AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ದೇಶಾದ್ಯಂತ ಮಾತ್ರವಲ್ಲದೇ ವಿದೇಶದಲ್ಲೂ ಅವರಿಗೆ ಅಭಿಮಾನಿಗಳು ಇದ್ದಾರೆ. ಅದಕ್ಕೆ ಇಲ್ಲೊಂದು ಲೇಟೆಸ್ಟ್ ಸಾಕ್ಷಿ ಸಿಕ್ಕಿದೆ. ಟೋಕಿಯೋದಲ್ಲಿ ಇರುವ ಪ್ರಭಾಸ್ ಅಭಿಮಾನಿಗಳು ಮುಂಚಿತವಾಗಿಯೇ ಪ್ರಭಾಸ್ ಅವರ ಜನ್ಮದಿನವನ್ನು ಆಚರಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು
ಪ್ರಭಾಸ್ ಫ್ಯಾನ್ಸ್​
ಮದನ್​ ಕುಮಾರ್​
|

Updated on: Oct 21, 2024 | 7:21 PM

Share

ನಟ ಪ್ರಭಾಸ್ ಅವರು ಅಭಿಮಾನಿಗಳ ಪಾಲಿನ ಡಾರ್ಲಿಂಗ್. ‘ಬಾಹುಬಲಿ’ ಸಿನಿಮಾ ಸೂಪರ್​ ಹಿಟ್ ಆದ ಬಳಿಕ ಅವರ ಹವಾ ಹೆಚ್ಚಾಯಿತು. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಅವರು ಗುರುತಿಸಿಕೊಂಡರು. ಪ್ರತಿ ವರ್ಷ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಅಕ್ಟೋಬರ್​ 23ರಂದು ಪ್ರಭಾಸ್ ಅವರ ಜನ್ಮದಿನ. ಈ ಬಾರಿ ಅದ್ದೂರಿಯಾಗಿ ಬರ್ತ್​ಡೇ ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಕಾದಿದ್ದಾರೆ. ವಿಶೇಷ ಏನೆಂದರೆ, ಟೋಕಿಯೋದಲ್ಲಿ ಇರುವ ಪ್ರಭಾಸ್ ಅಭಿಮಾನಿಗಳು ಮುಂಚಿತವಾಗಿಯೇ ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ.

ಹೌದು, ಜಪಾನ್​ನಲ್ಲೂ ಪ್ರಭಾಸ್ ಅವರಿಗೆ ಅಭಿಮಾನಿಗಳು ಇದ್ದಾರೆ. ಅಲ್ಲಿನ ಚಿತ್ರಮಂದಿರವೊಂದರಲ್ಲಿ ಅಭಿಮಾನಿಗಳು ‘ರಾಧೆ ಶ್ಯಾಮ್’ ಸಿನಿಮಾವನ್ನು ನೋಡಿದ್ದಾರೆ. ಬಳಿಕ ಪ್ರಭಾಸ್​ಗೆ ಹ್ಯಾಪಿ ಬರ್ತ್​ಡೇ ಎಂದು ವಿಶ್ ಮಾಡಿದ್ದಾರೆ. ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಟೋಕಿಯಾದಿಂದ ಅಭಿಮಾನಿಗಳು ತೋರಿದ ಪ್ರೀತಿಗೆ ಪ್ರಭಾಸ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಬೇಕು.

ಪ್ರಭಾಸ್​ ಅವರಿಗೆ ಈ ವರ್ಷದ ಬರ್ತ್​ಡೇ ತುಂಬ ಸ್ಪೆಷಲ್. ಯಾಕೆಂದರೆ, ಅವರು ನಟಿಸಿದ ‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್​ ಹಿಟ್ ಆಗಿದೆ. ‘ಬಾಹುಬಲಿ’ ಬಳಿಕ ಸತತ ಸೋಲು ಕಂಡಿದ್ದ ಅವರು ‘ಸಲಾರ್​’ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿದರು. ಅವರ ಮುಂದಿನ ಸಿನಿಮಾಗಳ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ಮೂರು ಸಿನಿಮಾಗಳು ಒಟ್ಟಿಗೆ ಮರು ಬಿಡುಗಡೆ

ಪ್ರಭಾಸ್ ಅವರು ‘ದಿ ರಾಜಾ ಸಾಬ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬರ್ತ್​ಡೇಗೂ ಮುಂಚಿತವಾಗಿ ಈ ಚಿತ್ರತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದಲ್ಲದೇ ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಲಿರುವ ‘ಸ್ಪಿರಿಟ್’ ಸಿನಿಮಾದಲ್ಲೂ ಪ್ರಭಾಸ್ ನಟಿಸಲಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಆ ಸಿನಿಮಾ ಬಗ್ಗೆಯೂ ಏನಾದರೂ ಅಪ್​ಡೇಟ್​ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ