AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ದೇಶಾದ್ಯಂತ ಮಾತ್ರವಲ್ಲದೇ ವಿದೇಶದಲ್ಲೂ ಅವರಿಗೆ ಅಭಿಮಾನಿಗಳು ಇದ್ದಾರೆ. ಅದಕ್ಕೆ ಇಲ್ಲೊಂದು ಲೇಟೆಸ್ಟ್ ಸಾಕ್ಷಿ ಸಿಕ್ಕಿದೆ. ಟೋಕಿಯೋದಲ್ಲಿ ಇರುವ ಪ್ರಭಾಸ್ ಅಭಿಮಾನಿಗಳು ಮುಂಚಿತವಾಗಿಯೇ ಪ್ರಭಾಸ್ ಅವರ ಜನ್ಮದಿನವನ್ನು ಆಚರಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು
ಪ್ರಭಾಸ್ ಫ್ಯಾನ್ಸ್​
ಮದನ್​ ಕುಮಾರ್​
|

Updated on: Oct 21, 2024 | 7:21 PM

Share

ನಟ ಪ್ರಭಾಸ್ ಅವರು ಅಭಿಮಾನಿಗಳ ಪಾಲಿನ ಡಾರ್ಲಿಂಗ್. ‘ಬಾಹುಬಲಿ’ ಸಿನಿಮಾ ಸೂಪರ್​ ಹಿಟ್ ಆದ ಬಳಿಕ ಅವರ ಹವಾ ಹೆಚ್ಚಾಯಿತು. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಅವರು ಗುರುತಿಸಿಕೊಂಡರು. ಪ್ರತಿ ವರ್ಷ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಅಕ್ಟೋಬರ್​ 23ರಂದು ಪ್ರಭಾಸ್ ಅವರ ಜನ್ಮದಿನ. ಈ ಬಾರಿ ಅದ್ದೂರಿಯಾಗಿ ಬರ್ತ್​ಡೇ ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಕಾದಿದ್ದಾರೆ. ವಿಶೇಷ ಏನೆಂದರೆ, ಟೋಕಿಯೋದಲ್ಲಿ ಇರುವ ಪ್ರಭಾಸ್ ಅಭಿಮಾನಿಗಳು ಮುಂಚಿತವಾಗಿಯೇ ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ.

ಹೌದು, ಜಪಾನ್​ನಲ್ಲೂ ಪ್ರಭಾಸ್ ಅವರಿಗೆ ಅಭಿಮಾನಿಗಳು ಇದ್ದಾರೆ. ಅಲ್ಲಿನ ಚಿತ್ರಮಂದಿರವೊಂದರಲ್ಲಿ ಅಭಿಮಾನಿಗಳು ‘ರಾಧೆ ಶ್ಯಾಮ್’ ಸಿನಿಮಾವನ್ನು ನೋಡಿದ್ದಾರೆ. ಬಳಿಕ ಪ್ರಭಾಸ್​ಗೆ ಹ್ಯಾಪಿ ಬರ್ತ್​ಡೇ ಎಂದು ವಿಶ್ ಮಾಡಿದ್ದಾರೆ. ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಟೋಕಿಯಾದಿಂದ ಅಭಿಮಾನಿಗಳು ತೋರಿದ ಪ್ರೀತಿಗೆ ಪ್ರಭಾಸ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಬೇಕು.

ಪ್ರಭಾಸ್​ ಅವರಿಗೆ ಈ ವರ್ಷದ ಬರ್ತ್​ಡೇ ತುಂಬ ಸ್ಪೆಷಲ್. ಯಾಕೆಂದರೆ, ಅವರು ನಟಿಸಿದ ‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್​ ಹಿಟ್ ಆಗಿದೆ. ‘ಬಾಹುಬಲಿ’ ಬಳಿಕ ಸತತ ಸೋಲು ಕಂಡಿದ್ದ ಅವರು ‘ಸಲಾರ್​’ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿದರು. ಅವರ ಮುಂದಿನ ಸಿನಿಮಾಗಳ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ಮೂರು ಸಿನಿಮಾಗಳು ಒಟ್ಟಿಗೆ ಮರು ಬಿಡುಗಡೆ

ಪ್ರಭಾಸ್ ಅವರು ‘ದಿ ರಾಜಾ ಸಾಬ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬರ್ತ್​ಡೇಗೂ ಮುಂಚಿತವಾಗಿ ಈ ಚಿತ್ರತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದಲ್ಲದೇ ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಲಿರುವ ‘ಸ್ಪಿರಿಟ್’ ಸಿನಿಮಾದಲ್ಲೂ ಪ್ರಭಾಸ್ ನಟಿಸಲಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಆ ಸಿನಿಮಾ ಬಗ್ಗೆಯೂ ಏನಾದರೂ ಅಪ್​ಡೇಟ್​ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ