AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್, ರಾಮ್​ ಚರಣ್​, ಮಹೇಶ್​ ಬಾಬು​ ಕ್ವಾರಂಟೈನ್​; ಟಾಲಿವುಡ್​ನಲ್ಲಿ ಹೆಚ್ಚಾಯ್ತು ಕೊರೊನಾ ಕಾಟ

Coronavirus: ದೇಶಾದ್ಯಂತ ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದರಿಂದ ಸೆಲೆಬ್ರಿಟಿಗಳೂ ತೊಂದರೆ ಅನುಭವಿಸುತ್ತಿದ್ದಾರೆ. ಪವನ್​ ಕಲ್ಯಾಣ್​ ಸೇರಿದಂತೆ ತೆಲುಗು ಚಿತ್ರರಂಗದ ಹಲವು ನಟರು ಈಗ ಕ್ವಾರಂಟೈನ್​ ಆಗಬೇಕಾಗಿದೆ.

ಪ್ರಭಾಸ್, ರಾಮ್​ ಚರಣ್​, ಮಹೇಶ್​ ಬಾಬು​ ಕ್ವಾರಂಟೈನ್​; ಟಾಲಿವುಡ್​ನಲ್ಲಿ ಹೆಚ್ಚಾಯ್ತು ಕೊರೊನಾ ಕಾಟ
ಪ್ರಭಾಸ್, ರಾಮ್ ಚರಣ್, ಮಹೇಶ್ ಬಾಬು
ಮದನ್​ ಕುಮಾರ್​
| Edited By: |

Updated on: Apr 22, 2021 | 6:17 PM

Share

ಟಾಲಿವುಡ್​ ಮಂದಿಗೆ ಕೊರೊನಾ ವೈರಸ್​ ಸಿಕ್ಕಾಪಟ್ಟೆ ಕಾಟ ಕೊಡಲಾರಂಭಿಸಿದೆ. ಇಷ್ಟು ದಿನ ಆರಾಮಾಗಿ ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದವರಿಗೆ ಈಗ ಭಯ ಶುರುವಾಗಿದೆ. ದೇಶಾದ್ಯಂತ ಕೊವಿಡ್​ 19 ಎರಡನೇ ಅಲೆ ಶುರುವಾಗಿದೆ. ಅನೇಕ ಸೆಲೆಬ್ರಿಟಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಪವನ್​ ಕಲ್ಯಾಣ್​ ಸೇರಿದಂತೆ ತೆಲುಗು ಚಿತ್ರರಂಗದ ಹಲವು ನಟರು ಈಗ ಕ್ವಾರಂಟೈನ್​ ಆಗಬೇಕಾಗಿದೆ. ಸ್ಟಾರ್​ ನಟರಾದ ಪ್ರಭಾಸ್​, ಮಹೇಶ್​ ಬಾಬು ಹಾಗೂ ರಾಮ್​ ಚರಣ್​ ಸೆಲ್ಫ್​ ಕ್ವಾರಂಟೈನ್​ ಆಗಿದ್ದಾರೆ.

ರಾಧೆ ಶ್ಯಾಮ್​, ಸಲಾರ್, ಆದಿ ಪುರುಷ್​ ಮುಂತಾದ ಸಿನಿಮಾ ಕೆಲಸಗಳಲ್ಲಿ ಪ್ರಭಾಸ್​ ತೊಡಗಿಕೊಂಡಿದ್ದರು. ಅವರ ಪರ್ಸನಲ್​ ಮೇಕಪ್​ ಕಲಾವಿದರಿಗೆ ಕೊರೊನಾ ವೈರಸ್​ ತಗುಲಿದೆ. ಹಾಗಾಗಿ ಪ್ರಭಾಸ್​ ಸೆಲ್ಫ್​ ಕ್ವಾರಂಟೈನ್​ ಆಗಬೇಕಾದ ಪರಿಸ್ಥಿತಿ ಬಂದಿದೆ. ಅವರ ಎಲ್ಲ ಸಿನಿಮಾ ಕೆಲಸಗಳಿಗೆ ಈಗ ಬ್ರೇಕ್​ ಹಾಕಲಾಗಿದೆ. ಅಲ್ಲದೆ, ಮಹೇಶ್​ ಬಾಬು ಕೂಡ ಇಂಥದ್ದೇ ಪರಿಸ್ಥಿತಿ ಎದುರಿಸುವಂತಾಗಿದೆ.

ಮಹೇಶ್​ ಬಾಬು ನಟನೆಯ ಸರ್ಕಾರು ವಾರಿ ಪಾಟ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ಮಹೇಶ್​ ಬಾಬು ಅವರ ಪರ್ಸನಲ್​ ಸ್ಟೈಲಿಸ್ಟ್​ಗೆ ಕೊರೊನಾ ವೈರಸ್​ ಪಾಸಿಟಿವ್​ ಆಗಿರುವುದು ಧೃಡಪಟ್ಟಿದೆ. ಕೂಡಲೇ ಮಹೇಶ್​ ಬಾಬು ಅವರು ಫ್ಯಾಮಿಲಿ ಡಾಕ್ಟರ್​ರನ್ನು ಭೇಟಿ ಆಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸೆಲ್ಫ್​ ಐಸೋಲೇಟ್​ ಆಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಸದ್ಯ ಈ ಪರಿಸ್ಥಿತಿಯಲ್ಲಿ ಸರ್ಕಾರು ವಾರಿ ಪಾಟ ಚಿತ್ರದ ಶೂಟಿಂಗ್​ ಸ್ಥಗಿತಗೊಳಿಸಲಾಗಿದೆ.

ಇನ್ನು, ರಾಮ್​ ಚರಣ್​ ಕೂಡ ಐಸೋಲೇಟ್​ ಆಗಿದ್ದಾರೆ. ಚಿರಂಜೀವಿ ಅವರ ಕ್ಯಾರವಾನ್ ಚಾಲಕ ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ರಾಮ್​ ಚರಣ್​ ನಿರ್ಮಾಣ ಮಾಡುತ್ತಿರುವ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿರುವ ಸೋನು ಸೂದ್​ ಅವರಿಗೆ ಕೊವಿಡ್​ 19 ಪಾಸಿಟಿವ್​ ಆಗಿದೆ. ಈ ಎಲ್ಲ ಕಾರಣಗಳಿಂದಾಗಿ ರಾಮ್​ ಚರಣ್​ ಈಗ ಸೆಲ್ಫ್​ ಐಸೊಲೇಟ್​ ಆಗಿರುವ ಬಗ್ಗೆ ಸುದ್ದಿ ಕೇಳಿಬಂದಿದೆ. ಕಳೆದ ವರ್ಷ ಅವರಿಗೆ ಕೊರೊನಾ ವೈರಸ್​ ತಗುಲಿತ್ತು. ನಂತರ ಗುಣಮುಖರಾಗಿದ್ದರು. ಹಾಗಾಗಿ ಈ ಬಾರಿ ಅವರು ಹೆಚ್ಚು ಎಚ್ಚರಿಕೆ ವಹಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ

(Prabhas Mahesh Babu Ram Charan isolated themselves due to coronavirus second wave)

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?