AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಹಾಲಿವುಡ್​ಗೆ ಹೋದ್ರು ಅಂತ ಖುಷಿಪಟ್ಟ ಫ್ಯಾನ್ಸ್​; ಅದೆಲ್ಲ ಸಾಧ್ಯವಿಲ್ಲ ಎಂದ ಮಿಷನ್​ ಇಂಪಾಸಿಬಲ್ ​ ನಿರ್ದೇಶಕ

ಟಾಮ್ ಕ್ರೂಸ್ ನಟನೆಯ ‘ಮಿಷನ್​ ಇಂಪಾಸಿಬಲ್​ 7’ ಸಿನಿಮಾದಲ್ಲಿ ಪ್ರಭಾಸ್​ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಹುಟ್ಟಿಕೊಂಡಿತ್ತು. ಇದಕ್ಕೆ ಸುಮ್ಮನಾಗದ ಅಭಿಮಾನಿಗಳು ಈ ವದಂತಿಗೆ ರೆಕ್ಕೆಪುಕ್ಕ ಎಲ್ಲವನ್ನೂ ಸೇರಿಸಿದ್ದರು.

ಪ್ರಭಾಸ್​ ಹಾಲಿವುಡ್​ಗೆ ಹೋದ್ರು ಅಂತ ಖುಷಿಪಟ್ಟ ಫ್ಯಾನ್ಸ್​; ಅದೆಲ್ಲ ಸಾಧ್ಯವಿಲ್ಲ ಎಂದ ಮಿಷನ್​ ಇಂಪಾಸಿಬಲ್ ​ ನಿರ್ದೇಶಕ
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: May 26, 2021 | 5:20 PM

Share

ನಟ ಪ್ರಭಾಸ್ ಟಾಲಿವುಡ್​ ಸಿನಿಮಾಗಳ ಜತೆಗೆ ಹಿಂದಿ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಬಾಹುಬಲಿ ತೆರೆಕಂಡ ನಂತರದಲ್ಲಿ ಬೇರೆ ಭಾಷೆಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಈಗ ಅವರು ಹಾಲಿವುಡ್​​ಗೆ ತೆರಳುತ್ತಿದ್ದಾರೆ ಎಂದು ಅಭಿಮಾನಿಗಳು ಸಂತಸಪಟ್ಟಿದ್ದರು. ಆದರೆ, ಇದೆಲ್ಲವೂ ಸುಳ್ಳು, ಅದೆಲ್ಲ ಸಾಧ್ಯವಿಲ್ಲ ಎಂದು ಖುದ್ದು ಹಾಲಿವುಡ್​ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

ಟಾಮ್ ಕ್ರೂಸ್ ನಟನೆಯ ‘ಮಿಷನ್​ ಇಂಪಾಸಿಬಲ್​ 7’ ಸಿನಿಮಾದಲ್ಲಿ ಪ್ರಭಾಸ್​ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಹುಟ್ಟಿಕೊಂಡಿತ್ತು. ಇದಕ್ಕೆ ಸುಮ್ಮನಾಗದ ಅಭಿಮಾನಿಗಳು ಈ ವದಂತಿಗೆ ರೆಕ್ಕೆಪುಕ್ಕ ಎಲ್ಲವನ್ನೂ ಸೇರಿಸಿದ್ದರು. ಈ ಸಿನಿಮಾದ ನಿರ್ದೇಶಕ ಕ್ರಿಸ್ಟಫರ್ ಮೆಕ್ವಾರಿ, ಪ್ರಭಾಸ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಿನಿಮಾದಲ್ಲಿ ನಟಿಸೋಕೆ ಪ್ರಭಾಸ್​ ಒಕೆ ಎಂದಿದ್ದಾರೆ ಎಂಬಿತ್ಯಾದಿ ಸುದ್ದಿಗಳನ್ನು ಹರಿಬಿಟ್ಟಿದ್ದರು.

ಕೆಲವರು ಈ ಸುದ್ದಿಯನ್ನು ನಿಜವೆಂದು ನಂಬಿದ್ದರು. ಅಷ್ಟೇ ಅಲ್ಲ, ನಮ್ಮ ನೆಚ್ಚಿನ ನಟ ಹಾಲಿವುಡ್​ಗೆ ಕಾಲಿಡುತ್ತಿದ್ದಾರೆ ಎಂದು ಸಂಭ್ರಮಿಸಿದ್ದರು. ಈ ಬಗ್ಗೆ ಕ್ರಿಸ್ಟಫರ್​ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಭಾಸ್​ ಟ್ಯಾಲೆಂಟ್​ ಇರುವ ವ್ಯಕ್ತಿ. ಆದರೆ ನಾವೆಂದೂ ಭೇಟಿ ಆಗಿಲ್ಲ. ಧನ್ಯವಾದಗಳು ಇಂಟರ್​ನೆಟ್​ ಎಂದು ಬರೆದುಕೊಂಡಿದ್ದಾರೆ.

ಆದಿಪುರುಷ್​ ಚಿತ್ರ ರಾಮಾಯಣ ಆಧರಿಸಿ ಸಿದ್ಧಗೊಳ್ಳುತ್ತಿರುವ ಚಿತ್ರ. ಈ ಸಿನಿಮಾದಲ್ಲಿ ರಾಮನಾಗಿ ಪ್ರಭಾಸ್​ ಕಾಣಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಸಿನಿಮಾ ತಂಡ ಪ್ರಭಾಸ್​ ಅವರ ರಾಮನ ಲುಕ್​ ರಿಲೀಸ್​ ಮಾಡಿತ್ತು. ​ರಾಧೆ ಶ್ಯಾಮ್ ಹಾಗೂ ಸಲಾರ್​ ಸಿನಿಮಾ ಕೆಲಸಗಳಲ್ಲೂ ಪ್ರಭಾಸ್ ಬ್ಯುಸಿ ಆಗಿದ್ದಾರೆ. ಈ ಎಲ್ಲಾ ಚಿತ್ರಗಳ ಕೆಲಸವನ್ನು ಸರಿದೂಗಿಸಿಕೊಂಡು ಸಾಗುತ್ತಿದ್ದಾರೆ ಪ್ರಭಾಸ್​.

ಇದನ್ನೂ ಓದಿ: Prabhas: ಆದಿಪುರುಷ್​ಗಾಗಿ ಬಾಡಿ ಬೆಳೆಸಲು ಸ್ಟಿರಾಯ್ಡ್​ ಬಳಸಿದ್ದಾರಾ ಪ್ರಭಾಸ್​? ಸಹನಟ ತೆರೆದಿಟ್ಟ ಸತ್ಯ ಇಲ್ಲಿದೆ

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ