AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ಪ್ರಭಾಸ್ ಈಗ ‘ದಿ ರಾಜಾ ಸಾಬ್’; ಹೇಗಿದೆ ನೋಡಿ ಫಸ್ಟ್ ಲುಕ್

ಮಾರುತಿ ಜೊತೆ ಪ್ರಭಾಸ್ ಸಿನಿಮಾ ಮಾಡಲಿದ್ದಾರೆ ಎಂಬುದು ಮೊದಲಿನಿಂದಲೂ ಹರಿದಾಡುತ್ತಿದ್ದ ಸುದ್ದಿ. ಈ ಬಗ್ಗೆ ಅಧಿಕೃತ ಘೋಷಣೆ ಆಗಿರಲಿಲ್ಲ. ಈಗ ಪ್ರಭಾಸ್ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ.

Prabhas: ಪ್ರಭಾಸ್ ಈಗ ‘ದಿ ರಾಜಾ ಸಾಬ್’; ಹೇಗಿದೆ ನೋಡಿ ಫಸ್ಟ್ ಲುಕ್
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jan 15, 2024 | 8:21 AM

Share

ನಟ ಪ್ರಭಾಸ್ (Prabhas) ಅವರು ಮಾಸ್ ಸಿನಿಮಾಗಳನ್ನು ಮಾಡಲು ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ‘ಸಲಾರ್’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಈಗ ಪ್ರಭಾಸ್ ಅವರು ನಿರ್ದೇಶಕ ಮಾರುತಿ ಜೊತೆ ಕೈ ಜೋಡಿಸುತ್ತಿದ್ದಾರೆ. ಸಂಕ್ರಾಂತಿ ಸಂದರ್ಭದಲ್ಲಿ ಈ ಚಿತ್ರದ ಫಸ್ಟ್​ ಲುಕ್ ಹಾಗೂ ಟೈಟಲ್ ರಿವೀಲ್ ಮಾಡಲಾಗಿದೆ. ‘ದಿ ರಾಜಾ ಸಾಬ್’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ. ಈ ಪೋಸ್ಟರ್ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಮಾರುತಿ ಜೊತೆ ಪ್ರಭಾಸ್ ಸಿನಿಮಾ ಮಾಡಲಿದ್ದಾರೆ ಎಂಬುದು ಮೊದಲಿನಿಂದಲೂ ಹರಿದಾಡುತ್ತಿದ್ದ ಸುದ್ದಿ. ಈ ಬಗ್ಗೆ ಅಧಿಕೃತ ಘೋಷಣೆ ಆಗಿರಲಿಲ್ಲ. ಈಗ ಪ್ರಭಾಸ್ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ. ‘ದಿ ರಾಜಾ ಸಾಬ್’ ಶೀರ್ಷಿಕೆ ಗಮನ ಸೆಳೆಯುತ್ತಿದೆ. ಈ ಸಿನಿಮಾ ರೊಮ್ಯಾಂಟಿಕ್ ಹಾರರ್ ಶೈಲಿಯಲ್ಲಿ ಮೂಡಿ ಬರುತ್ತಿದೆ ಅನ್ನೋದು ವಿಶೇಷ. ಪ್ರಯೋಗಾತ್ಮಕ ಸಿನಿಮಾದಲ್ಲಿ ನಟಿಸಲು ಪ್ರಭಾಸ್ ಉತ್ಸುಕರಾಗಿದ್ದಾರೆ. ಈ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಮೂಲಕ ಟಿಜಿ ವಿಶ್ವ ಪ್ರಸಾದ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಪ್ರಭಾಸ್ ಭೇಟಿ: ಕಾರಣವೇನು?

ಪ್ರಭಾಸ್ ಹುಟ್ಟೂರು ಭೀಮಾವರಂನಲ್ಲಿ ಈ ಚಿತ್ರದ ಪೋಸ್ಟರ್ ಅನಾವರಣಗೊಂಡಿದೆ. ಕಪ್ಪು ಬಣ್ಣದ ಶರ್ಟ್ ಹಾಗೂ ಲುಂಗಿ ಹಾಕಿ, ಕಲರ್​ಫುಲ್ ರಸ್ತೆಯಲ್ಲಿ ಪ್ರಭಾಸ್ ನಡೆದುಕೊಂಡು ಬರುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಶೀಘ್ರವೇ ಆರಂಭ ಆಗಲಿದೆ. ಈ ಸಿನಿಮಾ ತೆಲುಗು, ಕನ್ನಡ, ಹಿಂದಿ, ತಮಿಳು, ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ.  ‘ಸಲಾರ್’ ಚಿತ್ರದಿಂದ ಪ್ರಭಾಸ್ ಖ್ಯಾತಿ ಮತ್ತಷ್ಟು ಹೆಚ್ಚಿದೆ. ಈ ಕಾರಣಕ್ಕೆ ಚಿತ್ರವನ್ನು ಪ್ಯಾನ್ ಇಂಡಿಯಾದಲ್ಲಿ ರಿಲೀಸ್ ಮಾಡಲು ನಿರ್ಮಾಪಕರು ಆಸಕ್ತಿ ತೋರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ