AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

‘ಹ್ಯಾಪಿ ಬರ್ತ್​ಡೇ ಪ್ರಭಾಸ್​’ ಎಂಬ ವಾಕ್ಯ ಬಿಟ್ಟರೆ ಈ ಪೋಸ್ಟರ್​ನಲ್ಲಿ ಬೇರೇನೂ ಇಲ್ಲ. ಕೊನೇ ಪಕ್ಷ ಪ್ರಭಾಸ್​ ಅವರ ಒಂದು ಫೋಟೋ ಕೂಡ ಇಲ್ಲ. ಇದನ್ನು ಕಂಡು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?
ಪ್ರಶಾಂತ್ ನೀಲ್, ಪ್ರಭಾಸ್
TV9 Web
| Edited By: |

Updated on: Oct 24, 2021 | 7:50 AM

Share

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ಅವರು ಶನಿವಾರ (ಅ.23) ಹುಟ್ಟುಹಬ್ಬ ಆಚರಿಸಿಕೊಂಡರು. ಅವರ ಅಭಿಮಾನಿಗಳು ಭರ್ಜರಿಯಾಗಿ ಸಂಭ್ರಮಿಸಿದರು. 42ನೇ ವಸಂತಕ್ಕೆ ಕಾಲಿಟ್ಟ ಪ್ರಭಾಸ್​ಗೆ ಎಲ್ಲರಿಂದಲೂ ಶುಭಾಶಯಗಳ ಮಳೆ ಸುರಿಸಲಾಗಿದೆ. ಬಹುನಿರೀಕ್ಷಿತ ‘ರಾಧೆ ಶ್ಯಾಮ್​’ ಸಿನಿಮಾದಿಂದ ಟೀಸರ್​ ಬಿಡುಗಡೆ ಆಗಿದ್ದು, ಜನರಿಂದ ಸಖತ್​ ಮೆಚ್ಚುಗೆ ಸಿಗುತ್ತಿದೆ. ಇದರ ಜೊತೆಗೆ ‘ಸಲಾರ್​’ ಮತ್ತು ‘ಆದಿಪುರುಷ್​’ ಚಿತ್ರತಂಡದಿಂದ ಏನಾದರೂ ಅಪ್​ಡೇಟ್​ ಸಿಗಬಹುದು ಎಂದು ಅಭಿಮಾನಿಗಳು ಕಾದಿದ್ದರು. ಆದರೆ ಕೊನೇ ಕ್ಷಣದಲ್ಲಿ ಆಗಿದ್ದೇ ಬೇರೆ.

ಪ್ರಶಾಂತ್​ ನೀಲ್​ ನಿರ್ದೇಶಿಸುತ್ತಿರುವ ‘ಸಲಾರ್​’ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ‘ಕೆಜಿಎಫ್​’ ಚಿತ್ರದ ಬಳಿಕ ಅವರು ಕೈಗೆತ್ತಿಕೊಂಡ ಸಿನಿಮಾ ಇದಾಗಿರುವುದರಿಂದ ಹೈಪ್​ ಜೋರಾಗಿದೆ. ಹೊಂಬಾಳೆ ಪ್ರೊಡಕ್ಷನ್​ ನಿರ್ಮಾಣ ಮಾಡುತ್ತಿರುವುದು ಕೂಡ ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ಆದರೆ ಪ್ರಭಾಸ್​ ಬರ್ತ್​ಡೇ ದಿನ ‘ಸಲಾರ್​’ ತಂಡ ಹಂಚಿಕೊಂಡ ಪೋಸ್ಟರ್​ ನಿರಾಸೆ ಮೂಡಿಸಿದೆ.

ಕೇವಲ ‘ಹ್ಯಾಪಿ ಬರ್ತ್​ಡೇ ಪ್ರಭಾಸ್​’ ಎಂಬ ವಾಕ್ಯ ಬಿಟ್ಟರೆ ಈ ಪೋಸ್ಟರ್​ನಲ್ಲಿ ಬೇರೇನೂ ಇಲ್ಲ. ಕೊನೇ ಪಕ್ಷ ಪ್ರಭಾಸ್​ ಅವರ ಒಂದು ಫೋಟೋ ಕೂಡ ಇಲ್ಲ. ಇದನ್ನು ಕಂಡು ಅವರ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ. ಪ್ರಶಾಂತ್​ ನೀಲ್​ ಈ ರೀತಿ ಮಾಡಲು ಕಾರಣ ಏನು ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಸದ್ಯ ಇದಕ್ಕೆ ಪ್ರಶಾಂತ್​ ನೀಲ್​ ಉತ್ತರ ನೀಡಿಲ್ಲ.

ಇನ್ನು, ‘ಆದಿಪುರುಷ್’​ ಚಿತ್ರತಂಡದಿಂದಲೂ ಇದೇ ರೀತಿ ಆಗಿದೆ. ಖ್ಯಾತ ನಿರ್ದೇಶಕ ಓಂ ರಾವುತ್​ ಅವರು ‘ಆದಿಪುರುಷ್’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಅವರು ಕೂಡ ಪ್ರಭಾಸ್​ ಹುಟ್ಟುಹಬ್ಬದ ಸಲುವಾಗಿ ಯಾವುದೇ ಹೊಸ ಅಪ್​ಡೇಟ್​ ಹಂಚಿಕೊಂಡಿಲ್ಲ. ಕಾಟಾಚಾರಕ್ಕೆ ಎಂಬಂತೆ ಒಂದು ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಅದು ಕೂಡ ಯಾವುದೋ ಹಳೇ ಫೋಟೋಶೂಟ್​ನ ಚಿತ್ರ ಬಳಸಿಕೊಂಡು ಈ ಪೋಸ್ಟರ್​ ವಿನ್ಯಾಸ ಮಾಡಲಾಗಿದೆ. ಆ ಫೋಟೋಗೂ, ಆದಿಪುರುಷ್​ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಈ ಎಲ್ಲ ಬೆಳವಣಿಗೆಗಳಿಂದಾಗಿ ಪ್ರಭಾಸ್​ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಯಶ್​ಗೆ ಭೀಮನ ಪಾತ್ರ, ಪ್ರಶಾಂತ್​ ನೀಲ್​ ನಿರ್ದೇಶನ; ಹೀಗೊಂದು ನಕಲಿ ಸಿನಿಮಾದ ಟ್ರೇಲರ್​ಗೆ ಲಕ್ಷಾಂತರ ವೀವ್ಸ್​

Prabhas: ‘ಸಲಾರ್​’ ವಿಡಿಯೋ ಲೀಕ್​: ಕಿಡಿಗೇಡಿಗಳ ಕೆಲಸದಿಂದ ಪ್ರಭಾಸ್​ ಅಭಿಮಾನಿಗಳಿಗೆ ಪದೇಪದೇ ನಿರಾಸೆ

Follow Us
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ