ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ದೇಶಾದ್ಯಂತ ಮಾತ್ರವಲ್ಲದೇ ವಿದೇಶದಲ್ಲೂ ಅವರಿಗೆ ಅಭಿಮಾನಿಗಳು ಇದ್ದಾರೆ. ಅದಕ್ಕೆ ಇಲ್ಲೊಂದು ಲೇಟೆಸ್ಟ್ ಸಾಕ್ಷಿ ಸಿಕ್ಕಿದೆ. ಟೋಕಿಯೋದಲ್ಲಿ ಇರುವ ಪ್ರಭಾಸ್ ಅಭಿಮಾನಿಗಳು ಮುಂಚಿತವಾಗಿಯೇ ಪ್ರಭಾಸ್ ಅವರ ಜನ್ಮದಿನವನ್ನು ಆಚರಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು
ಪ್ರಭಾಸ್ ಫ್ಯಾನ್ಸ್​
Follow us
|

Updated on: Oct 21, 2024 | 7:21 PM

ನಟ ಪ್ರಭಾಸ್ ಅವರು ಅಭಿಮಾನಿಗಳ ಪಾಲಿನ ಡಾರ್ಲಿಂಗ್. ‘ಬಾಹುಬಲಿ’ ಸಿನಿಮಾ ಸೂಪರ್​ ಹಿಟ್ ಆದ ಬಳಿಕ ಅವರ ಹವಾ ಹೆಚ್ಚಾಯಿತು. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಅವರು ಗುರುತಿಸಿಕೊಂಡರು. ಪ್ರತಿ ವರ್ಷ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಅಕ್ಟೋಬರ್​ 23ರಂದು ಪ್ರಭಾಸ್ ಅವರ ಜನ್ಮದಿನ. ಈ ಬಾರಿ ಅದ್ದೂರಿಯಾಗಿ ಬರ್ತ್​ಡೇ ಸೆಲೆಬ್ರೇಟ್ ಮಾಡಲು ಅಭಿಮಾನಿಗಳು ಕಾದಿದ್ದಾರೆ. ವಿಶೇಷ ಏನೆಂದರೆ, ಟೋಕಿಯೋದಲ್ಲಿ ಇರುವ ಪ್ರಭಾಸ್ ಅಭಿಮಾನಿಗಳು ಮುಂಚಿತವಾಗಿಯೇ ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ.

ಹೌದು, ಜಪಾನ್​ನಲ್ಲೂ ಪ್ರಭಾಸ್ ಅವರಿಗೆ ಅಭಿಮಾನಿಗಳು ಇದ್ದಾರೆ. ಅಲ್ಲಿನ ಚಿತ್ರಮಂದಿರವೊಂದರಲ್ಲಿ ಅಭಿಮಾನಿಗಳು ‘ರಾಧೆ ಶ್ಯಾಮ್’ ಸಿನಿಮಾವನ್ನು ನೋಡಿದ್ದಾರೆ. ಬಳಿಕ ಪ್ರಭಾಸ್​ಗೆ ಹ್ಯಾಪಿ ಬರ್ತ್​ಡೇ ಎಂದು ವಿಶ್ ಮಾಡಿದ್ದಾರೆ. ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಟೋಕಿಯಾದಿಂದ ಅಭಿಮಾನಿಗಳು ತೋರಿದ ಪ್ರೀತಿಗೆ ಪ್ರಭಾಸ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಬೇಕು.

ಪ್ರಭಾಸ್​ ಅವರಿಗೆ ಈ ವರ್ಷದ ಬರ್ತ್​ಡೇ ತುಂಬ ಸ್ಪೆಷಲ್. ಯಾಕೆಂದರೆ, ಅವರು ನಟಿಸಿದ ‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್​ ಹಿಟ್ ಆಗಿದೆ. ‘ಬಾಹುಬಲಿ’ ಬಳಿಕ ಸತತ ಸೋಲು ಕಂಡಿದ್ದ ಅವರು ‘ಸಲಾರ್​’ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿದರು. ಅವರ ಮುಂದಿನ ಸಿನಿಮಾಗಳ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ಮೂರು ಸಿನಿಮಾಗಳು ಒಟ್ಟಿಗೆ ಮರು ಬಿಡುಗಡೆ

ಪ್ರಭಾಸ್ ಅವರು ‘ದಿ ರಾಜಾ ಸಾಬ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬರ್ತ್​ಡೇಗೂ ಮುಂಚಿತವಾಗಿ ಈ ಚಿತ್ರತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದಲ್ಲದೇ ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಲಿರುವ ‘ಸ್ಪಿರಿಟ್’ ಸಿನಿಮಾದಲ್ಲೂ ಪ್ರಭಾಸ್ ನಟಿಸಲಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಆ ಸಿನಿಮಾ ಬಗ್ಗೆಯೂ ಏನಾದರೂ ಅಪ್​ಡೇಟ್​ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ
ಟೀಮ್ ಇಂಡಿಯಾದ ಸೋಲಿನ ಬೆನ್ನಲ್ಲೇ ಕೀರ್ತನೆಯಲ್ಲಿ ಕಾಣಿಸಿಕೊಂಡ ಕೊಹ್ಲಿ