AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಧೆ ಶ್ಯಾಮ್’​ ಚಿತ್ರದ ಕನ್ನಡ ಹಾಡು ‘ಸಂಚಾರಿ..’ ರಿಲೀಸ್​; ಸಾಂಗ್​ ಅದ್ಭುತವಾಗಿದೆ ಎಂದ ಫ್ಯಾನ್ಸ್​

ರಾಧಾಕೃಷ್ಣ ಕುಮಾರ್​ ಅವರು ನಿರ್ದೇಶನ ಮಾಡಿರುವ ‘ರಾಧೆ ಶ್ಯಾಮ್​’ ಚಿತ್ರದಲ್ಲಿ ಪ್ರಭಾಸ್​-ಪೂಜಾ ಹೆಗ್ಡೆ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಜ.14ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ.

‘ರಾಧೆ ಶ್ಯಾಮ್’​ ಚಿತ್ರದ ಕನ್ನಡ ಹಾಡು ‘ಸಂಚಾರಿ..’ ರಿಲೀಸ್​; ಸಾಂಗ್​ ಅದ್ಭುತವಾಗಿದೆ ಎಂದ ಫ್ಯಾನ್ಸ್​
ಪೂಜಾ ಹೆಗ್ಡೆ, ಪ್ರಭಾಸ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 16, 2021 | 3:32 PM

Share

ತೆಲುಗು, ತಮಿಳು, ಹಿಂದಿ ಚಿತ್ರಗಳು ಕನ್ನಡಕ್ಕೆ ಡಬ್​ ಆಗಿ ತೆರೆಕಾಣುತ್ತಿವೆ. ಈ ಕಾರಣಕ್ಕೆ ಕನ್ನಡ ಅವತರಣಿಕೆಯ ಹಾಡುಗಳಿಗೂ ಬೇರೆಯದೇ ಆದ ಸಾಹಿತ್ಯ ಬರೆದು ರಿಲೀಸ್​ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ಅಲ್ಲದೆ, ಇದರ ಗುಣಮಟ್ಟದ ಬಗ್ಗೆಯೂ ಹೆಚ್ಚು ಕಾಳಜಿ ತೋರಿಸಲಾಗುತ್ತಿದೆ ಟಾಲಿವುಡ್​ನಲ್ಲಿ ಸಿದ್ಧಗೊಳ್ಳುತ್ತಿರುವ ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಚಿತ್ರವೂ ಈಗ ಕನ್ನಡದಲ್ಲಿ ಡಬ್​ ಆಗಿ ತೆರೆಗೆ ಬರುತ್ತಿದೆ. ಈ ಸಿನಿಮಾದ ‘ಸಂಚಾರಿ..’ ವಿಡಿಯೋ ಸಾಂಗ್​ ರಿಲೀಸ್​ ಆಗಿದೆ. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ.

ರಾಧಾಕೃಷ್ಣ ಕುಮಾರ್​ ಅವರು ನಿರ್ದೇಶನ ಮಾಡಿರುವ ‘ರಾಧೆ ಶ್ಯಾಮ್​’ ಚಿತ್ರದಲ್ಲಿ ಪ್ರಭಾಸ್​-ಪೂಜಾ ಹೆಗ್ಡೆ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಜ.14ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ‘ರಾಧೆ ಶ್ಯಾಮ್​’ ತೆರೆಕಾಣುತ್ತಿದೆ. ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಸಿನಿಮಾದ ಹಾಡುಗಳು ಕೂಡ ಸಾಕಷ್ಟು ಭರವಸೆ ಮೂಡಿಸಿವೆ.

ಇಂದು (ಡಿಸೆಂಬರ್ 16) ರಿಲೀಸ್​ ಆದ  ‘ರಾಧೆ ಶ್ಯಾಮ್​’ ಹಾಡು ಸಾಕಷ್ಟು ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸತ್ಯ ಪ್ರಕಾಶ್​ ಕಂಠದಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಧನಂಜಯ್​ ರಂಜನ್​ ಸಾಹಿತ್ಯ ಬರೆದಿದ್ದಾರೆ. ಜಸ್ಟಿನ್​ ಪ್ರಭಾಕರನ್​ ಸಂಗೀತ ಸಂಯೋಜನೆ ಚಿತ್ರಕ್ಕೆ ಇದೆ.

ನಟ ಪ್ರಭಾಸ್​ ಅವರಿಗೆ ‘ಬಾಹುಬಲಿ’ ಚಿತ್ರದ ಬಳಿಕ ಹೊಸದೊಂದು ಇಮೇಜ್​ ಸಿಕ್ಕಿತು. ಆದರೆ ಈಗ ರಿಲೀಸ್​ ಆಗಲು ಸಿದ್ಧವಾಗಿರುವ ‘ರಾಧೆ ಶ್ಯಾಮ್​’ ಸಿನಿಮಾ ಮೂಲಕ ಆ ಇಮೇಜ್​ನಿಂದ ಹೊರಬರಲು ಅವರು ನಿರ್ಧರಿಸಿದಂತಿದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​, ಪೋಸ್ಟರ್, ಸಾಂಗ್​​ಗಳಲ್ಲಿ ಪ್ರಭಾಸ್​ ಅವರು ಲವರ್​ ಬಾಯ್​ ಆಗಿ ಕಾಣಿಸಿಕೊಂಡಿದ್ದಾರೆ. ಇಡೀ ಸಿನಿಮಾ ತುಂಬ ಡಿಫರೆಂಟ್​ ಆಗಿ ಮೂಡಿಬಂದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಎಲ್ಲ ಕಾರಣಗಳಿಂದಾಗಿ ‘ರಾಧೆ ಶ್ಯಾಮ್​’ ಚಿತ್ರದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರದ ಕಥೆ ಏನು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ಕುರಿತಾಗಿ ಚಿತ್ರದ ಗೀತರಚನೆಕಾರ ಕೃಷ್ಣ ಕಾಂತ್​ ಕೆಲವು ಸುಳಿವುಗಳನ್ನು ಕೊಟ್ಟಿದ್ದರು.

ಇದನ್ನೂ ಓದಿ: ‘ರಾಧೆ ಶ್ಯಾಮ್​’ ಚಿತ್ರದ ಕಥೆ ಲೀಕ್​; ಪ್ರಭಾಸ್​-ಪೂಜಾ ಹೆಗ್ಡೆ ಸಿನಿಮಾದ ಈ ಹಾಡಿನಲ್ಲಿ ಅಡಗಿದೆ ಸ್ಟೋರಿ 

Radhe Shyam Song: ರಿಲೀಸ್ ಆಯ್ತು ‘ರಾಧೆ ಶ್ಯಾಮ್’ ಹೊಸ ಹಾಡು; ಅರಿಜಿತ್ ಧ್ವನಿಗೆ ಜೀವ ತುಂಬಿದ ಪ್ರಭಾಸ್- ಪೂಜಾ ಹೆಗ್ಡೆ

Published On - 2:27 pm, Thu, 16 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ