತಿಸಿಕೊಂಡರು. ಪ್ರತಿ ವರ್ಷ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಅಕ್ಟೋಬರ್​ 23ರಂದು ಪ್ರಭಾಸ್ ಅವರ ಜನ್ಮದಿನ. ಈ ಬಾರಿ ಅದ್ದೂರಿಯಾಗಿ ಬರ್ತ್​ಡೇ ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಕಾದಿದ್ದಾರೆ. ವಿಶೇಷ ಏನೆಂದರೆ, ಟೋಕಿಯೋದಲ್ಲಿ ಇರುವ ಪ್ರಭಾಸ್ ಅಭಿಮಾನಿಗಳು ಮುಂಚಿತವಾಗಿಯೇ ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ.

ಹೌದು, ಜಪಾನ್​ನಲ್ಲೂ ಪ್ರಭಾಸ್ ಅವರಿಗೆ ಅಭಿಮಾನಿಗಳು ಇದ್ದಾರೆ. ಅಲ್ಲಿನ ಚಿತ್ರಮಂದಿರವೊಂದರಲ್ಲಿ ಅಭಿಮಾನಿಗಳು ‘ರಾಧೆ ಶ್ಯಾಮ್’ ಸಿನಿಮಾವನ್ನು ನೋಡಿದ್ದಾರೆ. ಬಳಿಕ ಪ್ರಭಾಸ್​ಗೆ ಹ್ಯಾಪಿ ಬರ್ತ್​ಡೇ ಎಂದು ವಿಶ್ ಮಾಡಿದ್ದಾರೆ. ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಟೋಕಿಯಾದಿಂದ ಅಭಿಮಾನಿಗಳು ತೋರಿದ ಪ್ರೀತಿಗೆ ಪ್ರಭಾಸ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಬೇಕು.

ಪ್ರಭಾಸ್​ ಅವರಿಗೆ ಈ ವರ್ಷದ ಬರ್ತ್​ಡೇ ತುಂಬ ಸ್ಪೆಷಲ್. ಯಾಕೆಂದರೆ, ಅವರು ನಟಿಸಿದ ‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್​ ಹಿಟ್ ಆಗಿದೆ. ‘ಬಾಹುಬಲಿ’ ಬಳಿಕ ಸತತ ಸೋಲು ಕಂಡಿದ್ದ ಅವರು ‘ಸಲಾರ್​’ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿದರು. ಅವರ ಮುಂದಿನ ಸಿನಿಮಾಗಳ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ಮೂರು ಸಿನಿಮಾಗಳು ಒಟ್ಟಿಗೆ ಮರು ಬಿಡುಗಡೆ

ಪ್ರಭಾಸ್ ಅವರು ‘ದಿ ರಾಜಾ ಸಾಬ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬರ್ತ್​ಡೇಗೂ ಮುಂಚಿತವಾಗಿ ಈ ಚಿತ್ರತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದಲ್ಲದೇ ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಲಿರುವ ‘ಸ್ಪಿರಿಟ್’ ಸಿನಿಮಾದಲ್ಲೂ ಪ್ರಭಾಸ್ ನಟಿಸಲಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಆ ಸಿನಿಮಾ ಬಗ್ಗೆಯೂ ಏನಾದರೂ ಅಪ್​ಡೇಟ್​ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್