AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

‘ಹ್ಯಾಪಿ ಬರ್ತ್​ಡೇ ಪ್ರಭಾಸ್​’ ಎಂಬ ವಾಕ್ಯ ಬಿಟ್ಟರೆ ಈ ಪೋಸ್ಟರ್​ನಲ್ಲಿ ಬೇರೇನೂ ಇಲ್ಲ. ಕೊನೇ ಪಕ್ಷ ಪ್ರಭಾಸ್​ ಅವರ ಒಂದು ಫೋಟೋ ಕೂಡ ಇಲ್ಲ. ಇದನ್ನು ಕಂಡು ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?
ಪ್ರಶಾಂತ್ ನೀಲ್, ಪ್ರಭಾಸ್
TV9 Web
| Edited By: |

Updated on: Oct 24, 2021 | 7:50 AM

Share

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ಅವರು ಶನಿವಾರ (ಅ.23) ಹುಟ್ಟುಹಬ್ಬ ಆಚರಿಸಿಕೊಂಡರು. ಅವರ ಅಭಿಮಾನಿಗಳು ಭರ್ಜರಿಯಾಗಿ ಸಂಭ್ರಮಿಸಿದರು. 42ನೇ ವಸಂತಕ್ಕೆ ಕಾಲಿಟ್ಟ ಪ್ರಭಾಸ್​ಗೆ ಎಲ್ಲರಿಂದಲೂ ಶುಭಾಶಯಗಳ ಮಳೆ ಸುರಿಸಲಾಗಿದೆ. ಬಹುನಿರೀಕ್ಷಿತ ‘ರಾಧೆ ಶ್ಯಾಮ್​’ ಸಿನಿಮಾದಿಂದ ಟೀಸರ್​ ಬಿಡುಗಡೆ ಆಗಿದ್ದು, ಜನರಿಂದ ಸಖತ್​ ಮೆಚ್ಚುಗೆ ಸಿಗುತ್ತಿದೆ. ಇದರ ಜೊತೆಗೆ ‘ಸಲಾರ್​’ ಮತ್ತು ‘ಆದಿಪುರುಷ್​’ ಚಿತ್ರತಂಡದಿಂದ ಏನಾದರೂ ಅಪ್​ಡೇಟ್​ ಸಿಗಬಹುದು ಎಂದು ಅಭಿಮಾನಿಗಳು ಕಾದಿದ್ದರು. ಆದರೆ ಕೊನೇ ಕ್ಷಣದಲ್ಲಿ ಆಗಿದ್ದೇ ಬೇರೆ.

ಪ್ರಶಾಂತ್​ ನೀಲ್​ ನಿರ್ದೇಶಿಸುತ್ತಿರುವ ‘ಸಲಾರ್​’ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ‘ಕೆಜಿಎಫ್​’ ಚಿತ್ರದ ಬಳಿಕ ಅವರು ಕೈಗೆತ್ತಿಕೊಂಡ ಸಿನಿಮಾ ಇದಾಗಿರುವುದರಿಂದ ಹೈಪ್​ ಜೋರಾಗಿದೆ. ಹೊಂಬಾಳೆ ಪ್ರೊಡಕ್ಷನ್​ ನಿರ್ಮಾಣ ಮಾಡುತ್ತಿರುವುದು ಕೂಡ ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ಆದರೆ ಪ್ರಭಾಸ್​ ಬರ್ತ್​ಡೇ ದಿನ ‘ಸಲಾರ್​’ ತಂಡ ಹಂಚಿಕೊಂಡ ಪೋಸ್ಟರ್​ ನಿರಾಸೆ ಮೂಡಿಸಿದೆ.

ಕೇವಲ ‘ಹ್ಯಾಪಿ ಬರ್ತ್​ಡೇ ಪ್ರಭಾಸ್​’ ಎಂಬ ವಾಕ್ಯ ಬಿಟ್ಟರೆ ಈ ಪೋಸ್ಟರ್​ನಲ್ಲಿ ಬೇರೇನೂ ಇಲ್ಲ. ಕೊನೇ ಪಕ್ಷ ಪ್ರಭಾಸ್​ ಅವರ ಒಂದು ಫೋಟೋ ಕೂಡ ಇಲ್ಲ. ಇದನ್ನು ಕಂಡು ಅವರ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ. ಪ್ರಶಾಂತ್​ ನೀಲ್​ ಈ ರೀತಿ ಮಾಡಲು ಕಾರಣ ಏನು ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಸದ್ಯ ಇದಕ್ಕೆ ಪ್ರಶಾಂತ್​ ನೀಲ್​ ಉತ್ತರ ನೀಡಿಲ್ಲ.

ಇನ್ನು, ‘ಆದಿಪುರುಷ್’​ ಚಿತ್ರತಂಡದಿಂದಲೂ ಇದೇ ರೀತಿ ಆಗಿದೆ. ಖ್ಯಾತ ನಿರ್ದೇಶಕ ಓಂ ರಾವುತ್​ ಅವರು ‘ಆದಿಪುರುಷ್’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಅವರು ಕೂಡ ಪ್ರಭಾಸ್​ ಹುಟ್ಟುಹಬ್ಬದ ಸಲುವಾಗಿ ಯಾವುದೇ ಹೊಸ ಅಪ್​ಡೇಟ್​ ಹಂಚಿಕೊಂಡಿಲ್ಲ. ಕಾಟಾಚಾರಕ್ಕೆ ಎಂಬಂತೆ ಒಂದು ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಅದು ಕೂಡ ಯಾವುದೋ ಹಳೇ ಫೋಟೋಶೂಟ್​ನ ಚಿತ್ರ ಬಳಸಿಕೊಂಡು ಈ ಪೋಸ್ಟರ್​ ವಿನ್ಯಾಸ ಮಾಡಲಾಗಿದೆ. ಆ ಫೋಟೋಗೂ, ಆದಿಪುರುಷ್​ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಈ ಎಲ್ಲ ಬೆಳವಣಿಗೆಗಳಿಂದಾಗಿ ಪ್ರಭಾಸ್​ ಫ್ಯಾನ್ಸ್​ ಬೇಸರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಯಶ್​ಗೆ ಭೀಮನ ಪಾತ್ರ, ಪ್ರಶಾಂತ್​ ನೀಲ್​ ನಿರ್ದೇಶನ; ಹೀಗೊಂದು ನಕಲಿ ಸಿನಿಮಾದ ಟ್ರೇಲರ್​ಗೆ ಲಕ್ಷಾಂತರ ವೀವ್ಸ್​

Prabhas: ‘ಸಲಾರ್​’ ವಿಡಿಯೋ ಲೀಕ್​: ಕಿಡಿಗೇಡಿಗಳ ಕೆಲಸದಿಂದ ಪ್ರಭಾಸ್​ ಅಭಿಮಾನಿಗಳಿಗೆ ಪದೇಪದೇ ನಿರಾಸೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ