Prabhas: ಪ್ರಭಾಸ್ ಈಗ ‘ದಿ ರಾಜಾ ಸಾಬ್’; ಹೇಗಿದೆ ನೋಡಿ ಫಸ್ಟ್ ಲುಕ್

ಮಾರುತಿ ಜೊತೆ ಪ್ರಭಾಸ್ ಸಿನಿಮಾ ಮಾಡಲಿದ್ದಾರೆ ಎಂಬುದು ಮೊದಲಿನಿಂದಲೂ ಹರಿದಾಡುತ್ತಿದ್ದ ಸುದ್ದಿ. ಈ ಬಗ್ಗೆ ಅಧಿಕೃತ ಘೋಷಣೆ ಆಗಿರಲಿಲ್ಲ. ಈಗ ಪ್ರಭಾಸ್ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ.

Prabhas: ಪ್ರಭಾಸ್ ಈಗ ‘ದಿ ರಾಜಾ ಸಾಬ್’; ಹೇಗಿದೆ ನೋಡಿ ಫಸ್ಟ್ ಲುಕ್
ಪ್ರಭಾಸ್
Follow us
|

Updated on: Jan 15, 2024 | 8:21 AM

ನಟ ಪ್ರಭಾಸ್ (Prabhas) ಅವರು ಮಾಸ್ ಸಿನಿಮಾಗಳನ್ನು ಮಾಡಲು ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ‘ಸಲಾರ್’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಈಗ ಪ್ರಭಾಸ್ ಅವರು ನಿರ್ದೇಶಕ ಮಾರುತಿ ಜೊತೆ ಕೈ ಜೋಡಿಸುತ್ತಿದ್ದಾರೆ. ಸಂಕ್ರಾಂತಿ ಸಂದರ್ಭದಲ್ಲಿ ಈ ಚಿತ್ರದ ಫಸ್ಟ್​ ಲುಕ್ ಹಾಗೂ ಟೈಟಲ್ ರಿವೀಲ್ ಮಾಡಲಾಗಿದೆ. ‘ದಿ ರಾಜಾ ಸಾಬ್’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ. ಈ ಪೋಸ್ಟರ್ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಮಾರುತಿ ಜೊತೆ ಪ್ರಭಾಸ್ ಸಿನಿಮಾ ಮಾಡಲಿದ್ದಾರೆ ಎಂಬುದು ಮೊದಲಿನಿಂದಲೂ ಹರಿದಾಡುತ್ತಿದ್ದ ಸುದ್ದಿ. ಈ ಬಗ್ಗೆ ಅಧಿಕೃತ ಘೋಷಣೆ ಆಗಿರಲಿಲ್ಲ. ಈಗ ಪ್ರಭಾಸ್ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ. ‘ದಿ ರಾಜಾ ಸಾಬ್’ ಶೀರ್ಷಿಕೆ ಗಮನ ಸೆಳೆಯುತ್ತಿದೆ. ಈ ಸಿನಿಮಾ ರೊಮ್ಯಾಂಟಿಕ್ ಹಾರರ್ ಶೈಲಿಯಲ್ಲಿ ಮೂಡಿ ಬರುತ್ತಿದೆ ಅನ್ನೋದು ವಿಶೇಷ. ಪ್ರಯೋಗಾತ್ಮಕ ಸಿನಿಮಾದಲ್ಲಿ ನಟಿಸಲು ಪ್ರಭಾಸ್ ಉತ್ಸುಕರಾಗಿದ್ದಾರೆ. ಈ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಮೂಲಕ ಟಿಜಿ ವಿಶ್ವ ಪ್ರಸಾದ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಪ್ರಭಾಸ್ ಭೇಟಿ: ಕಾರಣವೇನು?

ಪ್ರಭಾಸ್ ಹುಟ್ಟೂರು ಭೀಮಾವರಂನಲ್ಲಿ ಈ ಚಿತ್ರದ ಪೋಸ್ಟರ್ ಅನಾವರಣಗೊಂಡಿದೆ. ಕಪ್ಪು ಬಣ್ಣದ ಶರ್ಟ್ ಹಾಗೂ ಲುಂಗಿ ಹಾಕಿ, ಕಲರ್​ಫುಲ್ ರಸ್ತೆಯಲ್ಲಿ ಪ್ರಭಾಸ್ ನಡೆದುಕೊಂಡು ಬರುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಶೀಘ್ರವೇ ಆರಂಭ ಆಗಲಿದೆ. ಈ ಸಿನಿಮಾ ತೆಲುಗು, ಕನ್ನಡ, ಹಿಂದಿ, ತಮಿಳು, ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ.  ‘ಸಲಾರ್’ ಚಿತ್ರದಿಂದ ಪ್ರಭಾಸ್ ಖ್ಯಾತಿ ಮತ್ತಷ್ಟು ಹೆಚ್ಚಿದೆ. ಈ ಕಾರಣಕ್ಕೆ ಚಿತ್ರವನ್ನು ಪ್ಯಾನ್ ಇಂಡಿಯಾದಲ್ಲಿ ರಿಲೀಸ್ ಮಾಡಲು ನಿರ್ಮಾಪಕರು ಆಸಕ್ತಿ ತೋರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ