AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ನೀಡಿದ ಪ್ರಾಮಿಸ್ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸುತ್ತಿದ್ದಾರೆ ಪ್ರಭಾಸ್

‘ದಿ ರಾಜಾ ಸಾಬ್’ ಸಿನಿಮಾ ಶೂಟಿಂಗ್ ಕೂಡ ಸಾಗುತ್ತಿದೆ. ಈ ಚಿತ್ರದ ಶೂಟಿಂಗ್ ಬೇಗ ಪೂರ್ಣಗೊಳಿಸಿ ಈ ವರ್ಷವೇ ಚಿತ್ರವನ್ನು ತೆರೆಗೆ ತರಬೇಕು ಎನ್ನುವ ಆಲೋಚನೆ ಪ್ರಭಾಸ್​ ಅವರಿಗಿದೆ.

ಅಭಿಮಾನಿಗಳಿಗೆ ನೀಡಿದ ಪ್ರಾಮಿಸ್ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸುತ್ತಿದ್ದಾರೆ ಪ್ರಭಾಸ್
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jan 18, 2024 | 6:53 AM

Share

ನಟ ಪ್ರಭಾಸ್ (Prabhas) ಅವರು ‘ಬಾಹುಬಲಿ’ ಸಿನಿಮಾ ಬಳಿಕ ಸಿನಿಮಾ ಮಾಡೋ ವಿಚಾರದಲ್ಲಿ ಸ್ವಲ್ಪ ಸ್ಲೋ ಆದರು. ಈ ಕಾರಣಕ್ಕೆ ‘ಆದಿಪುರುಷ್’ ಸಿನಿಮಾ ಟ್ರೇಲರ್ ಲಾಂಚ್ ಸಂದರ್ಭದಲ್ಲಿ ಅವರು ಅಭಿಮಾನಿಗಳಿಗೆ ಒಂದು ಪ್ರಾಮಿಸ್ ಮಾಡಿದ್ದರು. ಪ್ರತಿ ವರ್ಷ ಎರಡರಿಂದ ಮೂರು ಸಿನಿಮಾ ರಿಲೀಸ್ ಮಾಡೋ ಭರವಸೆ ನೀಡಿದ್ದರು. ಕಳೆದ ವರ್ಷ ಅವರ ನಟನೆಯ ‘ಆದಿಪುರುಷ್’ ಹಾಗೂ ‘ಸಲಾರ್’ ಸಿನಿಮಾಗಳು ರಿಲೀಸ್ ಆದವು. ಈ ಪೈಕಿ ಒಂದು ಫ್ಲಾಪ್ ಹಾಗೂ ಒಂದು ಹಿಟ್. ಈ ವರ್ಷ ಹಾಗೂ ಮುಂದಿನ ವರ್ಷ ಎರಡು ಸಿನಿಮಾ ರಿಲೀಸ್ ಮಾಡುವ ಗುರಿಯನ್ನು ಪ್ರಭಾಸ್ ಹೊಂದಿದ್ದಾರೆ.

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಚಿತ್ರ ಈ ವರ್ಷ ಮೇ 9ರಂದು ರಿಲೀಸ್ ಆಗಲಿದೆ. ಇತ್ತೀಚೆಗೆ ಚಿತ್ರತಂಡ ಈ ಬಗ್ಗೆ ಮಾಹಿತಿ ನೀಡಿತ್ತು. ದೇಶದ ಪ್ರಮುಖ ನಗರಗಳಲ್ಲಿ ರೈಡರ್ಸ್​ಗಳು ಕಾಣಿಸಿಕೊಂಡು ‘ಕಲ್ಕಿ 2898 ಎಡಿ’ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಮಾಡಿದರು. ಈ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಳ್ಳುವ ಹಂತದಲ್ಲಿವೆ.

ಇದಲ್ಲದೆ, ‘ದಿ ರಾಜಾ ಸಾಬ್’ ಸಿನಿಮಾ ಶೂಟಿಂಗ್ ಕೂಡ ಪ್ರಗತಿಯಲ್ಲಿದೆ. ಈ ಚಿತ್ರದ ಶೂಟಿಂಗ್ ಬೇಗ ಪೂರ್ಣಗೊಳಿಸಿ ಈ ವರ್ಷವೇ ಚಿತ್ರವನ್ನು ತೆರೆಗೆ ತರಬೇಕು ಎನ್ನುವ ಆಲೋಚನೆ ಪ್ರಭಾಸ್​ ಅವರಲ್ಲಿದೆ. ನಿರ್ದೇಶಕರು ಹಾಗೂ ನಿರ್ಮಾಪಕರ ಬಳಿ ಈ ವಿಚಾರವನ್ನು ಅವರು ಪ್ರಸ್ತಾಪ ಮಾಡಿದ್ದಾರೆ. ಅದಕ್ಕೆ ತಕ್ಕಂತೆ ಸಿನಿಮಾ ಕೆಲಸಗಳನ್ನು ಮಾಡಲಾಗುತ್ತಿದೆ.

ಇದನ್ನೂ ಓದಿ: ‘ಸಲಾರ್’ ಒಟಿಟಿ ರಿಲೀಸ್ ದಿನಾಂಕ ಫೈನಲ್? ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..

ಮುಂದಿನ ವರ್ಷಕ್ಕೂ ಪ್ರಭಾಸ್ ಈಗಲೇ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಹನು ರಾಘವಪುಡಿ ಜೊತೆ ಪ್ರಭಾಸ್ ಸಿನಿಮಾ ಮಾಡುತ್ತಿದ್ದಾರೆ. ಇದು ವಾರ್ ಡ್ರಾಮಾ ಆಗಿರಲಿದೆ. ನಂತರ ಸಂದೀಪ್ ರೆಡ್ಡಿ ನಿರ್ದೇಶನದ ‘ಸ್ಪಿರಿಟ್’ ಚಿತ್ರದಲ್ಲೂ ಪ್ರಭಾಸ್ ನಟಿಸುತ್ತಿದ್ದಾರೆ. ಇದೆರಡೂ ಸಿನಿಮಾಗಳು ಮುಂದಿನ ವರ್ಷ ರಿಲೀಸ್ ಆಗಲಿವೆ. ಇದರ ಜೊತೆ ‘ಸಲಾರ್ 2’ ಸಿನಿಮಾ ಕೆಲಸಗಳು ಆರಂಭ ಆಗಲಿವೆ. ಹೀಗಾಗಿ ಪ್ರಭಾಸ್ ಅವರು ತಮ್ಮ ಪ್ರಾಮಿಸ್ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು