AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಷ್ಟು ಒಳ್ಳೇ ಹುಡುಗನಿಗೆ ಇನ್ನೂ ಯಾಕೆ ಮದುವೆ ಆಗಿಲ್ಲ’; ಪ್ರೇಮಿಗಳ ದಿನವೇ ಪೂಜಾ ಹೆಗ್ಡೆ ನೇರ ಪ್ರಶ್ನೆ

ಪ್ರಭಾಸ್​ ವೃತ್ತಿಜೀವನದಲ್ಲಿ ‘ರಾಧೆ ಶ್ಯಾಮ್​’ ತುಂಬ ಡಿಫರೆಂಟ್​ ಆದ ಸಿನಿಮಾ ಎನ್ನಲಾಗಿದೆ. ಆ ಕಾರಣದಿಂದ ಈ ಚಿತ್ರದ ಮೇಲೆ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಇಷ್ಟು ಒಳ್ಳೇ ಹುಡುಗನಿಗೆ ಇನ್ನೂ ಯಾಕೆ ಮದುವೆ ಆಗಿಲ್ಲ’; ಪ್ರೇಮಿಗಳ ದಿನವೇ ಪೂಜಾ ಹೆಗ್ಡೆ ನೇರ ಪ್ರಶ್ನೆ
ಪೂಜಾ ಹೆಗ್ಡೆ, ಪ್ರಭಾಸ್
TV9 Web
| Edited By: |

Updated on: Feb 14, 2022 | 5:01 PM

Share

ನಟ ಪ್ರಭಾಸ್​ (Prabhas) ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ‘ಸಲಾರ್​’, ‘ಆದಿಪುರುಷ್​​’, ‘ರಾಧೆ ಶ್ಯಾಮ್​’ ಸೇರಿದಂತೆ ಅನೇಕ ಚಿತ್ರಗಳು ಅವರ ಕೈಯಲ್ಲಿವೆ. ಈಗ ಅವರಿಗೆ 42 ವರ್ಷ ವಯಸ್ಸು. ಹಾಗಿದ್ದರೂ ಪ್ರಭಾಸ್​ ಮದುವೆ ಆಗಿಲ್ಲ. ನಟಿ ಅನುಷ್ಕಾ ಶೆಟ್ಟಿ ಜೊತೆ ಅವರ ಹೆಸರು ತಳುಕು ಹಾಕಿಕೊಂಡಿತ್ತಾದರೂ ಮದುವೆ ಬಗ್ಗೆ ಏನೂ ಪ್ರಸ್ತಾಪ ಆಗಲೇ ಇಲ್ಲ. ಚಿತ್ರರಂಗದಲ್ಲಿ ಪ್ರಭಾಸ್​ಗೆ ಒಳ್ಳೆಯ ಇಮೇಜ್​ ಇದೆ. ‘ಇಷ್ಟು ಒಳ್ಳೆಯ ವ್ಯಕ್ತಿ ಯಾಕೆ ಇನ್ನೂ ಮದುವೆ ಆಗಿಲ್ಲ’ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಇರಬಹುದು. ಅದೇ ಪ್ರಶ್ನೆಯನ್ನು ನಟಿ ಪೂಜಾ ಹೆಗ್ಡೆ (Pooja Hegde) ಕೂಡ ಕೇಳಿದ್ದಾರೆ. ಆದರೆ ಅವರು ಈ ಪ್ರಶ್ನೆ ಎತ್ತಿರುವುದು ರಿಯಲ್​ ಲೈಫ್​ನಲ್ಲಿ ಅಲ್ಲ. ಪೂಜಾ ಹೆಗ್ಡೆ ಮತ್ತು ಪ್ರಭಾಸ್​ ಜೊತೆಯಾಗಿ ‘ರಾಧೆ ಶ್ಯಾಮ್​’ (Radhe Shyam Movie) ಚಿತ್ರದಲ್ಲಿ ನಟಿಸಿದ್ದಾರೆ. ಪ್ರೇಮಿಗಳ ದಿನದ ಪ್ರಯುಕ್ತ ಈ ಸಿನಿಮಾದಿಂದ ಒಂದು ಗ್ಲಿಂಪ್ಸ್​ ಬಿಡುಗಡೆ ಮಾಡಲಾಗಿದೆ. ಆ ವಿಡಿಯೋದಲ್ಲಿ ಹೀಗೊಂದು ಡೈಲಾಗ್​ ಹೈಲೈಟ್​ ಆಗಿದೆ. ಅದನ್ನು ಪ್ರಭಾಸ್​ ಅವರ ರಿಯಲ್​ ಲೈಫ್​ ವ್ಯಕ್ತಿತ್ವಕ್ಕೂ ಅನ್ವಯಿಸಬಹುದು.

ಇಂದು (ಫೆ.14) ಪ್ರೇಮಿಗಳ ದಿನ. ಆ ಪ್ರಯುಕ್ತ ಅನೇಕ ಚಿತ್ರತಂಡಗಳು ಸಾಂಗ್​, ಪೋಸ್ಟರ್​, ಟೀಸರ್​ ಬಿಡುಗಡೆ ಮಾಡಿವೆ. ಅದೇ ರೀತಿ ‘ರಾಧೆ ಶ್ಯಾಮ್​’ ತಂಡದಿಂದ ಗ್ಲಿಂಪ್ಸ್​ ಬಿಡುಗಡೆ ಮಾಡಲಾಗಿದೆ. ಸಿನಿಮಾದಲ್ಲಿನ ಅನೇಕ ಸುಂದರ ದೃಶ್ಯಗಳನ್ನು ಜೋಡಿಸಿ ಈ ಗ್ಲಿಂಪ್ಸ್​ ಕಟ್ಟಿಕೊಡಲಾಗಿದೆ. ಅದರಲ್ಲಿ ಪ್ರಭಾಸ್​ಗೆ ಪೂಜಾ ಈ ರೀತಿ ಕೇಳುತ್ತಾರೆ. ‘ಚೆನ್ನಾಗಿ ಮಾತನಾಡುತ್ತೀಯ.. ಇಷ್ಟು ಒಳ್ಳೆಯ ಹುಡುಗನಿಗೆ ಮದುವೆ ಯಾಕೆ ಆಗಿಲ್ಲ ಇನ್ನೂ?’ ಎಂದು ಪೂಜಾ ಹೇಳಿದ ಡೈಲಾಗ್​ ಈಗ ಹೈಲೈಟ್​ ಆಗಿದೆ.

ಪ್ರಭಾಸ್​ ವೃತ್ತಿಜೀವನದಲ್ಲಿ ‘ರಾಧೆ ಶ್ಯಾಮ್​’ ತುಂಬ ಡಿಫರೆಂಟ್​ ಆದ ಸಿನಿಮಾ ಎನ್ನಲಾಗಿದೆ. ಆ ಕಾರಣದಿಂದ ಈ ಚಿತ್ರದ ಮೇಲೆ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಲವರ್​ ಬಾಯ್​ ಗೆಟಪ್​ನಲ್ಲಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಟ್ರೇಲರ್​ ಮತ್ತು ಸಾಂಗ್ಸ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟು ಹೊತ್ತಿಗಾಗಲೇ ‘ರಾಧೆ ಶ್ಯಾಮ್​’ ಚಿತ್ರ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿತು. ಈಗ ಮಾರ್ಚ್​ 11ರಂದು ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಮಾಪಕರು ತೀರ್ಮಾನಿಸಿದ್ದಾರೆ. ರಾಧಾಕೃಷ್ಣ ಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ತೆಲುಗಿನಲ್ಲಿ ತಯಾರಾಗಿರುವ ‘ರಾಧೆ ಶ್ಯಾಮ್​’ ಚಿತ್ರ ಕನ್ನಡ, ಮಲಯಾಳಂ, ಹಿಂದಿ, ತಮಿಳು ಭಾಷೆಗಳಿಗೆ ಡಬ್​ ಆಗಿ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ:

‘ಸಲಾರ್​’ಗೂ ‘ಕೆಜಿಎಫ್​’ ಫಾರ್ಮುಲಾ; ಎರಡು ಪಾರ್ಟ್​​ನಲ್ಲಿ ಬರಲಿದೆ ಪ್ರಭಾಸ್​-ಪ್ರಶಾಂತ್​ ನೀಲ್​ ಸಿನಿಮಾ

ಪ್ರಭಾಸ್​ ಅಭಿಮಾನಿಗಳಿಗೆ ಶುರುವಾಗಿದೆ ಹೊಸ ಚಿಂತೆ; ‘ರಾಧೆ ಶ್ಯಾಮ್​’ ಚಿತ್ರಕ್ಕೆ ಕೈ ಕೊಡಬಹುದಾ ಗ್ರಾಫಿಕ್ಸ್​?

ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ
2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ
ಇಂದು ಈ ರಾಶಿಯವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಯಶಸ್ಸು
ಇಂದು ಈ ರಾಶಿಯವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಯಶಸ್ಸು
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು