Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ‘ರಾಧೆ ಶ್ಯಾಮ್’ ಸೋಲಿನ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪ್ರಭಾಸ್; ‘ಬಾಹುಬಲಿ’ ನಟನಿಗೆ ಏನಾಯ್ತು?

Radhe Shyam: ಪ್ರಭಾಸ್​​ ‘ಸಲಾರ್’ ಚಿತ್ರದ ಬಗ್ಗೆ ವಿಶೇಷ ಆಸ್ಥೆ ವಹಿಸಿದ್ದಾರೆ. ಆದರೆ ಚಿತ್ರೀಕರಣದ ಸಂದರ್ಭದಲ್ಲಿ ಅವರಿಗೆ ಸಣ್ಣ ಗಾಯವಾಗಿತ್ತು. ಅದಕ್ಕೆ ನಟ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ ಪ್ರಸ್ತುತ ಪ್ರಭಾಸ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದೇಕೆ? ಇಲ್ಲಿದೆ ಮಾಹಿತಿ.

Prabhas: ‘ರಾಧೆ ಶ್ಯಾಮ್’ ಸೋಲಿನ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪ್ರಭಾಸ್; ‘ಬಾಹುಬಲಿ’ ನಟನಿಗೆ ಏನಾಯ್ತು?
ಪ್ರಭಾಸ್
Follow us
TV9 Web
| Updated By: shivaprasad.hs

Updated on: Mar 19, 2022 | 7:56 AM

ಟಾಲಿವುಡ್ ನಟ ಪ್ರಭಾಸ್ ‘ಬಾಹುಬಲಿ’ (Bahubali) ಚಿತ್ರದಲ್ಲಿ ಕಾಣಿಸಿಕೊಂಡ ನಂತರ ಅಪಾರ ಜನಪ್ರಿಯತೆ ಪಡೆದವರು. ಅವರ ಅಭಿಮಾನಿ ಬಳಗ ಏರಿದ್ದಲ್ಲದೇ ನಟ ಪ್ಯಾನ್‌ ಇಂಡಿಯಾ ಸ್ಟಾರ್ ಆದರು. ಇದೇ ಕಾರಣದಿಂದ ಅವರ ಮುಂದಿನ ಚಿತ್ರಗಳು ಕೂಡ ‘ಬಾಹುಬಲಿ’ಯಂತೆ ಬಿಗ್ ಬಜೆಟ್ ನಲ್ಲಿ ತಯಾರಾಗುತ್ತಿವೆ. ನಂತರದಲ್ಲಿ ತೆರೆಕಂಡ ‘ಸಾಹೊ’ ಹಾಗೂ ‘ರಾಧೆ ಶ್ಯಾಮ್’ (Radhe Shyam) ಎರಡೂ ಚಿತ್ರಗಳು ಬಾಕ್ಸಾಫೀಸ್ ನಲ್ಲಿ ತೀರಾ ನಷ್ಟ ಮಾಡಿಕೊಂಡಿಲ್ಲ. ಹಾಗಂತ ಉತ್ತಮ ಪ್ರತಿಕ್ರಿಯೆಯನ್ನೂ ಪಡೆದಿಲ್ಲ. ಒಂದರ್ಥದಲ್ಲಿ ‘ಬಾಹುಬಲಿ’ಯ ಯಶಸ್ಸು ಪ್ರಭಾಸ್ ಅವರ ಈಗಿನ ಚಿತ್ರಗಳಿಗೆ ಹೊಡೆತವನ್ನೇ ನೀಡುತ್ತಿದೆ ಎಂದರೆ ತಪ್ಪಿಲ್ಲ. ಇದೇ ಕಾರಣಕ್ಕೆ ಪ್ರಭಾಸ್ (Prabhas) ‘ಎಲ್ಲಾ ಚಿತ್ರಗಳು ಬಾಹುಬಲಿಯಾಗುವುದಿಲ್ಲ. ಮ್ಯಾಜಿಕ್ ಒಮ್ಮೊಮ್ಮೆ ಮಾತ್ರ ಆಗುತ್ತದೆ’ ಎಂದು ಹೇಳಿದ್ದು. ಆದರೆ ಇದನ್ನು ಒಪ್ಪಲು ಫ್ಯಾನ್ಸ್ ತಯಾರಿಲ್ಲ. ತಮ್ಮ ನೆಚ್ಚಿನ ನಟನನ್ನು ತೆರೆಯ ಮೇಲೆ ಅದ್ಭುತವಾಗಿ, ಮಾಸ್ ಅವತಾರದಲ್ಲಿ ಕಣ್ತುಂಬಿಕೊಳ್ಳಬೇಕು ಎನ್ನುವುದು ಅವರ ಅಪೇಕ್ಷೆ. ಇದೀಗ ಪ್ರಭಾಸ್ ಅಭಿಮಾನಿಗಳ ಮುಂದೆ ದೊಡ್ಡ ಭರವಸೆಯಂತೆ ಇರುವುದು ಪ್ರಶಾಂತ್ ನೀಲ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಸಲಾರ್’.

ಪ್ರಭಾಸ್ ಸ್ಪೇನ್​ಗೆ ತೆರಳಿದ್ದೇಕೆ? ನಟನಿಗೆ ಏನಾಯ್ತು?

‘ಸಲಾರ್’ ಚಿತ್ರಕ್ಕೆ ಪ್ರಭಾಸ್ ಕೂಡ ವಿಶೇಷ ಆಸ್ಥೆ ವಹಿಸಿದ್ದಾರೆ. ಆದರೆ ಕೆಲವು ಸಮಯದ ಹಿಂದೆ ಅವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದಾಗ ಗಾಯಕ್ಕೆ ತುತ್ತಾಗಿದ್ದರು.‌ ಅದಕ್ಕೆ ಚಿಕಿತ್ಸೆಯನ್ನೂ ನಟ ಪಡೆದಿದ್ದರು. ಆದರೆ ಇದೀಗ ಅವರು ಆ ಗಾಯಕ್ಕೆ ಸಂಪೂರ್ಣ ಚಿಕಿತ್ಸೆ ಪಡೆಯುವ ಸಲುವಾಗಿ ಸ್ಪೇನ್ ಗೆ ತೆರಳಿದ್ದಾರೆ ಎನ್ನಲಾಗಿದೆ. ಬಾರ್ಸಿಲೋನಾದಲ್ಲಿ‌ ಪ್ರಭಾಸ್ ಸಣ್ಣ ಸರ್ಜರಿಗೆ ಒಳಗಾಗಿದ್ದಾರೆ ಎಂದು ಇಟೈಮ್ಸ್ ವರದಿ ಮಾಡಿದೆ.

ಸರ್ಜರಿ ಸಣ್ಣದಾದರೂ ಪ್ರಭಾಸ್​ಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ‘ರಾಧೆ ಶ್ಯಾಮ್’ ರಿಲೀಸ್ ನಂತರ ಪ್ರಭಾಸ್ ಅಷ್ಟಾಗಿ ಮಾಧ್ಯಮದ ಮುಂದೆ ಕಾಣಿಸಿಕೊಂಡಿಲ್ಲ. ಚಿತ್ರದ ಬಗ್ಗೆ ಬಂದ ಪ್ರತಿಕ್ರಿಯೆಗಳೂ ಅದಕ್ಕೆ ಕಾರಣವಿರಬಹುದು. ಆದರೆ ನಟ ವಿದೇಶಕ್ಕೆ ತೆರಳಿ ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳ ಚಿಂತೆಗೆ ಕಾರಣವಾಗಿತ್ತು. ನಂತರ ಗಾಯ ಹಾಗೂ ಸರ್ಜರಿಯ ಸಮಾಚಾರ ಬಂದ ಮೇಲೆ ನಿಟ್ಟುಸಿರು ಬಿಟ್ಟಿದ್ದಾರೆ. ಅಲ್ಲದೇ ಪ್ರಭಾಸ್ ಬೇಗ ಗುಣಮುಖರಾಗಿ‌ ಮತ್ತೆ ಮಾಸ್ ಅವತಾರ ತೊಟ್ಟು ತೆರೆಯ ಮೇಲೆ ಮಿಂಚಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ಸ್ ಸಂದೇಶ ಹಂಚಿಕೊಳ್ಳುತ್ತಿದ್ದಾರೆ.

ಪ್ರಭಾಸ್ ಬತ್ತಳಿಕೆಯಲ್ಲಿ ವಿಭಿನ್ನ ಬಗೆಯ ಚಿತ್ರಗಳಿವೆ. ‘ಸಲಾರ್’ನಲ್ಲಿ ನಟ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ‘ಆದಿಪುರುಷ್’ನಲ್ಲಿ ರಾಮನ ಪಾತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ. ‘ಪ್ರಾಜೆಕ್ಟ್ ಕೆ’, ‘ಸ್ಪಿರಿಟ್’, ‘ಮಾರುತಿ’ ಚಿತ್ರಗಳಲ್ಲಿ ನಟ ಬಣ್ಣಹಚ್ಚಲಿದ್ದಾರೆ.

ಇದನ್ನೂ ಓದಿ:

ಹಿಂದಿ ಚಿತ್ರರಂಗದಲ್ಲಿ ಧೂಳಿಪಟವಾಯ್ತು ಪ್ರಭಾಸ್ ಹೆಸರು; ದಿಟ್ಟ ನಿರ್ಧಾರ ತೆಗೆದುಕೊಂಡ ಪ್ರಭಾಸ್​?

‘ಬಿಗ್​ ಬಾಸ್​’ನಲ್ಲಿ ಮದುವೆ ಆದ ಜೋಡಿಗೆ ಚಾನೆಲ್​ನವರಿಂದ ಸಿಕ್ಕಿತ್ತು 50 ಲಕ್ಷ ರೂ.; ಎರಡೇ ತಿಂಗಳಿಗೆ ಡಿವೋರ್ಸ್​

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ