AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

‘ಹ್ಯಾಪಿ ಬರ್ತ್​ಡೇ ಪ್ರಭಾಸ್​’ ಎಂಬ ವಾಕ್ಯ ಬಿಟ್ಟರೆ ಈ ಪೋಸ್ಟರ್​ನಲ್ಲಿ ಬೇರೇನೂ ಇಲ್ಲ. ಕೊನೇ ಪಕ್ಷ ಪ್ರಭಾಸ್​ ಅವರ ಒಂದು ಫೋಟೋ ಕೂಡ ಇಲ್ಲ. ಇದನ್ನು ಕಂಡು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?
ಪ್ರಶಾಂತ್ ನೀಲ್, ಪ್ರಭಾಸ್
TV9 Web
| Edited By: |

Updated on: Oct 24, 2021 | 7:50 AM

Share

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ಅವರು ಶನಿವಾರ (ಅ.23) ಹುಟ್ಟುಹಬ್ಬ ಆಚರಿಸಿಕೊಂಡರು. ಅವರ ಅಭಿಮಾನಿಗಳು ಭರ್ಜರಿಯಾಗಿ ಸಂಭ್ರಮಿಸಿದರು. 42ನೇ ವಸಂತಕ್ಕೆ ಕಾಲಿಟ್ಟ ಪ್ರಭಾಸ್​ಗೆ ಎಲ್ಲರಿಂದಲೂ ಶುಭಾಶಯಗಳ ಮಳೆ ಸುರಿಸಲಾಗಿದೆ. ಬಹುನಿರೀಕ್ಷಿತ ‘ರಾಧೆ ಶ್ಯಾಮ್​’ ಸಿನಿಮಾದಿಂದ ಟೀಸರ್​ ಬಿಡುಗಡೆ ಆಗಿದ್ದು, ಜನರಿಂದ ಸಖತ್​ ಮೆಚ್ಚುಗೆ ಸಿಗುತ್ತಿದೆ. ಇದರ ಜೊತೆಗೆ ‘ಸಲಾರ್​’ ಮತ್ತು ‘ಆದಿಪುರುಷ್​’ ಚಿತ್ರತಂಡದಿಂದ ಏನಾದರೂ ಅಪ್​ಡೇಟ್​ ಸಿಗಬಹುದು ಎಂದು ಅಭಿಮಾನಿಗಳು ಕಾದಿದ್ದರು. ಆದರೆ ಕೊನೇ ಕ್ಷಣದಲ್ಲಿ ಆಗಿದ್ದೇ ಬೇರೆ.

ಪ್ರಶಾಂತ್​ ನೀಲ್​ ನಿರ್ದೇಶಿಸುತ್ತಿರುವ ‘ಸಲಾರ್​’ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ‘ಕೆಜಿಎಫ್​’ ಚಿತ್ರದ ಬಳಿಕ ಅವರು ಕೈಗೆತ್ತಿಕೊಂಡ ಸಿನಿಮಾ ಇದಾಗಿರುವುದರಿಂದ ಹೈಪ್​ ಜೋರಾಗಿದೆ. ಹೊಂಬಾಳೆ ಪ್ರೊಡಕ್ಷನ್​ ನಿರ್ಮಾಣ ಮಾಡುತ್ತಿರುವುದು ಕೂಡ ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ಆದರೆ ಪ್ರಭಾಸ್​ ಬರ್ತ್​ಡೇ ದಿನ ‘ಸಲಾರ್​’ ತಂಡ ಹಂಚಿಕೊಂಡ ಪೋಸ್ಟರ್​ ನಿರಾಸೆ ಮೂಡಿಸಿದೆ.

ಕೇವಲ ‘ಹ್ಯಾಪಿ ಬರ್ತ್​ಡೇ ಪ್ರಭಾಸ್​’ ಎಂಬ ವಾಕ್ಯ ಬಿಟ್ಟರೆ ಈ ಪೋಸ್ಟರ್​ನಲ್ಲಿ ಬೇರೇನೂ ಇಲ್ಲ. ಕೊನೇ ಪಕ್ಷ ಪ್ರಭಾಸ್​ ಅವರ ಒಂದು ಫೋಟೋ ಕೂಡ ಇಲ್ಲ. ಇದನ್ನು ಕಂಡು ಅವರ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ. ಪ್ರಶಾಂತ್​ ನೀಲ್​ ಈ ರೀತಿ ಮಾಡಲು ಕಾರಣ ಏನು ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಸದ್ಯ ಇದಕ್ಕೆ ಪ್ರಶಾಂತ್​ ನೀಲ್​ ಉತ್ತರ ನೀಡಿಲ್ಲ.

ಇನ್ನು, ‘ಆದಿಪುರುಷ್’​ ಚಿತ್ರತಂಡದಿಂದಲೂ ಇದೇ ರೀತಿ ಆಗಿದೆ. ಖ್ಯಾತ ನಿರ್ದೇಶಕ ಓಂ ರಾವುತ್​ ಅವರು ‘ಆದಿಪುರುಷ್’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಅವರು ಕೂಡ ಪ್ರಭಾಸ್​ ಹುಟ್ಟುಹಬ್ಬದ ಸಲುವಾಗಿ ಯಾವುದೇ ಹೊಸ ಅಪ್​ಡೇಟ್​ ಹಂಚಿಕೊಂಡಿಲ್ಲ. ಕಾಟಾಚಾರಕ್ಕೆ ಎಂಬಂತೆ ಒಂದು ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಅದು ಕೂಡ ಯಾವುದೋ ಹಳೇ ಫೋಟೋಶೂಟ್​ನ ಚಿತ್ರ ಬಳಸಿಕೊಂಡು ಈ ಪೋಸ್ಟರ್​ ವಿನ್ಯಾಸ ಮಾಡಲಾಗಿದೆ. ಆ ಫೋಟೋಗೂ, ಆದಿಪುರುಷ್​ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಈ ಎಲ್ಲ ಬೆಳವಣಿಗೆಗಳಿಂದಾಗಿ ಪ್ರಭಾಸ್​ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಯಶ್​ಗೆ ಭೀಮನ ಪಾತ್ರ, ಪ್ರಶಾಂತ್​ ನೀಲ್​ ನಿರ್ದೇಶನ; ಹೀಗೊಂದು ನಕಲಿ ಸಿನಿಮಾದ ಟ್ರೇಲರ್​ಗೆ ಲಕ್ಷಾಂತರ ವೀವ್ಸ್​

Prabhas: ‘ಸಲಾರ್​’ ವಿಡಿಯೋ ಲೀಕ್​: ಕಿಡಿಗೇಡಿಗಳ ಕೆಲಸದಿಂದ ಪ್ರಭಾಸ್​ ಅಭಿಮಾನಿಗಳಿಗೆ ಪದೇಪದೇ ನಿರಾಸೆ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ