AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಫ್ಯಾನ್​ ಆತ್ಮಹತ್ಯೆ ಪತ್ರಕ್ಕೆ ಬೆದರಿತಾ ಚಿತ್ರತಂಡ? ‘ರಾಧೆ ಶ್ಯಾಮ್​’​ ಕಡೆಯಿಂದ ಸಿಕ್ತು ಸೂಪರ್​ ಅಪ್​ಡೇಟ್​

Radhe Shyam first song: ‘ನನ್ನ ಸಾವನ್ನು ನೋಡಿದ ಬಳಿಕವಾದರೂ ರಾಧೆ ಶ್ಯಾಮ್​ ತಂಡದವರು ಅಪ್​ಡೇಟ್​ ನೀಡುತ್ತಾರೆ ಅಂತ ಭಾವಿಸಿದ್ದೇನೆ’ ಎಂದು ಪ್ರಭಾಸ್​ ಅಭಿಮಾನಿಯೊಬ್ಬ ಇತ್ತೀಚೆಗೆ ಪತ್ರ ಬರೆದಿದ್ದ. ಅದರ ಬೆನ್ನಲ್ಲೇ ಈ ಚಿತ್ರದ ಮೊದಲ ಸಾಂಗ್​ ರಿಲೀಸ್​ ಆಗುತ್ತಿದೆ.

ಪ್ರಭಾಸ್ ಫ್ಯಾನ್​ ಆತ್ಮಹತ್ಯೆ ಪತ್ರಕ್ಕೆ ಬೆದರಿತಾ ಚಿತ್ರತಂಡ? ‘ರಾಧೆ ಶ್ಯಾಮ್​’​ ಕಡೆಯಿಂದ ಸಿಕ್ತು ಸೂಪರ್​ ಅಪ್​ಡೇಟ್​
ಪ್ರಭಾಸ್​, ಪೂಜಾ ಹೆಗ್ಡೆ
TV9 Web
| Edited By: |

Updated on: Nov 14, 2021 | 4:25 PM

Share

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ಮತ್ತು ಕರಾವಳಿ ಚೆಲುವೆ ಪೂಜಾ ಹೆಗ್ಡೆ (Pooja Hegde) ಜೋಡಿಯ ‘ರಾಧೆ ಶ್ಯಾಮ್​’ (Radhe Shyam) ಸಿನಿಮಾದ ಅಪ್​ಡೇಟ್​ಗಾಗಿ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದರು. ಅಂಥವರಿಗೆಲ್ಲ ಈಗ ಗುಡ್​ ನ್ಯೂಸ್​ ಸಿಕ್ಕಿದೆ. ಚಿತ್ರತಂಡದಿಂದ ಏನೂ ಹೊಸ ವಿಚಾರ ತಿಳಿಯುತ್ತಿಲ್ಲ ಎಂದು ಬೇಸತ್ತಿದ್ದ ಓರ್ವ ಅಭಿಮಾನಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೂಡ ಪತ್ರ ಬರೆದಿದ್ದ. ಅದರ ಬೆನ್ನಲ್ಲೇ ‘ರಾಧೆ ಶ್ಯಾಮ್​’ ನಿರ್ಮಾಪಕರು ಹೊಸ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಅದಕ್ಕೆ ದಿನಾಂಕ ಕೂಡ ನಿಗದಿ ಆಗಿದೆ. ಸೋಮವಾರ (ನ.15) ಸಂಜೆ 5 ಗಂಟೆಗೆ ಸಾಂಗ್​ ರಿಲೀಸ್​ ಆಗಲಿದೆ ಎಂದು ‘ಯುವಿ ಕ್ರಿಯೇಷನ್ಸ್​’ ಅಧಿಕೃತ ಟ್ವಿಟರ್​ ಖಾತೆ ಮೂಲಕ ತಿಳಿಸಲಾಗಿದೆ.

ಅಭಿಮಾನಿಗಳು ಈ ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಳ್ಳಲು ಅನೇಕ ಕಾರಣಗಳಿವೆ. ಈಗಾಗಲೇ ಈ ಸಿನಿಮಾದ ಟೀಸರ್​ಗಳು ರಿಲೀಸ್​ ಆಗಿದ್ದು, ಚಿತ್ರದ ಬಗೆಗಿನ ಕುತೂಹಲ ಹೆಚ್ಚಿಸಿವೆ. ವಿಕ್ರಮಾದಿತ್ಯ ಎಂಬ ಪಾತ್ರವನ್ನು ಪ್ರಭಾಸ್​ ನಿಭಾಯಿಸುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ ಕನ್ನಡ, ಹಿಂದಿ, ಮಲಯಾಳಂ ಮತ್ತು ತಮಿಳಿನಲ್ಲೂ ಈ ಚಿತ್ರ ಬಿಡುಗಡೆ ಆಗಲಿದೆ. ಪ್ರಭಾಸ್​ ಅವರ ಈ ಹಿಂದಿನ ಎಲ್ಲ ಸಿನಿಮಾಗಳಿಗಿಂತಲೂ ‘ರಾಧೆ ಶ್ಯಾಮ್​’ ಭಿನ್ನವಾಗಿ ಮೂಡಿಬಂದಿದೆ ಎಂಬುದಕ್ಕೆ ಟೀಸರ್​ಗಳೇ ಸಾಕ್ಷಿ ಒದಗಿಸುತ್ತಿವೆ. ಲವರ್​ ಬಾಯ್​ ಗೆಟಪ್​ನಲ್ಲಿ ಪ್ರಭಾಸ್​ ರಂಜಿಸಲಿದ್ದಾರೆ.

ಅಭಿಮಾನಿಯ ಆತ್ಮಹತ್ಯೆ ಪತ್ರದಲ್ಲಿ ಏನಿತ್ತು?

‘ಈವರೆಗೆ ನಾನು ಯಾವುದೇ ಲೆಟರ್​ ಬರೆದಿಲ್ಲ. ಆದರೆ ಸೂಸೈಡ್​ ಲೆಟರ್​ ಬರೆಯುತ್ತೇನೆ ಎಂದು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಕೊನೇ ಪಕ್ಷ ನನ್ನ ಸಾವನ್ನು ನೋಡಿದ ಬಳಿಕವಾದರೂ ರಾಧೆ ಶ್ಯಾಮ್​ ತಂಡದವರು ಅಪ್​ಡೇಟ್​ ನೀಡುತ್ತಾರೆ ಎಂದುಕೊಂಡಿದ್ದೇನೆ. ಸಾಕಾಗಿ ಹೋಗಿದೆ. ಇನ್ಮೇಲೆ ಕೇಳುವುದಿಲ್ಲ. ನನ್ನ ಈ ಆತ್ಮಹತ್ಯೆ ನಿರ್ಧಾರಕ್ಕೆ ‘ಯುವಿ ಕ್ರಿಯೇಷನ್ಸ್​’ ಮತ್ತು ನಿರ್ದೇಶಕ ರಾಧಾ ಕೃಷ್ಣ ಕುಮಾರ್​ ಅವರೇ ಕಾರಣ’ ಎಂದು ಪ್ರಭಾಸ್​ ಅವರ ಹುಚ್ಚು ಅಭಿಮಾನಿಯು ಸೂಸೈಡ್​​ ಲೆಟರ್​ನಲ್ಲಿ ಬರೆದಿದ್ದ. ಅದು ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿತ್ತು.

ಪ್ರಭಾಸ್​ ಕೈಯಲ್ಲಿವೆ ಹಲವು ಚಿತ್ರಗಳು:

‘ಬಾಹುಬಲಿ’ ಯಶಸ್ಸಿನ ಬಳಿಕ ಪ್ರಭಾಸ್ ಪ್ಯಾನ್​ ಇಂಡಿಯಾ ಸ್ಟಾರ್ ಆಗಿ ಬೆಳೆದರು. ಆ ನಂತರ ಅವರು ಅಭಿನಯಿಸಿದ ‘ಸಾಹೋ’ ಸಿನಿಮಾ ಅಷ್ಟೇನೂ ಸದ್ದು ಮಾಡಲಿಲ್ಲ. ಹಾಗಂತ ಅವರಿಗೆ ಇರುವ ಬೇಡಿಕೆ​ ಕಿಂಚಿತ್ತೂ ಕಡಿಮೆ ಆಗಲಿಲ್ಲ. ಈಗ ಪ್ರಭಾಸ್​ ಹಲವು ಚಿತ್ರಗಳಲ್ಲಿ ತೊಡಗಿಕೊಂಡಿದ್ದಾರೆ. ಓಂ ರಾವುತ್​ ನಿರ್ದೇಶನದ ‘ಆದಿಪುರುಷ್​’, ಪ್ರಶಾಂತ್ ನೀಲ್​ ನಿರ್ದೇಶನದ ‘ಸಲಾರ್​’, ರಾಧಾ ಕೃಷ್ಣ ಕುಮಾರ್​ ನಿರ್ದೇಶನದ ‘ರಾಧೆ ಶ್ಯಾಮ್​’ ಸಿನಿಮಾಗಳು ಭಾರಿ ನಿರೀಕ್ಷೆ ಮೂಡಿಸಿವೆ. 2022ರ ಜ.14ರಂದು ‘ರಾಧೆ ಶ್ಯಾಮ್​’ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ಪ್ರಭಾಸ್​ ಹುಟ್ಟುಹಬ್ಬದ ದಿನವೇ ಫ್ಯಾನ್ಸ್​ಗೆ ಬೇಸರ ಮೂಡಿಸಿದ ಪ್ರಶಾಂತ್​ ನೀಲ್​; ‘ಸಲಾರ್’​ ಟೀಮ್​ ಎಡವಿದ್ದೆಲ್ಲಿ?

Prabhas: ‘ಸಲಾರ್​’ ವಿಡಿಯೋ ಲೀಕ್​: ಕಿಡಿಗೇಡಿಗಳ ಕೆಲಸದಿಂದ ಪ್ರಭಾಸ್​ ಅಭಿಮಾನಿಗಳಿಗೆ ಪದೇಪದೇ ನಿರಾಸೆ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್