Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಭಾಸ್ ಜೊತೆ ನಾನು ಸ್ಪರ್ಧಿಸಲ್ಲ, ನನ್ನನ್ನು ಬಿಟ್ಟುಬಿಡಿ’; ಬೇಡಿಕೊಂಡ ವಿವೇಕ್ ಅಗ್ನಿಹೋತ್ರಿ

‘ದಿ ವ್ಯಾಕ್ಸಿನ್ ವಾರ್’ ಚಿತ್ರವನ್ನು ‘ಸಲಾರ್’ ಎದುರು ರಿಲೀಸ್ ಮಾಡಿ ಗೆಲ್ಲುತ್ತೇನೆ ಎಂದು ವಿವೇಕ್ ಹೇಳಿರುವುದಾಗಿ ವರದಿ ಆಗಿತ್ತು. ಈ ವರದಿಯನ್ನು ಅವರು ರೀಟ್ವೀಟ್ ಮಾಡಿದ್ದಾರೆ.

‘ಪ್ರಭಾಸ್ ಜೊತೆ ನಾನು ಸ್ಪರ್ಧಿಸಲ್ಲ, ನನ್ನನ್ನು ಬಿಟ್ಟುಬಿಡಿ’; ಬೇಡಿಕೊಂಡ ವಿವೇಕ್ ಅಗ್ನಿಹೋತ್ರಿ
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on: Jul 28, 2023 | 6:30 AM

ನಟ ಪ್ರಭಾಸ್ (Prabhas) ಅವರ ಸಿನಿಮಾಗಳು ಇತ್ತೀಚೆಗೆ ಗೆಲ್ಲುತ್ತಿಲ್ಲ. ಆದರೆ, ಅವರ ಮುಂದಿನ ಸಿನಿಮಾಗಳ ಬಗ್ಗೆ ಇರುವ ಕ್ರೇಜ್ ಕಡಿಮೆ ಆಗಿಲ್ಲ ಮತ್ತು ಕಡಿಮೆ ಆಗುವಂಥದ್ದಲ್ಲ. ‘ಸಲಾರ್’ ಸಿನಿಮಾ ಬಗ್ಗೆ ಸದ್ಯ ನಿರೀಕ್ಷೆ ಜಾಸ್ತಿ ಆಗಿದೆ. ಈ ಚಿತ್ರದ ಎದುರು ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ (The Vaccine War Movie) ರಿಲೀಸ್ ಆಗಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ವಿವೇಕ್ ಅಗ್ನಿಹೋತ್ರಿ ಅವರು ಸ್ಪಷ್ಟನೆ ನೀಡಿದ್ದಾರೆ. ಅವರ ಎದುರು ತಾವು ಸ್ಪರ್ಧಿಸುವುದಿಲ್ಲ ಎನ್ನುವ ಸ್ಪಷ್ಟನೆಯನ್ನು ವಿವೇಕ್ ನೀಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಹಾಗೂ ‘ರಾಧೆ ಶ್ಯಾಮ್’ ಒಂದೇ ದಿನ (ಮಾರ್ಚ್​ 11, 2022) ರಿಲೀಸ್ ಆಗಿತ್ತು. ‘ರಾಧೆ ಶ್ಯಾಮ್’ ಹೇಳ ಹೆಸರಿಲ್ಲದೆ ಹೋದರೆ, ‘ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 250 ಕೋಟಿ ರೂಪಾಯಿ ಬಾಚಿತ್ತು. ಅದೇ ರೀತಿ ‘ದಿ ವ್ಯಾಕ್ಸಿನ್ ವಾರ್’ ಚಿತ್ರವನ್ನು ‘ಸಲಾರ್’ ಎದುರು ರಿಲೀಸ್ ಮಾಡಿ ಗೆಲ್ಲುತ್ತೇನೆ ಎಂದು ವಿವೇಕ್ ಹೇಳಿರುವುದಾಗಿ ವರದಿ ಆಗಿತ್ತು. ಈ ವರದಿಯನ್ನು ಅವರು ರೀಟ್ವೀಟ್ ಮಾಡಿದ್ದಾರೆ.

‘ನಾನು ಹೇಳಿದ್ದೇನು ಎಂದು ಉಲ್ಲೇಖಿಸಿ ಈ ರೀತಿಯ ನಕಲಿ ಸುದ್ದಿಗಳನ್ನು ಯಾರು ಹರಡುತ್ತಿದ್ದಾರೆ? ನಾನು ಪ್ರಭಾಸ್ ಅವರನ್ನು ಗೌರವಿಸುತ್ತೇನೆ. ಅವರು ಮೆಗಾ ಮೆಗಾ ಸ್ಟಾರ್. ಮೆಗಾ ಮೆಗಾ ಬಜೆಟ್ ಚಿತ್ರಗಳಲ್ಲಿ ಅವರು ನಟಿಸುತ್ತಾರೆ.  ಆದರೆ, ನಮ್ಮ ಸಿನಿಮಾದಲ್ಲಿ ಸ್ಟಾರ್​ಗಳು ಇರಲ್ಲ, ಸಣ್ಣ ಬಜೆಟ್ ಸಿನಿಮಾ ಆಗಿರುತ್ತದೆ. ನಮ್ಮ ಸಿನಿಮಾಗಳ ಮಧ್ಯೆ ಯಾವುದೇ ಹೋಲಿಕೆ ಇಲ್ಲ. ದಯವಿಟ್ಟು ನನ್ನನ್ನು ಬಿಡಿ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಾನು ನಕ್ಸಲ್ ಆಗಿದ್ದೆ’; ಕರಾಳ ಸತ್ಯ ಬಿಚ್ಚಿಟ್ಟ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಇದಕ್ಕೆ ಬಗೆಬಗೆಯ ಕಮೆಂಟ್​ಗಳು ಬಂದಿವೆ. ‘ಪ್ರಭಾಸ್ ಅವರು ಹೀರೋ, ನೀವು ಪ್ರೊಪೊಗಾಂಡ ಸಿನಿಮಾ ಮಾಡುವ ನಿರ್ದೇಶಕ. ನಿಮ್ಮಿಬ್ಬರ ಮಧ್ಯೆ ಹೋಲಿಕೆ ಅಸಾಧ್ಯ ಬಿಡಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ರಾಧೆ ಶ್ಯಾಮ್ ಸಿನಿಮಾ ಫ್ಲಾಪ್ ಆಗಿರಬಹುದು. ಧೈರ್ಯ ಇದ್ದರೆ ಸಲಾರ್ ಎದುರು ಬಂದು ನೋಡಿ’ ಎಂದು ಕೆಲವರು ಸವಾಲು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್