AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಧೆ ಶ್ಯಾಮ್’​ ಚಿತ್ರದ ಕನ್ನಡ ಹಾಡು ‘ಸಂಚಾರಿ..’ ರಿಲೀಸ್​; ಸಾಂಗ್​ ಅದ್ಭುತವಾಗಿದೆ ಎಂದ ಫ್ಯಾನ್ಸ್​

ರಾಧಾಕೃಷ್ಣ ಕುಮಾರ್​ ಅವರು ನಿರ್ದೇಶನ ಮಾಡಿರುವ ‘ರಾಧೆ ಶ್ಯಾಮ್​’ ಚಿತ್ರದಲ್ಲಿ ಪ್ರಭಾಸ್​-ಪೂಜಾ ಹೆಗ್ಡೆ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಜ.14ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ.

‘ರಾಧೆ ಶ್ಯಾಮ್’​ ಚಿತ್ರದ ಕನ್ನಡ ಹಾಡು ‘ಸಂಚಾರಿ..’ ರಿಲೀಸ್​; ಸಾಂಗ್​ ಅದ್ಭುತವಾಗಿದೆ ಎಂದ ಫ್ಯಾನ್ಸ್​
ಪೂಜಾ ಹೆಗ್ಡೆ, ಪ್ರಭಾಸ್
TV9 Web
| Edited By: |

Updated on:Dec 16, 2021 | 3:32 PM

Share

ತೆಲುಗು, ತಮಿಳು, ಹಿಂದಿ ಚಿತ್ರಗಳು ಕನ್ನಡಕ್ಕೆ ಡಬ್​ ಆಗಿ ತೆರೆಕಾಣುತ್ತಿವೆ. ಈ ಕಾರಣಕ್ಕೆ ಕನ್ನಡ ಅವತರಣಿಕೆಯ ಹಾಡುಗಳಿಗೂ ಬೇರೆಯದೇ ಆದ ಸಾಹಿತ್ಯ ಬರೆದು ರಿಲೀಸ್​ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ಅಲ್ಲದೆ, ಇದರ ಗುಣಮಟ್ಟದ ಬಗ್ಗೆಯೂ ಹೆಚ್ಚು ಕಾಳಜಿ ತೋರಿಸಲಾಗುತ್ತಿದೆ ಟಾಲಿವುಡ್​ನಲ್ಲಿ ಸಿದ್ಧಗೊಳ್ಳುತ್ತಿರುವ ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಚಿತ್ರವೂ ಈಗ ಕನ್ನಡದಲ್ಲಿ ಡಬ್​ ಆಗಿ ತೆರೆಗೆ ಬರುತ್ತಿದೆ. ಈ ಸಿನಿಮಾದ ‘ಸಂಚಾರಿ..’ ವಿಡಿಯೋ ಸಾಂಗ್​ ರಿಲೀಸ್​ ಆಗಿದೆ. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ.

ರಾಧಾಕೃಷ್ಣ ಕುಮಾರ್​ ಅವರು ನಿರ್ದೇಶನ ಮಾಡಿರುವ ‘ರಾಧೆ ಶ್ಯಾಮ್​’ ಚಿತ್ರದಲ್ಲಿ ಪ್ರಭಾಸ್​-ಪೂಜಾ ಹೆಗ್ಡೆ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಜ.14ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ‘ರಾಧೆ ಶ್ಯಾಮ್​’ ತೆರೆಕಾಣುತ್ತಿದೆ. ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಸಿನಿಮಾದ ಹಾಡುಗಳು ಕೂಡ ಸಾಕಷ್ಟು ಭರವಸೆ ಮೂಡಿಸಿವೆ.

ಇಂದು (ಡಿಸೆಂಬರ್ 16) ರಿಲೀಸ್​ ಆದ  ‘ರಾಧೆ ಶ್ಯಾಮ್​’ ಹಾಡು ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸತ್ಯ ಪ್ರಕಾಶ್​ ಕಂಠದಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಧನಂಜಯ್​ ರಂಜನ್​ ಸಾಹಿತ್ಯ ಬರೆದಿದ್ದಾರೆ. ಜಸ್ಟಿನ್​ ಪ್ರಭಾಕರನ್​ ಸಂಗೀತ ಸಂಯೋಜನೆ ಚಿತ್ರಕ್ಕೆ ಇದೆ.

ನಟ ಪ್ರಭಾಸ್​ ಅವರಿಗೆ ‘ಬಾಹುಬಲಿ’ ಚಿತ್ರದ ಬಳಿಕ ಹೊಸದೊಂದು ಇಮೇಜ್​ ಸಿಕ್ಕಿತು. ಆದರೆ ಈಗ ರಿಲೀಸ್​ ಆಗಲು ಸಿದ್ಧವಾಗಿರುವ ‘ರಾಧೆ ಶ್ಯಾಮ್​’ ಸಿನಿಮಾ ಮೂಲಕ ಆ ಇಮೇಜ್​ನಿಂದ ಹೊರಬರಲು ಅವರು ನಿರ್ಧರಿಸಿದಂತಿದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​, ಪೋಸ್ಟರ್, ಸಾಂಗ್​​ಗಳಲ್ಲಿ ಪ್ರಭಾಸ್​ ಅವರು ಲವರ್​ ಬಾಯ್​ ಆಗಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾ ತುಂಬ ಡಿಫರೆಂಟ್​ ಆಗಿ ಮೂಡಿಬಂದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಎಲ್ಲ ಕಾರಣಗಳಿಂದಾಗಿ ‘ರಾಧೆ ಶ್ಯಾಮ್​’ ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರದ ಕಥೆ ಏನು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಕುರಿತಾಗಿ ಚಿತ್ರದ ಗೀತರಚನೆಕಾರ ಕೃಷ್ಣ ಕಾಂತ್​ ಕೆಲವು ಸುಳಿವುಗಳನ್ನು ಕೊಟ್ಟಿದ್ದರು.

ಇದನ್ನೂ ಓದಿ: ‘ರಾಧೆ ಶ್ಯಾಮ್​’ ಚಿತ್ರದ ಕಥೆ ಲೀಕ್​; ಪ್ರಭಾಸ್​-ಪೂಜಾ ಹೆಗ್ಡೆ ಸಿನಿಮಾದ ಈ ಹಾಡಿನಲ್ಲಿ ಅಡಗಿದೆ ಸ್ಟೋರಿ 

Radhe Shyam Song: ರಿಲೀಸ್ ಆಯ್ತು ‘ರಾಧೆ ಶ್ಯಾಮ್’ ಹೊಸ ಹಾಡು; ಅರಿಜಿತ್ ಧ್ವನಿಗೆ ಜೀವ ತುಂಬಿದ ಪ್ರಭಾಸ್- ಪೂಜಾ ಹೆಗ್ಡೆ

Published On - 2:27 pm, Thu, 16 December 21

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​