AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಹಾಲಿವುಡ್​ಗೆ ಹೋದ್ರು ಅಂತ ಖುಷಿಪಟ್ಟ ಫ್ಯಾನ್ಸ್​; ಅದೆಲ್ಲ ಸಾಧ್ಯವಿಲ್ಲ ಎಂದ ಮಿಷನ್​ ಇಂಪಾಸಿಬಲ್ ​ ನಿರ್ದೇಶಕ

ಟಾಮ್ ಕ್ರೂಸ್ ನಟನೆಯ ‘ಮಿಷನ್​ ಇಂಪಾಸಿಬಲ್​ 7’ ಸಿನಿಮಾದಲ್ಲಿ ಪ್ರಭಾಸ್​ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಹುಟ್ಟಿಕೊಂಡಿತ್ತು. ಇದಕ್ಕೆ ಸುಮ್ಮನಾಗದ ಅಭಿಮಾನಿಗಳು ಈ ವದಂತಿಗೆ ರೆಕ್ಕೆಪುಕ್ಕ ಎಲ್ಲವನ್ನೂ ಸೇರಿಸಿದ್ದರು.

ಪ್ರಭಾಸ್​ ಹಾಲಿವುಡ್​ಗೆ ಹೋದ್ರು ಅಂತ ಖುಷಿಪಟ್ಟ ಫ್ಯಾನ್ಸ್​; ಅದೆಲ್ಲ ಸಾಧ್ಯವಿಲ್ಲ ಎಂದ ಮಿಷನ್​ ಇಂಪಾಸಿಬಲ್ ​ ನಿರ್ದೇಶಕ
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: May 26, 2021 | 5:20 PM

Share

ನಟ ಪ್ರಭಾಸ್ ಟಾಲಿವುಡ್​ ಸಿನಿಮಾಗಳ ಜತೆಗೆ ಹಿಂದಿ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಬಾಹುಬಲಿ ತೆರೆಕಂಡ ನಂತರದಲ್ಲಿ ಬೇರೆ ಭಾಷೆಗಳಲ್ಲೂ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಈಗ ಅವರು ಹಾಲಿವುಡ್​​ಗೆ ತೆರಳುತ್ತಿದ್ದಾರೆ ಎಂದು ಅಭಿಮಾನಿಗಳು ಸಂತಸಪಟ್ಟಿದ್ದರು. ಆದರೆ, ಇದೆಲ್ಲವೂ ಸುಳ್ಳು, ಅದೆಲ್ಲ ಸಾಧ್ಯವಿಲ್ಲ ಎಂದು ಖುದ್ದು ಹಾಲಿವುಡ್​ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

ಟಾಮ್ ಕ್ರೂಸ್ ನಟನೆಯ ‘ಮಿಷನ್​ ಇಂಪಾಸಿಬಲ್​ 7’ ಸಿನಿಮಾದಲ್ಲಿ ಪ್ರಭಾಸ್​ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಹುಟ್ಟಿಕೊಂಡಿತ್ತು. ಇದಕ್ಕೆ ಸುಮ್ಮನಾಗದ ಅಭಿಮಾನಿಗಳು ಈ ವದಂತಿಗೆ ರೆಕ್ಕೆಪುಕ್ಕ ಎಲ್ಲವನ್ನೂ ಸೇರಿಸಿದ್ದರು. ಈ ಸಿನಿಮಾದ ನಿರ್ದೇಶಕ ಕ್ರಿಸ್ಟಫರ್ ಮೆಕ್ವಾರಿ, ಪ್ರಭಾಸ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಿನಿಮಾದಲ್ಲಿ ನಟಿಸೋಕೆ ಪ್ರಭಾಸ್​ ಒಕೆ ಎಂದಿದ್ದಾರೆ ಎಂಬಿತ್ಯಾದಿ ಸುದ್ದಿಗಳನ್ನು ಹರಿಬಿಟ್ಟಿದ್ದರು.

ಕೆಲವರು ಈ ಸುದ್ದಿಯನ್ನು ನಿಜವೆಂದು ನಂಬಿದ್ದರು. ಅಷ್ಟೇ ಅಲ್ಲ, ನಮ್ಮ ನೆಚ್ಚಿನ ನಟ ಹಾಲಿವುಡ್​ಗೆ ಕಾಲಿಡುತ್ತಿದ್ದಾರೆ ಎಂದು ಸಂಭ್ರಮಿಸಿದ್ದರು. ಈ ಬಗ್ಗೆ ಕ್ರಿಸ್ಟಫರ್​ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಭಾಸ್​ ಟ್ಯಾಲೆಂಟ್​ ಇರುವ ವ್ಯಕ್ತಿ. ಆದರೆ ನಾವೆಂದೂ ಭೇಟಿ ಆಗಿಲ್ಲ. ಧನ್ಯವಾದಗಳು ಇಂಟರ್​ನೆಟ್​ ಎಂದು ಬರೆದುಕೊಂಡಿದ್ದಾರೆ.

ಆದಿಪುರುಷ್​ ಚಿತ್ರ ರಾಮಾಯಣ ಆಧರಿಸಿ ಸಿದ್ಧಗೊಳ್ಳುತ್ತಿರುವ ಚಿತ್ರ. ಈ ಸಿನಿಮಾದಲ್ಲಿ ರಾಮನಾಗಿ ಪ್ರಭಾಸ್​ ಕಾಣಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಸಿನಿಮಾ ತಂಡ ಪ್ರಭಾಸ್​ ಅವರ ರಾಮನ ಲುಕ್​ ರಿಲೀಸ್​ ಮಾಡಿತ್ತು. ​ರಾಧೆ ಶ್ಯಾಮ್ ಹಾಗೂ ಸಲಾರ್​ ಸಿನಿಮಾ ಕೆಲಸಗಳಲ್ಲೂ ಪ್ರಭಾಸ್ ಬ್ಯುಸಿ ಆಗಿದ್ದಾರೆ. ಈ ಎಲ್ಲಾ ಚಿತ್ರಗಳ ಕೆಲಸವನ್ನು ಸರಿದೂಗಿಸಿಕೊಂಡು ಸಾಗುತ್ತಿದ್ದಾರೆ ಪ್ರಭಾಸ್​.

ಇದನ್ನೂ ಓದಿ: Prabhas: ಆದಿಪುರುಷ್​ಗಾಗಿ ಬಾಡಿ ಬೆಳೆಸಲು ಸ್ಟಿರಾಯ್ಡ್​ ಬಳಸಿದ್ದಾರಾ ಪ್ರಭಾಸ್​? ಸಹನಟ ತೆರೆದಿಟ್ಟ ಸತ್ಯ ಇಲ್ಲಿದೆ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ