AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್, ರಾಮ್​ ಚರಣ್​, ಮಹೇಶ್​ ಬಾಬು​ ಕ್ವಾರಂಟೈನ್​; ಟಾಲಿವುಡ್​ನಲ್ಲಿ ಹೆಚ್ಚಾಯ್ತು ಕೊರೊನಾ ಕಾಟ

Coronavirus: ದೇಶಾದ್ಯಂತ ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದರಿಂದ ಸೆಲೆಬ್ರಿಟಿಗಳೂ ತೊಂದರೆ ಅನುಭವಿಸುತ್ತಿದ್ದಾರೆ. ಪವನ್​ ಕಲ್ಯಾಣ್​ ಸೇರಿದಂತೆ ತೆಲುಗು ಚಿತ್ರರಂಗದ ಹಲವು ನಟರು ಈಗ ಕ್ವಾರಂಟೈನ್​ ಆಗಬೇಕಾಗಿದೆ.

ಪ್ರಭಾಸ್, ರಾಮ್​ ಚರಣ್​, ಮಹೇಶ್​ ಬಾಬು​ ಕ್ವಾರಂಟೈನ್​; ಟಾಲಿವುಡ್​ನಲ್ಲಿ ಹೆಚ್ಚಾಯ್ತು ಕೊರೊನಾ ಕಾಟ
ಪ್ರಭಾಸ್, ರಾಮ್ ಚರಣ್, ಮಹೇಶ್ ಬಾಬು
ಮದನ್​ ಕುಮಾರ್​
| Edited By: |

Updated on: Apr 22, 2021 | 6:17 PM

Share

ಟಾಲಿವುಡ್​ ಮಂದಿಗೆ ಕೊರೊನಾ ವೈರಸ್​ ಸಿಕ್ಕಾಪಟ್ಟೆ ಕಾಟ ಕೊಡಲಾರಂಭಿಸಿದೆ. ಇಷ್ಟು ದಿನ ಆರಾಮಾಗಿ ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದವರಿಗೆ ಈಗ ಭಯ ಶುರುವಾಗಿದೆ. ದೇಶಾದ್ಯಂತ ಕೊವಿಡ್​ 19 ಎರಡನೇ ಅಲೆ ಶುರುವಾಗಿದೆ. ಅನೇಕ ಸೆಲೆಬ್ರಿಟಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಪವನ್​ ಕಲ್ಯಾಣ್​ ಸೇರಿದಂತೆ ತೆಲುಗು ಚಿತ್ರರಂಗದ ಹಲವು ನಟರು ಈಗ ಕ್ವಾರಂಟೈನ್​ ಆಗಬೇಕಾಗಿದೆ. ಸ್ಟಾರ್​ ನಟರಾದ ಪ್ರಭಾಸ್​, ಮಹೇಶ್​ ಬಾಬು ಹಾಗೂ ರಾಮ್​ ಚರಣ್​ ಸೆಲ್ಫ್​ ಕ್ವಾರಂಟೈನ್​ ಆಗಿದ್ದಾರೆ.

ರಾಧೆ ಶ್ಯಾಮ್​, ಸಲಾರ್, ಆದಿ ಪುರುಷ್​ ಮುಂತಾದ ಸಿನಿಮಾ ಕೆಲಸಗಳಲ್ಲಿ ಪ್ರಭಾಸ್​ ತೊಡಗಿಕೊಂಡಿದ್ದರು. ಅವರ ಪರ್ಸನಲ್​ ಮೇಕಪ್​ ಕಲಾವಿದರಿಗೆ ಕೊರೊನಾ ವೈರಸ್​ ತಗುಲಿದೆ. ಹಾಗಾಗಿ ಪ್ರಭಾಸ್​ ಸೆಲ್ಫ್​ ಕ್ವಾರಂಟೈನ್​ ಆಗಬೇಕಾದ ಪರಿಸ್ಥಿತಿ ಬಂದಿದೆ. ಅವರ ಎಲ್ಲ ಸಿನಿಮಾ ಕೆಲಸಗಳಿಗೆ ಈಗ ಬ್ರೇಕ್​ ಹಾಕಲಾಗಿದೆ. ಅಲ್ಲದೆ, ಮಹೇಶ್​ ಬಾಬು ಕೂಡ ಇಂಥದ್ದೇ ಪರಿಸ್ಥಿತಿ ಎದುರಿಸುವಂತಾಗಿದೆ.

ಮಹೇಶ್​ ಬಾಬು ನಟನೆಯ ಸರ್ಕಾರು ವಾರಿ ಪಾಟ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ಮಹೇಶ್​ ಬಾಬು ಅವರ ಪರ್ಸನಲ್​ ಸ್ಟೈಲಿಸ್ಟ್​ಗೆ ಕೊರೊನಾ ವೈರಸ್​ ಪಾಸಿಟಿವ್​ ಆಗಿರುವುದು ಧೃಡಪಟ್ಟಿದೆ. ಕೂಡಲೇ ಮಹೇಶ್​ ಬಾಬು ಅವರು ಫ್ಯಾಮಿಲಿ ಡಾಕ್ಟರ್​ರನ್ನು ಭೇಟಿ ಆಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸೆಲ್ಫ್​ ಐಸೋಲೇಟ್​ ಆಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಸದ್ಯ ಈ ಪರಿಸ್ಥಿತಿಯಲ್ಲಿ ಸರ್ಕಾರು ವಾರಿ ಪಾಟ ಚಿತ್ರದ ಶೂಟಿಂಗ್​ ಸ್ಥಗಿತಗೊಳಿಸಲಾಗಿದೆ.

ಇನ್ನು, ರಾಮ್​ ಚರಣ್​ ಕೂಡ ಐಸೋಲೇಟ್​ ಆಗಿದ್ದಾರೆ. ಚಿರಂಜೀವಿ ಅವರ ಕ್ಯಾರವಾನ್ ಚಾಲಕ ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ರಾಮ್​ ಚರಣ್​ ನಿರ್ಮಾಣ ಮಾಡುತ್ತಿರುವ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿರುವ ಸೋನು ಸೂದ್​ ಅವರಿಗೆ ಕೊವಿಡ್​ 19 ಪಾಸಿಟಿವ್​ ಆಗಿದೆ. ಈ ಎಲ್ಲ ಕಾರಣಗಳಿಂದಾಗಿ ರಾಮ್​ ಚರಣ್​ ಈಗ ಸೆಲ್ಫ್​ ಐಸೊಲೇಟ್​ ಆಗಿರುವ ಬಗ್ಗೆ ಸುದ್ದಿ ಕೇಳಿಬಂದಿದೆ. ಕಳೆದ ವರ್ಷ ಅವರಿಗೆ ಕೊರೊನಾ ವೈರಸ್​ ತಗುಲಿತ್ತು. ನಂತರ ಗುಣಮುಖರಾಗಿದ್ದರು. ಹಾಗಾಗಿ ಈ ಬಾರಿ ಅವರು ಹೆಚ್ಚು ಎಚ್ಚರಿಕೆ ವಹಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ

(Prabhas Mahesh Babu Ram Charan isolated themselves due to coronavirus second wave)

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ